Homeಮುಖಪುಟಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ಹೊಟ್ಟೆನೋವು, ರಕ್ತಸ್ರಾವ ಸೇರಿದಂತೆ ಗರ್ಭಧಾರಣೆ ಸಂಬಂಧಿತ ತೊಂದರೆಗಳ ಹಿನ್ನೆಲೆ ಯುವತಿ ಮೂರು ದಿನಗಳಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದಲ್ಲಿ ಜಾರಿಯಾಗಿರುವ ಹೊಸ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮಹಿಳೆಯ ಪತಿ ಮತ್ತು ಪತಿಯ ಸಹೋದರನನ್ನು ಬಂಧಿಸಿದ ನಂತರ ಯುವ ಗರ್ಭಿಣಿ ಯುವತಿಯನ್ನು ಸರ್ಕಾರಿ ಆಶ್ರಯ ತಾಣದಲ್ಲಿ ಇರಿಸಲಾಗಿದೆ.  ಆದರೆ, ಹೊಟ್ಟೆನೋವು, ರಕ್ತಸ್ರಾವ ಸೇರಿದಂತೆ ಗರ್ಭಧಾರಣೆ ಸಂಬಂಧಿತ ತೊಂದರೆಗಳ ಹಿನ್ನೆಲೆ  ಮೂರು ದಿನಗಳಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೊರಾದಾಬಾದ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, 22 ವರ್ಷದ ಹಿಂದೂ ಯುವತಿ ಜುಲೈನಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮದುವೆಯಾಗಿ ಮತಾಂತರಗೊಂಡಿದ್ದರು. ಈ ದಂಪತಿ ಡಿಸೆಂಬರ್ 5 ರಂದು ಮದುವೆಯನ್ನು ನೋಂದಾಯಿಸಲು ಹೋಗಿದ್ದಾಗ, ಬಜರಂಗದಳದ ಕಾರ್ಯಕರ್ತರು ಆಕೆಯ ಪತಿ ಮತ್ತು ಪತಿಯ ಸಹೋದರನನ್ನು ಪೊಲೀಸರಿಗೆ ಒಪ್ಪಿಸಿ ಈಕೆಯನ್ನು ಎಳೆದೊಯ್ದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ವಿವಾಹಕ್ಕಾಗಿ ಮತಾಂತರ ಸೇರಿದಂತೆ ಮೋಸದ ಮತ್ತು ಬಲವಂತದ ಮತಾಂತರಗಳನ್ನು ನಿಷೇಧಿಸುವ ಹೊಸ ಕಾನೂನುಗಳ ಅಡಿಯಲ್ಲಿ ಮಹಿಳೆಯ ಪತಿ ಮತ್ತು ಅವರ ಸಹೋದರನನ್ನು ಬಂಧಿಸಲಾಯಿತು.

ಆದರೆ, ಕಾನೂನು ಜಾರಿಗೆ ಬರುವ ನಾಲ್ಕು ತಿಂಗಳ ಮೊದಲು ತಾನು ಮದುವೆಯಾಗಿದ್ದೇನೆ ಎಂದು ಮಹಿಳೆ ಸುದ್ದಿಗಾರರಿಗೆ ತಿಳಿಸಿದರು. ಆದರೆ, ಆಕೆಯ ಯಾವ ಮಾತುಗಳು ಪೊಲೀಸರನ್ನು ತಲುಪಲಿಲ್ಲ. ಆಕೆಯನ್ನು ಜಿಲ್ಲೆಯ ಸರ್ಕಾರಿ ಮಹಿಳಾ ಆಶ್ರಯಕ್ಕೆ ಕಳುಹಿಸಲಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ: ವೈದ್ಯಕೀಯ ಕೋರ್ಸ್ ಬಳಿಕ 10 ವರ್ಷ ಸರ್ಕಾರಿ ಸೇವೆ ಕಡ್ಡಾಯ

ಜಿಲ್ಲೆಯ ಸರ್ಕಾರಿ ಮಹಿಳಾ ಆಶ್ರಯದಲ್ಲಿ ಮಹಿಳೆಗೆ ಗರ್ಭಪಾತವಾಗಿದೆ ಎಂಬ ವರದಿಗಳು ಹರಡಿದ್ದವು. ಈ ಎಲ್ಲಾ ವದಂತಿಗಳನ್ನು ಸರ್ಕಾರ ನಿರಾಕರಿಸಿತ್ತು. ’ಪತ್ರಿಕೆಯಲ್ಲಿ ವರದಿಯಾಗಿರುವುದು ಸುಳ್ಳು’ ಎಂದು ರಾಜ್ಯದ ಮಕ್ಕಳ ಹಕ್ಕುಗಳ ಸಮಿತಿಯ ಮುಖ್ಯಸ್ಥ ವಿಶೇಶ್ ಗುಪ್ತಾ ಹೇಳಿದ್ದಾರೆ.

“ಮಹಿಳೆಯನ್ನು ಭಾನುವಾರ ಡಿಸ್ಚಾರ್ಜ್ ಮಾಡಿ ಕಳುಹಿಸಲಾಗಿದೆ. ಆ ಸಮಯದಲ್ಲಿ ಅವರು ಮೂರು ತಿಂಗಳ ಗರ್ಭಿಣಿಯಾಗಿದ್ದರು ಮತ್ತು ಮಗುವಿಗೆ ಹೃದಯ ಬಡಿತವಿತ್ತು’ ಎಂದು ಹೇಳಿದ್ದಾರೆ.

ಆದರೆ, ಕೆಲವೇ ಗಂಟೆಗಳಲ್ಲಿ ಮಹಿಳೆಯನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ಖಚಿತಪಡಿಸಿದೆ. ಹೊಟ್ಟೆನೋವಿನ ಬಗ್ಗೆ ದೂರು ನೀಡಿದ ನಂತರ ಡಿಸೆಂಬರ್ 11 ರಂದು (ಶುಕ್ರವಾರ) ಆಕೆಯನ್ನು ಮೊದಲು ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಭಾನುವಾರ ಡಿಸ್ಚಾರ್ಜ್ ಮಾಡಲಾಯಿತು.

ಆದರೆ, ಆಕೆ ಡಿಸ್ಚಾರ್ಜ್ ಆದ ಕೆಲವೇ ಗಂಟೆಗಳ ನಂತರ, ರಕ್ತಸ್ರಾವ ಮತ್ತು ಹೊಟ್ಟೆ ನೋವಿನ ಸಮಸ್ಯೆಗಳಿಂದ ಭಾನುವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಡಾ. ಗುಪ್ತಾ ದೃಢಪಡಿಸಿದ್ದಾರೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

“ಆಸ್ಪತ್ರೆಗೆ ಬಂದ ನಂತರ ಗರ್ಭಿಣಿ ರಕ್ತಸ್ರಾವವೂ ನಿಂತುಹೋಗಿದೆ. ಇಲ್ಲಿಗೆ ಬಂದ ನಂತರ ಆಕೆಗೆ ರಕ್ತಸ್ರಾವವಾಗಲಿಲ್ಲ” ಎಂದು ಮೊರಾದಾಬಾದ್‌ನ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಸುನೀತಾ ಪಾಂಡೆ ಹೇಳಿದ್ದಾರೆ. ಯುವತಿಯ ಕುಟುಂಬವನ್ನು ಸಹ ಆಕೆಯಿಂದ ದೂರವಿರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದ ವೀಡಿಯೊಗಳಲ್ಲಿ, ಯುವತಿ ಮತ್ತು ಆಕೆಯ ಪತಿಗೆ ಬಜರಂಗದಳದ ಸದಸ್ಯರು “ನಿಮ್ಮಂತಹ ಜನರಿಂದಲೇ ಈ ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರಬೇಕಾಯಿತು” ಎಂದು ಹೇಳಿದ್ದು ದಾಖಲಾಗಿದೆ.


ಇದನ್ನೂ ಓದಿ: ಲವ್ ಜಿಹಾದ್: ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಡಿ ಮೊದಲ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...