Homeಮುಖಪುಟಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ಹೊಟ್ಟೆನೋವು, ರಕ್ತಸ್ರಾವ ಸೇರಿದಂತೆ ಗರ್ಭಧಾರಣೆ ಸಂಬಂಧಿತ ತೊಂದರೆಗಳ ಹಿನ್ನೆಲೆ ಯುವತಿ ಮೂರು ದಿನಗಳಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದಲ್ಲಿ ಜಾರಿಯಾಗಿರುವ ಹೊಸ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮಹಿಳೆಯ ಪತಿ ಮತ್ತು ಪತಿಯ ಸಹೋದರನನ್ನು ಬಂಧಿಸಿದ ನಂತರ ಯುವ ಗರ್ಭಿಣಿ ಯುವತಿಯನ್ನು ಸರ್ಕಾರಿ ಆಶ್ರಯ ತಾಣದಲ್ಲಿ ಇರಿಸಲಾಗಿದೆ.  ಆದರೆ, ಹೊಟ್ಟೆನೋವು, ರಕ್ತಸ್ರಾವ ಸೇರಿದಂತೆ ಗರ್ಭಧಾರಣೆ ಸಂಬಂಧಿತ ತೊಂದರೆಗಳ ಹಿನ್ನೆಲೆ  ಮೂರು ದಿನಗಳಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೊರಾದಾಬಾದ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, 22 ವರ್ಷದ ಹಿಂದೂ ಯುವತಿ ಜುಲೈನಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮದುವೆಯಾಗಿ ಮತಾಂತರಗೊಂಡಿದ್ದರು. ಈ ದಂಪತಿ ಡಿಸೆಂಬರ್ 5 ರಂದು ಮದುವೆಯನ್ನು ನೋಂದಾಯಿಸಲು ಹೋಗಿದ್ದಾಗ, ಬಜರಂಗದಳದ ಕಾರ್ಯಕರ್ತರು ಆಕೆಯ ಪತಿ ಮತ್ತು ಪತಿಯ ಸಹೋದರನನ್ನು ಪೊಲೀಸರಿಗೆ ಒಪ್ಪಿಸಿ ಈಕೆಯನ್ನು ಎಳೆದೊಯ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ವಿವಾಹಕ್ಕಾಗಿ ಮತಾಂತರ ಸೇರಿದಂತೆ ಮೋಸದ ಮತ್ತು ಬಲವಂತದ ಮತಾಂತರಗಳನ್ನು ನಿಷೇಧಿಸುವ ಹೊಸ ಕಾನೂನುಗಳ ಅಡಿಯಲ್ಲಿ ಮಹಿಳೆಯ ಪತಿ ಮತ್ತು ಅವರ ಸಹೋದರನನ್ನು ಬಂಧಿಸಲಾಯಿತು.

ಆದರೆ, ಕಾನೂನು ಜಾರಿಗೆ ಬರುವ ನಾಲ್ಕು ತಿಂಗಳ ಮೊದಲು ತಾನು ಮದುವೆಯಾಗಿದ್ದೇನೆ ಎಂದು ಮಹಿಳೆ ಸುದ್ದಿಗಾರರಿಗೆ ತಿಳಿಸಿದರು. ಆದರೆ, ಆಕೆಯ ಯಾವ ಮಾತುಗಳು ಪೊಲೀಸರನ್ನು ತಲುಪಲಿಲ್ಲ. ಆಕೆಯನ್ನು ಜಿಲ್ಲೆಯ ಸರ್ಕಾರಿ ಮಹಿಳಾ ಆಶ್ರಯಕ್ಕೆ ಕಳುಹಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ವೈದ್ಯಕೀಯ ಕೋರ್ಸ್ ಬಳಿಕ 10 ವರ್ಷ ಸರ್ಕಾರಿ ಸೇವೆ ಕಡ್ಡಾಯ

ಜಿಲ್ಲೆಯ ಸರ್ಕಾರಿ ಮಹಿಳಾ ಆಶ್ರಯದಲ್ಲಿ ಮಹಿಳೆಗೆ ಗರ್ಭಪಾತವಾಗಿದೆ ಎಂಬ ವರದಿಗಳು ಹರಡಿದ್ದವು. ಈ ಎಲ್ಲಾ ವದಂತಿಗಳನ್ನು ಸರ್ಕಾರ ನಿರಾಕರಿಸಿತ್ತು. ’ಪತ್ರಿಕೆಯಲ್ಲಿ ವರದಿಯಾಗಿರುವುದು ಸುಳ್ಳು’ ಎಂದು ರಾಜ್ಯದ ಮಕ್ಕಳ ಹಕ್ಕುಗಳ ಸಮಿತಿಯ ಮುಖ್ಯಸ್ಥ ವಿಶೇಶ್ ಗುಪ್ತಾ ಹೇಳಿದ್ದಾರೆ.

“ಮಹಿಳೆಯನ್ನು ಭಾನುವಾರ ಡಿಸ್ಚಾರ್ಜ್ ಮಾಡಿ ಕಳುಹಿಸಲಾಗಿದೆ. ಆ ಸಮಯದಲ್ಲಿ ಅವರು ಮೂರು ತಿಂಗಳ ಗರ್ಭಿಣಿಯಾಗಿದ್ದರು ಮತ್ತು ಮಗುವಿಗೆ ಹೃದಯ ಬಡಿತವಿತ್ತು’ ಎಂದು ಹೇಳಿದ್ದಾರೆ.

ಆದರೆ, ಕೆಲವೇ ಗಂಟೆಗಳಲ್ಲಿ ಮಹಿಳೆಯನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ಖಚಿತಪಡಿಸಿದೆ. ಹೊಟ್ಟೆನೋವಿನ ಬಗ್ಗೆ ದೂರು ನೀಡಿದ ನಂತರ ಡಿಸೆಂಬರ್ 11 ರಂದು (ಶುಕ್ರವಾರ) ಆಕೆಯನ್ನು ಮೊದಲು ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಭಾನುವಾರ ಡಿಸ್ಚಾರ್ಜ್ ಮಾಡಲಾಯಿತು.

ಆದರೆ, ಆಕೆ ಡಿಸ್ಚಾರ್ಜ್ ಆದ ಕೆಲವೇ ಗಂಟೆಗಳ ನಂತರ, ರಕ್ತಸ್ರಾವ ಮತ್ತು ಹೊಟ್ಟೆ ನೋವಿನ ಸಮಸ್ಯೆಗಳಿಂದ ಭಾನುವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಡಾ. ಗುಪ್ತಾ ದೃಢಪಡಿಸಿದ್ದಾರೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

“ಆಸ್ಪತ್ರೆಗೆ ಬಂದ ನಂತರ ಗರ್ಭಿಣಿ ರಕ್ತಸ್ರಾವವೂ ನಿಂತುಹೋಗಿದೆ. ಇಲ್ಲಿಗೆ ಬಂದ ನಂತರ ಆಕೆಗೆ ರಕ್ತಸ್ರಾವವಾಗಲಿಲ್ಲ” ಎಂದು ಮೊರಾದಾಬಾದ್‌ನ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಸುನೀತಾ ಪಾಂಡೆ ಹೇಳಿದ್ದಾರೆ. ಯುವತಿಯ ಕುಟುಂಬವನ್ನು ಸಹ ಆಕೆಯಿಂದ ದೂರವಿರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದ ವೀಡಿಯೊಗಳಲ್ಲಿ, ಯುವತಿ ಮತ್ತು ಆಕೆಯ ಪತಿಗೆ ಬಜರಂಗದಳದ ಸದಸ್ಯರು “ನಿಮ್ಮಂತಹ ಜನರಿಂದಲೇ ಈ ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರಬೇಕಾಯಿತು” ಎಂದು ಹೇಳಿದ್ದು ದಾಖಲಾಗಿದೆ.


ಇದನ್ನೂ ಓದಿ: ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...