Homeಮುಖಪುಟಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ಹೊಟ್ಟೆನೋವು, ರಕ್ತಸ್ರಾವ ಸೇರಿದಂತೆ ಗರ್ಭಧಾರಣೆ ಸಂಬಂಧಿತ ತೊಂದರೆಗಳ ಹಿನ್ನೆಲೆ ಯುವತಿ ಮೂರು ದಿನಗಳಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದಲ್ಲಿ ಜಾರಿಯಾಗಿರುವ ಹೊಸ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮಹಿಳೆಯ ಪತಿ ಮತ್ತು ಪತಿಯ ಸಹೋದರನನ್ನು ಬಂಧಿಸಿದ ನಂತರ ಯುವ ಗರ್ಭಿಣಿ ಯುವತಿಯನ್ನು ಸರ್ಕಾರಿ ಆಶ್ರಯ ತಾಣದಲ್ಲಿ ಇರಿಸಲಾಗಿದೆ.  ಆದರೆ, ಹೊಟ್ಟೆನೋವು, ರಕ್ತಸ್ರಾವ ಸೇರಿದಂತೆ ಗರ್ಭಧಾರಣೆ ಸಂಬಂಧಿತ ತೊಂದರೆಗಳ ಹಿನ್ನೆಲೆ  ಮೂರು ದಿನಗಳಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೊರಾದಾಬಾದ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, 22 ವರ್ಷದ ಹಿಂದೂ ಯುವತಿ ಜುಲೈನಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮದುವೆಯಾಗಿ ಮತಾಂತರಗೊಂಡಿದ್ದರು. ಈ ದಂಪತಿ ಡಿಸೆಂಬರ್ 5 ರಂದು ಮದುವೆಯನ್ನು ನೋಂದಾಯಿಸಲು ಹೋಗಿದ್ದಾಗ, ಬಜರಂಗದಳದ ಕಾರ್ಯಕರ್ತರು ಆಕೆಯ ಪತಿ ಮತ್ತು ಪತಿಯ ಸಹೋದರನನ್ನು ಪೊಲೀಸರಿಗೆ ಒಪ್ಪಿಸಿ ಈಕೆಯನ್ನು ಎಳೆದೊಯ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ವಿವಾಹಕ್ಕಾಗಿ ಮತಾಂತರ ಸೇರಿದಂತೆ ಮೋಸದ ಮತ್ತು ಬಲವಂತದ ಮತಾಂತರಗಳನ್ನು ನಿಷೇಧಿಸುವ ಹೊಸ ಕಾನೂನುಗಳ ಅಡಿಯಲ್ಲಿ ಮಹಿಳೆಯ ಪತಿ ಮತ್ತು ಅವರ ಸಹೋದರನನ್ನು ಬಂಧಿಸಲಾಯಿತು.

ಆದರೆ, ಕಾನೂನು ಜಾರಿಗೆ ಬರುವ ನಾಲ್ಕು ತಿಂಗಳ ಮೊದಲು ತಾನು ಮದುವೆಯಾಗಿದ್ದೇನೆ ಎಂದು ಮಹಿಳೆ ಸುದ್ದಿಗಾರರಿಗೆ ತಿಳಿಸಿದರು. ಆದರೆ, ಆಕೆಯ ಯಾವ ಮಾತುಗಳು ಪೊಲೀಸರನ್ನು ತಲುಪಲಿಲ್ಲ. ಆಕೆಯನ್ನು ಜಿಲ್ಲೆಯ ಸರ್ಕಾರಿ ಮಹಿಳಾ ಆಶ್ರಯಕ್ಕೆ ಕಳುಹಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ವೈದ್ಯಕೀಯ ಕೋರ್ಸ್ ಬಳಿಕ 10 ವರ್ಷ ಸರ್ಕಾರಿ ಸೇವೆ ಕಡ್ಡಾಯ

ಜಿಲ್ಲೆಯ ಸರ್ಕಾರಿ ಮಹಿಳಾ ಆಶ್ರಯದಲ್ಲಿ ಮಹಿಳೆಗೆ ಗರ್ಭಪಾತವಾಗಿದೆ ಎಂಬ ವರದಿಗಳು ಹರಡಿದ್ದವು. ಈ ಎಲ್ಲಾ ವದಂತಿಗಳನ್ನು ಸರ್ಕಾರ ನಿರಾಕರಿಸಿತ್ತು. ’ಪತ್ರಿಕೆಯಲ್ಲಿ ವರದಿಯಾಗಿರುವುದು ಸುಳ್ಳು’ ಎಂದು ರಾಜ್ಯದ ಮಕ್ಕಳ ಹಕ್ಕುಗಳ ಸಮಿತಿಯ ಮುಖ್ಯಸ್ಥ ವಿಶೇಶ್ ಗುಪ್ತಾ ಹೇಳಿದ್ದಾರೆ.

“ಮಹಿಳೆಯನ್ನು ಭಾನುವಾರ ಡಿಸ್ಚಾರ್ಜ್ ಮಾಡಿ ಕಳುಹಿಸಲಾಗಿದೆ. ಆ ಸಮಯದಲ್ಲಿ ಅವರು ಮೂರು ತಿಂಗಳ ಗರ್ಭಿಣಿಯಾಗಿದ್ದರು ಮತ್ತು ಮಗುವಿಗೆ ಹೃದಯ ಬಡಿತವಿತ್ತು’ ಎಂದು ಹೇಳಿದ್ದಾರೆ.

ಆದರೆ, ಕೆಲವೇ ಗಂಟೆಗಳಲ್ಲಿ ಮಹಿಳೆಯನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ಖಚಿತಪಡಿಸಿದೆ. ಹೊಟ್ಟೆನೋವಿನ ಬಗ್ಗೆ ದೂರು ನೀಡಿದ ನಂತರ ಡಿಸೆಂಬರ್ 11 ರಂದು (ಶುಕ್ರವಾರ) ಆಕೆಯನ್ನು ಮೊದಲು ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಭಾನುವಾರ ಡಿಸ್ಚಾರ್ಜ್ ಮಾಡಲಾಯಿತು.

ಆದರೆ, ಆಕೆ ಡಿಸ್ಚಾರ್ಜ್ ಆದ ಕೆಲವೇ ಗಂಟೆಗಳ ನಂತರ, ರಕ್ತಸ್ರಾವ ಮತ್ತು ಹೊಟ್ಟೆ ನೋವಿನ ಸಮಸ್ಯೆಗಳಿಂದ ಭಾನುವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಡಾ. ಗುಪ್ತಾ ದೃಢಪಡಿಸಿದ್ದಾರೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

“ಆಸ್ಪತ್ರೆಗೆ ಬಂದ ನಂತರ ಗರ್ಭಿಣಿ ರಕ್ತಸ್ರಾವವೂ ನಿಂತುಹೋಗಿದೆ. ಇಲ್ಲಿಗೆ ಬಂದ ನಂತರ ಆಕೆಗೆ ರಕ್ತಸ್ರಾವವಾಗಲಿಲ್ಲ” ಎಂದು ಮೊರಾದಾಬಾದ್‌ನ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಸುನೀತಾ ಪಾಂಡೆ ಹೇಳಿದ್ದಾರೆ. ಯುವತಿಯ ಕುಟುಂಬವನ್ನು ಸಹ ಆಕೆಯಿಂದ ದೂರವಿರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದ ವೀಡಿಯೊಗಳಲ್ಲಿ, ಯುವತಿ ಮತ್ತು ಆಕೆಯ ಪತಿಗೆ ಬಜರಂಗದಳದ ಸದಸ್ಯರು “ನಿಮ್ಮಂತಹ ಜನರಿಂದಲೇ ಈ ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರಬೇಕಾಯಿತು” ಎಂದು ಹೇಳಿದ್ದು ದಾಖಲಾಗಿದೆ.


ಇದನ್ನೂ ಓದಿ: ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....