Homeಮುಖಪುಟಯುಪಿ: 17 ವಿದ್ಯಾರ್ಥಿನಿಯರಿಗೆ ಮಾದಕವಸ್ತು ನೀಡಿ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲ

ಯುಪಿ: 17 ವಿದ್ಯಾರ್ಥಿನಿಯರಿಗೆ ಮಾದಕವಸ್ತು ನೀಡಿ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲ

- Advertisement -
- Advertisement -

ರಾತ್ರಿ ವೇಳೆ ಶಾಲೆಯಲ್ಲೇ ವಿದ್ಯಾರ್ಥಿನಿಯನ್ನು ಉಳಿಸಿಕೊಂಡು ಪ್ರಾಂಶುಪಾಲ ಹಾಗೂ ಆತನ ಸಹಚರ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌‌ನಗರ ಜಿಲ್ಲೆಯಲ್ಲಿ ನಡೆದಿದೆ.

10ನೇ ತರಗತಿಯಲ್ಲಿ ಓದುತ್ತಿದ್ದ 17 ವಿದ್ಯಾರ್ಥಿನಿಯರನ್ನು ಪ್ರಾಯೋಗಿಕ ಪರೀಕ್ಷೆಯ ತಯಾರಿಗಾಗಿ ರಾತ್ರಿ ಶಾಲೆಯಲ್ಲೇ ಉಳಿಯಬೇಕು ಎಂದು ಉಳಿಸಿಕೊಂಡು, ಪ್ರಾಂಶುಪಾಲರು ಮತ್ತು ಅವರ ಸಹಚರರು ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ.

ಸಿಬಿಎಸ್‌ಇ ಪಠ್ಯಕ್ರಮದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೇರೊಂದು ಶಾಲೆಯಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯುತ್ತದೆ. ಅದಕ್ಕಾಗಿ, ಪರೀಕ್ಷೆಗೆ ತಯಾರಾಗಲು ರಾತ್ರಿಪೂರ್ತಿ ಶಾಲೆಯಲ್ಲೇ ಉಳಿಯಬೇಕು ಎಂದು 17 ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಶಾಲೆಯಲ್ಲೇ ಉಳಿಸಿಕೊಂಡಿದ್ದಾರೆ. ಈ ವೇಳೆ, ವಿದ್ಯಾರ್ಥಿನಿಯರಿಗೆ ಮಾದಕವಸ್ತುವನ್ನು ನೀಡಿದ್ದಾರೆ ಮತ್ತು ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಅಲ್ಲದೆ, ಮರುದಿನ ವಿದ್ಯಾರ್ಥಿನಿಯರು ತಮ್ಮ ಮನೆಗೆ ತೆರಳಿದ್ದಾಗಿ ಹೇಳಿಕೊಂಡಿದ್ದಾರೆ.

ನವೆಂಬರ್ 18ರಂದು ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲಾಗಿದ್ದು, ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇಬ್ಬರು ಆರೋಪಿಗಳ ವಿರುದ್ದ ಸೆಕ್ಷನ್ 328 (ಮಹಿಳೆಯರ ನಮ್ರತೆಗೆ ಆಕ್ರೋಶ), 358 (ವಿಷದಿಂದ ನೋವುಂಟುಮಾಡುವುದು), 506 (ಕ್ರಿಮಿನಲ್ ಬೆದರಿಕೆ ) ಮತ್ತು POCSO ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೆ, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಅಮಾನತುಗೊಳಿಸಿದ್ದೇವೆ” ಎಂದು ಮುಜಫರ್‌ನಗರ ಪೊಲೀಸ್ ಮುಖ್ಯಸ್ಥ ಅಭಿಷೇಕ್ ಯಾದವ್ ಹೇಳಿದ್ದಾರೆ.

ಸ್ಥಳೀಯ ಶಾಸಕ ಪ್ರಮೋದ್ ಉತ್ವಾಲ್ ಅವರು ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ನಂತರವೇ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.


ಇದನ್ನೂ ಓದಿ: ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ


“ಪ್ರಾಯೋಗಿಕ ಪರೀಕ್ಷೆಯ ನೆಪದಲ್ಲಿ 16-17 ಹುಡುಗಿಯರನ್ನು ಶಾಲೆಯಲ್ಲಿ ರಾತ್ರಿ ಉಳಿದುಕೊಳ್ಳುವಂತೆ ಪ್ರಾಂಶುಪಾಲ ಯೋಗೇಶ್  ಹೇಳಿದ್ದಾರೆ. ಹುಡುಗಿಯರನ್ನು ಕಾಪಿ ಬರೆಯುವಂತೆ ಸೂಚಿಸಿದ್ದಾರೆ. ನಂತರ ಅವರನ್ನು ರಾತ್ರಿ ಶಾಲೆಯಲ್ಲೇ ಉಳಿದುಕೊಳ್ಳಲು ಹೇಳಿದ್ದಾರೆ. ಮರುದಿನವೂ ಹೆಚ್ಚಿನ ಪ್ರಾಕ್ಟಿಕಲ್ಸ್ ಇರುತ್ತದೆ ಎಂದು ತಿಳಿಸಿದ್ದಾರೆ. ನಂತರ, ಬಾಲಕಿಯರಿಗೆ ಖಿಚಡಿ ನೀಡಲಾಗಿದೆ. ಅದನ್ನು, ತಿಂದ ನಂತರ ಪ್ರಜ್ಞೆ ಕಳೆದುಕೊಂಡರು ಮತ್ತು ನಂತರ ಕಿರುಕುಳ ನೀಡಿದ್ದಾರೆ”ಎಂದು ದೂರುದಾರರು ಆರೋಪಿಸಿದ್ದಾರೆ.

“ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುವ 29 ವಿದ್ಯಾರ್ಥಿಗಳಿದ್ದಾರೆ. ಆದರೆ ಹುಡುಗಿಯರನ್ನು ಮಾತ್ರ ರಾತ್ರಿ ಉಳಿದುಕೊಳ್ಳಲು ಹೇಳಲಾಗಿದೆ. ಶಾಲೆಯಲ್ಲಿ ಉಳಿದುಕೊಂಡ ಮಕ್ಕಳಿಗೆ ನಿದ್ರಾಜನಕವನ್ನು ನೀಡಲಾಗಿದೆ” ಎಂದು ಮತ್ತೊಬ್ಬ ದೂರುದಾರರು ಹೇಳಿದ್ದಾರೆ.

ಪರೀಕ್ಷಾ ಮಂಡಳಿಯು ಪ್ರಾಯೋಗಿಕ ಪರೀಕ್ಷೆಗಳಿಗೆ ದಿನಾಂಕಗಳನ್ನು ಘೋಷಿಸಿದೆಯೇ ಎಂದು ವಿದ್ಯಾರ್ಥಿನಿಯರನ್ನು ಪ್ರಶ್ನಿಸಿದಾಗ, ಒಬ್ಬ ವಿದ್ಯಾರ್ಥಿನಿ ತಮಗೆ ಪರೀಕ್ಷಾ ದಿನಾಂಕದ ಬಗ್ಗೆ ತಿಳಿದಿರಲಿಲ್ಲ. ಆದರೆ, ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವಂತೆ ಹೇಳಲಾಗಿತ್ತು ಎಂದು ಹೇಳಿದ್ದಾರೆ.

ಇದು ಯಾವ ಪ್ರಾಕ್ಟಿಕಲ್ ಎಕ್ಸಾಮ್ ಎಂದು ಕೇಳಿದಾಗ “ಹಿಂದಿ ಪ್ರಾಕ್ಟಿಕಲ್” ಎಂದು ವಿದ್ಯಾರ್ಥಿನಿ ಉತ್ತರಿಸಿದ್ದಾರೆ.

“ಪ್ರಾಕ್ಟಿಕಲ್ ಕೆ ಲಿಯೇ ಬುಲಾಯಾ ಥಾ (ನಮ್ಮನ್ನು ಪ್ರಾಯೋಗಿಕ ಪರೀಕ್ಷೆಗಳಿಗೆ ಕರೆಯಲಾಗಿತ್ತು)” ನಂತರ, ಪ್ರಿನ್ಸಿಪಾಲರು ತಯಾರಿಸಿದ ಕಿಚಡಿಯನ್ನು ನಮಗೆ ನೀಡಲಾಗಿಯಿತು. ಅದನ್ನು ತಿಂದ ಬಳಿಕ ಪ್ರಜ್ಞಾಹೀನರಾದೆವು. ನಮಗೆ ಅವರು ಕಿರುಕುಳ ನೀಡಿದ್ದಾರೆ ಎಂದು ಮತ್ತೊಬ್ಬ ವಿದ್ಯಾರ್ಥಿನಿ ಹೇಳಿದ್ದಾರೆ. ಘಟನೆಯ ಬಗ್ಗೆ ಮಾತನಾಡದಂತೆ ನಮಗೆ ಒತ್ತಡ ಹೇರಲಾಗುತ್ತಿದೆ ಎಂದು ಬಾಲಕಿಯರು ಆರೋಪಿಸಿದ್ದಾರೆ.


ಇದನ್ನೂ ಓದಿ: ಮತಾಂತರ ಆರೋಪ: ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳದಿಂದ ಶಾಲೆ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...