Homeಮುಖಪುಟಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ಹೊಟ್ಟೆನೋವು, ರಕ್ತಸ್ರಾವ ಸೇರಿದಂತೆ ಗರ್ಭಧಾರಣೆ ಸಂಬಂಧಿತ ತೊಂದರೆಗಳ ಹಿನ್ನೆಲೆ ಯುವತಿ ಮೂರು ದಿನಗಳಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದಲ್ಲಿ ಜಾರಿಯಾಗಿರುವ ಹೊಸ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮಹಿಳೆಯ ಪತಿ ಮತ್ತು ಪತಿಯ ಸಹೋದರನನ್ನು ಬಂಧಿಸಿದ ನಂತರ ಯುವ ಗರ್ಭಿಣಿ ಯುವತಿಯನ್ನು ಸರ್ಕಾರಿ ಆಶ್ರಯ ತಾಣದಲ್ಲಿ ಇರಿಸಲಾಗಿದೆ.  ಆದರೆ, ಹೊಟ್ಟೆನೋವು, ರಕ್ತಸ್ರಾವ ಸೇರಿದಂತೆ ಗರ್ಭಧಾರಣೆ ಸಂಬಂಧಿತ ತೊಂದರೆಗಳ ಹಿನ್ನೆಲೆ  ಮೂರು ದಿನಗಳಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೊರಾದಾಬಾದ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, 22 ವರ್ಷದ ಹಿಂದೂ ಯುವತಿ ಜುಲೈನಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮದುವೆಯಾಗಿ ಮತಾಂತರಗೊಂಡಿದ್ದರು. ಈ ದಂಪತಿ ಡಿಸೆಂಬರ್ 5 ರಂದು ಮದುವೆಯನ್ನು ನೋಂದಾಯಿಸಲು ಹೋಗಿದ್ದಾಗ, ಬಜರಂಗದಳದ ಕಾರ್ಯಕರ್ತರು ಆಕೆಯ ಪತಿ ಮತ್ತು ಪತಿಯ ಸಹೋದರನನ್ನು ಪೊಲೀಸರಿಗೆ ಒಪ್ಪಿಸಿ ಈಕೆಯನ್ನು ಎಳೆದೊಯ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ವಿವಾಹಕ್ಕಾಗಿ ಮತಾಂತರ ಸೇರಿದಂತೆ ಮೋಸದ ಮತ್ತು ಬಲವಂತದ ಮತಾಂತರಗಳನ್ನು ನಿಷೇಧಿಸುವ ಹೊಸ ಕಾನೂನುಗಳ ಅಡಿಯಲ್ಲಿ ಮಹಿಳೆಯ ಪತಿ ಮತ್ತು ಅವರ ಸಹೋದರನನ್ನು ಬಂಧಿಸಲಾಯಿತು.

ಆದರೆ, ಕಾನೂನು ಜಾರಿಗೆ ಬರುವ ನಾಲ್ಕು ತಿಂಗಳ ಮೊದಲು ತಾನು ಮದುವೆಯಾಗಿದ್ದೇನೆ ಎಂದು ಮಹಿಳೆ ಸುದ್ದಿಗಾರರಿಗೆ ತಿಳಿಸಿದರು. ಆದರೆ, ಆಕೆಯ ಯಾವ ಮಾತುಗಳು ಪೊಲೀಸರನ್ನು ತಲುಪಲಿಲ್ಲ. ಆಕೆಯನ್ನು ಜಿಲ್ಲೆಯ ಸರ್ಕಾರಿ ಮಹಿಳಾ ಆಶ್ರಯಕ್ಕೆ ಕಳುಹಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ವೈದ್ಯಕೀಯ ಕೋರ್ಸ್ ಬಳಿಕ 10 ವರ್ಷ ಸರ್ಕಾರಿ ಸೇವೆ ಕಡ್ಡಾಯ

ಜಿಲ್ಲೆಯ ಸರ್ಕಾರಿ ಮಹಿಳಾ ಆಶ್ರಯದಲ್ಲಿ ಮಹಿಳೆಗೆ ಗರ್ಭಪಾತವಾಗಿದೆ ಎಂಬ ವರದಿಗಳು ಹರಡಿದ್ದವು. ಈ ಎಲ್ಲಾ ವದಂತಿಗಳನ್ನು ಸರ್ಕಾರ ನಿರಾಕರಿಸಿತ್ತು. ’ಪತ್ರಿಕೆಯಲ್ಲಿ ವರದಿಯಾಗಿರುವುದು ಸುಳ್ಳು’ ಎಂದು ರಾಜ್ಯದ ಮಕ್ಕಳ ಹಕ್ಕುಗಳ ಸಮಿತಿಯ ಮುಖ್ಯಸ್ಥ ವಿಶೇಶ್ ಗುಪ್ತಾ ಹೇಳಿದ್ದಾರೆ.

“ಮಹಿಳೆಯನ್ನು ಭಾನುವಾರ ಡಿಸ್ಚಾರ್ಜ್ ಮಾಡಿ ಕಳುಹಿಸಲಾಗಿದೆ. ಆ ಸಮಯದಲ್ಲಿ ಅವರು ಮೂರು ತಿಂಗಳ ಗರ್ಭಿಣಿಯಾಗಿದ್ದರು ಮತ್ತು ಮಗುವಿಗೆ ಹೃದಯ ಬಡಿತವಿತ್ತು’ ಎಂದು ಹೇಳಿದ್ದಾರೆ.

ಆದರೆ, ಕೆಲವೇ ಗಂಟೆಗಳಲ್ಲಿ ಮಹಿಳೆಯನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ಖಚಿತಪಡಿಸಿದೆ. ಹೊಟ್ಟೆನೋವಿನ ಬಗ್ಗೆ ದೂರು ನೀಡಿದ ನಂತರ ಡಿಸೆಂಬರ್ 11 ರಂದು (ಶುಕ್ರವಾರ) ಆಕೆಯನ್ನು ಮೊದಲು ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಭಾನುವಾರ ಡಿಸ್ಚಾರ್ಜ್ ಮಾಡಲಾಯಿತು.

ಆದರೆ, ಆಕೆ ಡಿಸ್ಚಾರ್ಜ್ ಆದ ಕೆಲವೇ ಗಂಟೆಗಳ ನಂತರ, ರಕ್ತಸ್ರಾವ ಮತ್ತು ಹೊಟ್ಟೆ ನೋವಿನ ಸಮಸ್ಯೆಗಳಿಂದ ಭಾನುವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಡಾ. ಗುಪ್ತಾ ದೃಢಪಡಿಸಿದ್ದಾರೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

“ಆಸ್ಪತ್ರೆಗೆ ಬಂದ ನಂತರ ಗರ್ಭಿಣಿ ರಕ್ತಸ್ರಾವವೂ ನಿಂತುಹೋಗಿದೆ. ಇಲ್ಲಿಗೆ ಬಂದ ನಂತರ ಆಕೆಗೆ ರಕ್ತಸ್ರಾವವಾಗಲಿಲ್ಲ” ಎಂದು ಮೊರಾದಾಬಾದ್‌ನ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಸುನೀತಾ ಪಾಂಡೆ ಹೇಳಿದ್ದಾರೆ. ಯುವತಿಯ ಕುಟುಂಬವನ್ನು ಸಹ ಆಕೆಯಿಂದ ದೂರವಿರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದ ವೀಡಿಯೊಗಳಲ್ಲಿ, ಯುವತಿ ಮತ್ತು ಆಕೆಯ ಪತಿಗೆ ಬಜರಂಗದಳದ ಸದಸ್ಯರು “ನಿಮ್ಮಂತಹ ಜನರಿಂದಲೇ ಈ ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರಬೇಕಾಯಿತು” ಎಂದು ಹೇಳಿದ್ದು ದಾಖಲಾಗಿದೆ.


ಇದನ್ನೂ ಓದಿ: ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...