Homeಮುಖಪುಟಯುಪಿ ಚುನಾವಣೆ: 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ನೀಡಿದ ಬಿಜೆಪಿ

ಯುಪಿ ಚುನಾವಣೆ: 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ನೀಡಿದ ಬಿಜೆಪಿ

- Advertisement -
- Advertisement -

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಆಡಳಿತರೂಢ ಬಿಜೆಪಿ ಬೂತ್ ಮಟ್ಟದಲ್ಲಿ ಕಾರ್ಯ ನಿರ್ವಹಿಸುವುದು ಮಹತ್ವದ ಕೆಲಸ ಎಂದಿದೆ. ಹೀಗಾಗಿ ದೀಪಾವಳಿ ನೆಪದಲ್ಲಿ ತನ್ನ 30 ಲಕ್ಷ ಬೂತ್ ಮಟ್ಟದ ಕಾರ್ಯಕರ್ತರಿಗೆ ಬಿಜೆಪಿ ದೀಪಾವಳಿ ಉಡುಗೊರೆಯನ್ನು ಕಳುಹಿಸಿದೆ.

ಉತ್ತರ ಪ್ರದೇಶ ರಾಜ್ಯದಲ್ಲಿ 1.63 ಲಕ್ಷ ಬೂತ್‌ಗಳಿದ್ದು, 1.5 ಲಕ್ಷಕ್ಕೂ ಹೆಚ್ಚು ಬೂತ್‌ಗಳಲ್ಲಿ ಬಿಜೆಪಿ 20-20 ಸದಸ್ಯರ ಸಮಿತಿಗಳನ್ನು ರಚಿಸಿದೆ.

“ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುವ ಬಿಜೆಪಿ ಕುಟುಂಬದಲ್ಲಿ  ಬೂತ್ ಮಟ್ಟದ ಕಾರ್ಯಕರ್ತರು ಪ್ರಮುಖ ಕೊಂಡಿಯಾಗಿದ್ದಾರೆ.  ದೀಪಾವಳಿಯಂದು ಎಲ್ಲರಿಗೂ ಉಡುಗೊರೆಗಳನ್ನು ನೀಡುವ ಸಂಪ್ರದಾಯವಿದೆ. ಹೀಗಾಗಿ ಪಕ್ಷವು ಈ ಬಾರಿ 30 ಲಕ್ಷಕ್ಕೂ ಹೆಚ್ಚು ಬೂತ್ ಕಾರ್ಯಕರ್ತರಿಗೆ ಉಡುಗೊರೆಗಳನ್ನು ಕಳುಹಿಸಿದೆ” ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ವಿಜಯ್ ಬಹದ್ದೂರ್ ಪಾಠಕ್ ಹೇಳಿದ್ದಾರೆ.

ಇದನ್ನೂ ಓದಿ: ಟಿ20 ಕ್ರಿಕೆಟ್: ಪಾಕ್ ಜಯ ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ-ಯೋಗಿ ಆದಿತ್ಯನಾಥ್

ಈ ಬಾರಿ ಬಾಗಿಲಿಗೆ ಹಾಕುವ ತೋರಣಗಳು ಮತ್ತು ಕಮಲದ ಆಕಾರದ ಮಣ್ಣಿನ ದೀಪವನ್ನು ಒಳಗೊಂಡಿರುವ ಉಡುಗೊರೆ ಪೆಟ್ಟಿಗೆಗಳನ್ನು ಎಲ್ಲಾ ಬೂತ್ ಸಮಿತಿಗಳ ಸದಸ್ಯರಿಗೆ ಕಳುಹಿಸಲಾಗಿದೆ.

ಈ ಉಡುಗೊರೆಗಳು ಚುನಾವಣಾ ಪ್ರಚಾರದ ಭಾಗವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಪಾಠಕ್, “ಸದ್ಯಕ್ಕೆ ಪಕ್ಷದ ಪ್ರಮುಖ ಗಮನವೇ 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಾಗಿದೆ. ಹೀಗಾಗಿ ಜನರ ಬಳಿಗೆ ಚುನಾವಣಾ ಚಿಹ್ನೆಯನ್ನು ತೆಗೆದುಕೊಂಡು ಹೋಗುವುದು ಸಹಜ ಪ್ರಕ್ರಿಯೆ” ಎಂದು ಹೇಳಿದ್ದಾರೆ.

“ಜನರು ಕಮಲದ ದೀಪವನ್ನು ಬೆಳಗಿಸಿದಾಗ, ಕತ್ತಲೆ ಮಾತ್ರ ಮಾಯವಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಾರಂಭಿಸಿದ ಅಭಿವೃದ್ಧಿ ಯೋಜನೆಗಳಲ್ಲಿ ನಂಬಿಕೆ ಬಲಗೊಳ್ಳುತ್ತದೆ” ಎಂದು ಪಾಠಕ್ ಹೇಳಿದರು.

2017ರ ವಿಧಾನಸಭಾ ಚುನಾವಣೆಯಲ್ಲಿ ಆಗಿನ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೂತ್ ನಿರ್ವಹಣಾ ಸೂತ್ರವನ್ನು ಜಾರಿಗೆ ತಂದರು. ಜೊತೆಗೆ ಬೂತ್ ಮಟ್ಟದ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದ್ದರು.


ಇದನ್ನೂ ಓದಿ: ಮತೀಯ ಸಂಕೇತಗಳಿಗೆ ಎನ್‌ಎಸ್‌ಡಿ ಇನ್‌ಸ್ಟಾಗ್ರಾಮ್‌ ಖಾತೆ ದುರ್ಬಳಕೆ: 272 ಜೀವಪರರ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಜೆಪಿ ಉಡುಗೊರೆ ಹಂಚುತ್ತಿರುವುದು ಅವರ ಅಪ್ಪನ ಆಸ್ತಿಯಿಂದಲ್ಲ.
    ಸರಕಾರದ ಬೊಕ್ಕಸದಿಂದ….
    ಸರಕಾರಕ್ಕೆ ತೆರಿಗೆ ಕಟ್ಟುತ್ತಿರುವುದು ಬಿಜೆಪಿ ಮಾತ್ರವಲ್ಲ.
    ಸರ್ವ ಜನರೂ ಸರಕಾರಕ್ಕೆ ಹಲವು ರೂಪದಲ್ಲಿ ನಮ್ಮದೇ ಆದ ಕೊಡುಗೆಯನ್ನು ನೀಡುತ್ತಿರುವಾಗ ಸರಕಾರ ಎಲ್ಲರಿಗೂ ಸಮಾನ ರೀತಿಯಲ್ಲಿ ಉಡುಗೊರೆ ನೀಡಬೇಕು

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...