Homeಮುಖಪುಟಯುಪಿ ಚುನಾವಣೆ: 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ನೀಡಿದ ಬಿಜೆಪಿ

ಯುಪಿ ಚುನಾವಣೆ: 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ನೀಡಿದ ಬಿಜೆಪಿ

- Advertisement -
- Advertisement -

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಆಡಳಿತರೂಢ ಬಿಜೆಪಿ ಬೂತ್ ಮಟ್ಟದಲ್ಲಿ ಕಾರ್ಯ ನಿರ್ವಹಿಸುವುದು ಮಹತ್ವದ ಕೆಲಸ ಎಂದಿದೆ. ಹೀಗಾಗಿ ದೀಪಾವಳಿ ನೆಪದಲ್ಲಿ ತನ್ನ 30 ಲಕ್ಷ ಬೂತ್ ಮಟ್ಟದ ಕಾರ್ಯಕರ್ತರಿಗೆ ಬಿಜೆಪಿ ದೀಪಾವಳಿ ಉಡುಗೊರೆಯನ್ನು ಕಳುಹಿಸಿದೆ.

ಉತ್ತರ ಪ್ರದೇಶ ರಾಜ್ಯದಲ್ಲಿ 1.63 ಲಕ್ಷ ಬೂತ್‌ಗಳಿದ್ದು, 1.5 ಲಕ್ಷಕ್ಕೂ ಹೆಚ್ಚು ಬೂತ್‌ಗಳಲ್ಲಿ ಬಿಜೆಪಿ 20-20 ಸದಸ್ಯರ ಸಮಿತಿಗಳನ್ನು ರಚಿಸಿದೆ.

“ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುವ ಬಿಜೆಪಿ ಕುಟುಂಬದಲ್ಲಿ  ಬೂತ್ ಮಟ್ಟದ ಕಾರ್ಯಕರ್ತರು ಪ್ರಮುಖ ಕೊಂಡಿಯಾಗಿದ್ದಾರೆ.  ದೀಪಾವಳಿಯಂದು ಎಲ್ಲರಿಗೂ ಉಡುಗೊರೆಗಳನ್ನು ನೀಡುವ ಸಂಪ್ರದಾಯವಿದೆ. ಹೀಗಾಗಿ ಪಕ್ಷವು ಈ ಬಾರಿ 30 ಲಕ್ಷಕ್ಕೂ ಹೆಚ್ಚು ಬೂತ್ ಕಾರ್ಯಕರ್ತರಿಗೆ ಉಡುಗೊರೆಗಳನ್ನು ಕಳುಹಿಸಿದೆ” ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ವಿಜಯ್ ಬಹದ್ದೂರ್ ಪಾಠಕ್ ಹೇಳಿದ್ದಾರೆ.

ಇದನ್ನೂ ಓದಿ: ಟಿ20 ಕ್ರಿಕೆಟ್: ಪಾಕ್ ಜಯ ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ-ಯೋಗಿ ಆದಿತ್ಯನಾಥ್

ಈ ಬಾರಿ ಬಾಗಿಲಿಗೆ ಹಾಕುವ ತೋರಣಗಳು ಮತ್ತು ಕಮಲದ ಆಕಾರದ ಮಣ್ಣಿನ ದೀಪವನ್ನು ಒಳಗೊಂಡಿರುವ ಉಡುಗೊರೆ ಪೆಟ್ಟಿಗೆಗಳನ್ನು ಎಲ್ಲಾ ಬೂತ್ ಸಮಿತಿಗಳ ಸದಸ್ಯರಿಗೆ ಕಳುಹಿಸಲಾಗಿದೆ.

ಈ ಉಡುಗೊರೆಗಳು ಚುನಾವಣಾ ಪ್ರಚಾರದ ಭಾಗವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಪಾಠಕ್, “ಸದ್ಯಕ್ಕೆ ಪಕ್ಷದ ಪ್ರಮುಖ ಗಮನವೇ 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಾಗಿದೆ. ಹೀಗಾಗಿ ಜನರ ಬಳಿಗೆ ಚುನಾವಣಾ ಚಿಹ್ನೆಯನ್ನು ತೆಗೆದುಕೊಂಡು ಹೋಗುವುದು ಸಹಜ ಪ್ರಕ್ರಿಯೆ” ಎಂದು ಹೇಳಿದ್ದಾರೆ.

“ಜನರು ಕಮಲದ ದೀಪವನ್ನು ಬೆಳಗಿಸಿದಾಗ, ಕತ್ತಲೆ ಮಾತ್ರ ಮಾಯವಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಾರಂಭಿಸಿದ ಅಭಿವೃದ್ಧಿ ಯೋಜನೆಗಳಲ್ಲಿ ನಂಬಿಕೆ ಬಲಗೊಳ್ಳುತ್ತದೆ” ಎಂದು ಪಾಠಕ್ ಹೇಳಿದರು.

2017ರ ವಿಧಾನಸಭಾ ಚುನಾವಣೆಯಲ್ಲಿ ಆಗಿನ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೂತ್ ನಿರ್ವಹಣಾ ಸೂತ್ರವನ್ನು ಜಾರಿಗೆ ತಂದರು. ಜೊತೆಗೆ ಬೂತ್ ಮಟ್ಟದ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದ್ದರು.


ಇದನ್ನೂ ಓದಿ: ಮತೀಯ ಸಂಕೇತಗಳಿಗೆ ಎನ್‌ಎಸ್‌ಡಿ ಇನ್‌ಸ್ಟಾಗ್ರಾಮ್‌ ಖಾತೆ ದುರ್ಬಳಕೆ: 272 ಜೀವಪರರ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಜೆಪಿ ಉಡುಗೊರೆ ಹಂಚುತ್ತಿರುವುದು ಅವರ ಅಪ್ಪನ ಆಸ್ತಿಯಿಂದಲ್ಲ.
    ಸರಕಾರದ ಬೊಕ್ಕಸದಿಂದ….
    ಸರಕಾರಕ್ಕೆ ತೆರಿಗೆ ಕಟ್ಟುತ್ತಿರುವುದು ಬಿಜೆಪಿ ಮಾತ್ರವಲ್ಲ.
    ಸರ್ವ ಜನರೂ ಸರಕಾರಕ್ಕೆ ಹಲವು ರೂಪದಲ್ಲಿ ನಮ್ಮದೇ ಆದ ಕೊಡುಗೆಯನ್ನು ನೀಡುತ್ತಿರುವಾಗ ಸರಕಾರ ಎಲ್ಲರಿಗೂ ಸಮಾನ ರೀತಿಯಲ್ಲಿ ಉಡುಗೊರೆ ನೀಡಬೇಕು

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...