Homeಮುಖಪುಟಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ಹೊಟ್ಟೆನೋವು, ರಕ್ತಸ್ರಾವ ಸೇರಿದಂತೆ ಗರ್ಭಧಾರಣೆ ಸಂಬಂಧಿತ ತೊಂದರೆಗಳ ಹಿನ್ನೆಲೆ ಯುವತಿ ಮೂರು ದಿನಗಳಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದಲ್ಲಿ ಜಾರಿಯಾಗಿರುವ ಹೊಸ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮಹಿಳೆಯ ಪತಿ ಮತ್ತು ಪತಿಯ ಸಹೋದರನನ್ನು ಬಂಧಿಸಿದ ನಂತರ ಯುವ ಗರ್ಭಿಣಿ ಯುವತಿಯನ್ನು ಸರ್ಕಾರಿ ಆಶ್ರಯ ತಾಣದಲ್ಲಿ ಇರಿಸಲಾಗಿದೆ.  ಆದರೆ, ಹೊಟ್ಟೆನೋವು, ರಕ್ತಸ್ರಾವ ಸೇರಿದಂತೆ ಗರ್ಭಧಾರಣೆ ಸಂಬಂಧಿತ ತೊಂದರೆಗಳ ಹಿನ್ನೆಲೆ  ಮೂರು ದಿನಗಳಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೊರಾದಾಬಾದ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, 22 ವರ್ಷದ ಹಿಂದೂ ಯುವತಿ ಜುಲೈನಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮದುವೆಯಾಗಿ ಮತಾಂತರಗೊಂಡಿದ್ದರು. ಈ ದಂಪತಿ ಡಿಸೆಂಬರ್ 5 ರಂದು ಮದುವೆಯನ್ನು ನೋಂದಾಯಿಸಲು ಹೋಗಿದ್ದಾಗ, ಬಜರಂಗದಳದ ಕಾರ್ಯಕರ್ತರು ಆಕೆಯ ಪತಿ ಮತ್ತು ಪತಿಯ ಸಹೋದರನನ್ನು ಪೊಲೀಸರಿಗೆ ಒಪ್ಪಿಸಿ ಈಕೆಯನ್ನು ಎಳೆದೊಯ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ವಿವಾಹಕ್ಕಾಗಿ ಮತಾಂತರ ಸೇರಿದಂತೆ ಮೋಸದ ಮತ್ತು ಬಲವಂತದ ಮತಾಂತರಗಳನ್ನು ನಿಷೇಧಿಸುವ ಹೊಸ ಕಾನೂನುಗಳ ಅಡಿಯಲ್ಲಿ ಮಹಿಳೆಯ ಪತಿ ಮತ್ತು ಅವರ ಸಹೋದರನನ್ನು ಬಂಧಿಸಲಾಯಿತು.

ಆದರೆ, ಕಾನೂನು ಜಾರಿಗೆ ಬರುವ ನಾಲ್ಕು ತಿಂಗಳ ಮೊದಲು ತಾನು ಮದುವೆಯಾಗಿದ್ದೇನೆ ಎಂದು ಮಹಿಳೆ ಸುದ್ದಿಗಾರರಿಗೆ ತಿಳಿಸಿದರು. ಆದರೆ, ಆಕೆಯ ಯಾವ ಮಾತುಗಳು ಪೊಲೀಸರನ್ನು ತಲುಪಲಿಲ್ಲ. ಆಕೆಯನ್ನು ಜಿಲ್ಲೆಯ ಸರ್ಕಾರಿ ಮಹಿಳಾ ಆಶ್ರಯಕ್ಕೆ ಕಳುಹಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ವೈದ್ಯಕೀಯ ಕೋರ್ಸ್ ಬಳಿಕ 10 ವರ್ಷ ಸರ್ಕಾರಿ ಸೇವೆ ಕಡ್ಡಾಯ

ಜಿಲ್ಲೆಯ ಸರ್ಕಾರಿ ಮಹಿಳಾ ಆಶ್ರಯದಲ್ಲಿ ಮಹಿಳೆಗೆ ಗರ್ಭಪಾತವಾಗಿದೆ ಎಂಬ ವರದಿಗಳು ಹರಡಿದ್ದವು. ಈ ಎಲ್ಲಾ ವದಂತಿಗಳನ್ನು ಸರ್ಕಾರ ನಿರಾಕರಿಸಿತ್ತು. ’ಪತ್ರಿಕೆಯಲ್ಲಿ ವರದಿಯಾಗಿರುವುದು ಸುಳ್ಳು’ ಎಂದು ರಾಜ್ಯದ ಮಕ್ಕಳ ಹಕ್ಕುಗಳ ಸಮಿತಿಯ ಮುಖ್ಯಸ್ಥ ವಿಶೇಶ್ ಗುಪ್ತಾ ಹೇಳಿದ್ದಾರೆ.

“ಮಹಿಳೆಯನ್ನು ಭಾನುವಾರ ಡಿಸ್ಚಾರ್ಜ್ ಮಾಡಿ ಕಳುಹಿಸಲಾಗಿದೆ. ಆ ಸಮಯದಲ್ಲಿ ಅವರು ಮೂರು ತಿಂಗಳ ಗರ್ಭಿಣಿಯಾಗಿದ್ದರು ಮತ್ತು ಮಗುವಿಗೆ ಹೃದಯ ಬಡಿತವಿತ್ತು’ ಎಂದು ಹೇಳಿದ್ದಾರೆ.

ಆದರೆ, ಕೆಲವೇ ಗಂಟೆಗಳಲ್ಲಿ ಮಹಿಳೆಯನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ಖಚಿತಪಡಿಸಿದೆ. ಹೊಟ್ಟೆನೋವಿನ ಬಗ್ಗೆ ದೂರು ನೀಡಿದ ನಂತರ ಡಿಸೆಂಬರ್ 11 ರಂದು (ಶುಕ್ರವಾರ) ಆಕೆಯನ್ನು ಮೊದಲು ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಭಾನುವಾರ ಡಿಸ್ಚಾರ್ಜ್ ಮಾಡಲಾಯಿತು.

ಆದರೆ, ಆಕೆ ಡಿಸ್ಚಾರ್ಜ್ ಆದ ಕೆಲವೇ ಗಂಟೆಗಳ ನಂತರ, ರಕ್ತಸ್ರಾವ ಮತ್ತು ಹೊಟ್ಟೆ ನೋವಿನ ಸಮಸ್ಯೆಗಳಿಂದ ಭಾನುವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಡಾ. ಗುಪ್ತಾ ದೃಢಪಡಿಸಿದ್ದಾರೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

“ಆಸ್ಪತ್ರೆಗೆ ಬಂದ ನಂತರ ಗರ್ಭಿಣಿ ರಕ್ತಸ್ರಾವವೂ ನಿಂತುಹೋಗಿದೆ. ಇಲ್ಲಿಗೆ ಬಂದ ನಂತರ ಆಕೆಗೆ ರಕ್ತಸ್ರಾವವಾಗಲಿಲ್ಲ” ಎಂದು ಮೊರಾದಾಬಾದ್‌ನ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಸುನೀತಾ ಪಾಂಡೆ ಹೇಳಿದ್ದಾರೆ. ಯುವತಿಯ ಕುಟುಂಬವನ್ನು ಸಹ ಆಕೆಯಿಂದ ದೂರವಿರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದ ವೀಡಿಯೊಗಳಲ್ಲಿ, ಯುವತಿ ಮತ್ತು ಆಕೆಯ ಪತಿಗೆ ಬಜರಂಗದಳದ ಸದಸ್ಯರು “ನಿಮ್ಮಂತಹ ಜನರಿಂದಲೇ ಈ ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರಬೇಕಾಯಿತು” ಎಂದು ಹೇಳಿದ್ದು ದಾಖಲಾಗಿದೆ.


ಇದನ್ನೂ ಓದಿ: ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...