Homeಮುಖಪುಟಯುಪಿ: 17 ವಿದ್ಯಾರ್ಥಿನಿಯರಿಗೆ ಮಾದಕವಸ್ತು ನೀಡಿ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲ

ಯುಪಿ: 17 ವಿದ್ಯಾರ್ಥಿನಿಯರಿಗೆ ಮಾದಕವಸ್ತು ನೀಡಿ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲ

- Advertisement -
- Advertisement -

ರಾತ್ರಿ ವೇಳೆ ಶಾಲೆಯಲ್ಲೇ ವಿದ್ಯಾರ್ಥಿನಿಯನ್ನು ಉಳಿಸಿಕೊಂಡು ಪ್ರಾಂಶುಪಾಲ ಹಾಗೂ ಆತನ ಸಹಚರ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌‌ನಗರ ಜಿಲ್ಲೆಯಲ್ಲಿ ನಡೆದಿದೆ.

10ನೇ ತರಗತಿಯಲ್ಲಿ ಓದುತ್ತಿದ್ದ 17 ವಿದ್ಯಾರ್ಥಿನಿಯರನ್ನು ಪ್ರಾಯೋಗಿಕ ಪರೀಕ್ಷೆಯ ತಯಾರಿಗಾಗಿ ರಾತ್ರಿ ಶಾಲೆಯಲ್ಲೇ ಉಳಿಯಬೇಕು ಎಂದು ಉಳಿಸಿಕೊಂಡು, ಪ್ರಾಂಶುಪಾಲರು ಮತ್ತು ಅವರ ಸಹಚರರು ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ.

ಸಿಬಿಎಸ್‌ಇ ಪಠ್ಯಕ್ರಮದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೇರೊಂದು ಶಾಲೆಯಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯುತ್ತದೆ. ಅದಕ್ಕಾಗಿ, ಪರೀಕ್ಷೆಗೆ ತಯಾರಾಗಲು ರಾತ್ರಿಪೂರ್ತಿ ಶಾಲೆಯಲ್ಲೇ ಉಳಿಯಬೇಕು ಎಂದು 17 ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಶಾಲೆಯಲ್ಲೇ ಉಳಿಸಿಕೊಂಡಿದ್ದಾರೆ. ಈ ವೇಳೆ, ವಿದ್ಯಾರ್ಥಿನಿಯರಿಗೆ ಮಾದಕವಸ್ತುವನ್ನು ನೀಡಿದ್ದಾರೆ ಮತ್ತು ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಅಲ್ಲದೆ, ಮರುದಿನ ವಿದ್ಯಾರ್ಥಿನಿಯರು ತಮ್ಮ ಮನೆಗೆ ತೆರಳಿದ್ದಾಗಿ ಹೇಳಿಕೊಂಡಿದ್ದಾರೆ.

ನವೆಂಬರ್ 18ರಂದು ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲಾಗಿದ್ದು, ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇಬ್ಬರು ಆರೋಪಿಗಳ ವಿರುದ್ದ ಸೆಕ್ಷನ್ 328 (ಮಹಿಳೆಯರ ನಮ್ರತೆಗೆ ಆಕ್ರೋಶ), 358 (ವಿಷದಿಂದ ನೋವುಂಟುಮಾಡುವುದು), 506 (ಕ್ರಿಮಿನಲ್ ಬೆದರಿಕೆ ) ಮತ್ತು POCSO ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೆ, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಅಮಾನತುಗೊಳಿಸಿದ್ದೇವೆ” ಎಂದು ಮುಜಫರ್‌ನಗರ ಪೊಲೀಸ್ ಮುಖ್ಯಸ್ಥ ಅಭಿಷೇಕ್ ಯಾದವ್ ಹೇಳಿದ್ದಾರೆ.

ಸ್ಥಳೀಯ ಶಾಸಕ ಪ್ರಮೋದ್ ಉತ್ವಾಲ್ ಅವರು ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ನಂತರವೇ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.


ಇದನ್ನೂ ಓದಿ: ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ


“ಪ್ರಾಯೋಗಿಕ ಪರೀಕ್ಷೆಯ ನೆಪದಲ್ಲಿ 16-17 ಹುಡುಗಿಯರನ್ನು ಶಾಲೆಯಲ್ಲಿ ರಾತ್ರಿ ಉಳಿದುಕೊಳ್ಳುವಂತೆ ಪ್ರಾಂಶುಪಾಲ ಯೋಗೇಶ್  ಹೇಳಿದ್ದಾರೆ. ಹುಡುಗಿಯರನ್ನು ಕಾಪಿ ಬರೆಯುವಂತೆ ಸೂಚಿಸಿದ್ದಾರೆ. ನಂತರ ಅವರನ್ನು ರಾತ್ರಿ ಶಾಲೆಯಲ್ಲೇ ಉಳಿದುಕೊಳ್ಳಲು ಹೇಳಿದ್ದಾರೆ. ಮರುದಿನವೂ ಹೆಚ್ಚಿನ ಪ್ರಾಕ್ಟಿಕಲ್ಸ್ ಇರುತ್ತದೆ ಎಂದು ತಿಳಿಸಿದ್ದಾರೆ. ನಂತರ, ಬಾಲಕಿಯರಿಗೆ ಖಿಚಡಿ ನೀಡಲಾಗಿದೆ. ಅದನ್ನು, ತಿಂದ ನಂತರ ಪ್ರಜ್ಞೆ ಕಳೆದುಕೊಂಡರು ಮತ್ತು ನಂತರ ಕಿರುಕುಳ ನೀಡಿದ್ದಾರೆ”ಎಂದು ದೂರುದಾರರು ಆರೋಪಿಸಿದ್ದಾರೆ.

“ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುವ 29 ವಿದ್ಯಾರ್ಥಿಗಳಿದ್ದಾರೆ. ಆದರೆ ಹುಡುಗಿಯರನ್ನು ಮಾತ್ರ ರಾತ್ರಿ ಉಳಿದುಕೊಳ್ಳಲು ಹೇಳಲಾಗಿದೆ. ಶಾಲೆಯಲ್ಲಿ ಉಳಿದುಕೊಂಡ ಮಕ್ಕಳಿಗೆ ನಿದ್ರಾಜನಕವನ್ನು ನೀಡಲಾಗಿದೆ” ಎಂದು ಮತ್ತೊಬ್ಬ ದೂರುದಾರರು ಹೇಳಿದ್ದಾರೆ.

ಪರೀಕ್ಷಾ ಮಂಡಳಿಯು ಪ್ರಾಯೋಗಿಕ ಪರೀಕ್ಷೆಗಳಿಗೆ ದಿನಾಂಕಗಳನ್ನು ಘೋಷಿಸಿದೆಯೇ ಎಂದು ವಿದ್ಯಾರ್ಥಿನಿಯರನ್ನು ಪ್ರಶ್ನಿಸಿದಾಗ, ಒಬ್ಬ ವಿದ್ಯಾರ್ಥಿನಿ ತಮಗೆ ಪರೀಕ್ಷಾ ದಿನಾಂಕದ ಬಗ್ಗೆ ತಿಳಿದಿರಲಿಲ್ಲ. ಆದರೆ, ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವಂತೆ ಹೇಳಲಾಗಿತ್ತು ಎಂದು ಹೇಳಿದ್ದಾರೆ.

ಇದು ಯಾವ ಪ್ರಾಕ್ಟಿಕಲ್ ಎಕ್ಸಾಮ್ ಎಂದು ಕೇಳಿದಾಗ “ಹಿಂದಿ ಪ್ರಾಕ್ಟಿಕಲ್” ಎಂದು ವಿದ್ಯಾರ್ಥಿನಿ ಉತ್ತರಿಸಿದ್ದಾರೆ.

“ಪ್ರಾಕ್ಟಿಕಲ್ ಕೆ ಲಿಯೇ ಬುಲಾಯಾ ಥಾ (ನಮ್ಮನ್ನು ಪ್ರಾಯೋಗಿಕ ಪರೀಕ್ಷೆಗಳಿಗೆ ಕರೆಯಲಾಗಿತ್ತು)” ನಂತರ, ಪ್ರಿನ್ಸಿಪಾಲರು ತಯಾರಿಸಿದ ಕಿಚಡಿಯನ್ನು ನಮಗೆ ನೀಡಲಾಗಿಯಿತು. ಅದನ್ನು ತಿಂದ ಬಳಿಕ ಪ್ರಜ್ಞಾಹೀನರಾದೆವು. ನಮಗೆ ಅವರು ಕಿರುಕುಳ ನೀಡಿದ್ದಾರೆ ಎಂದು ಮತ್ತೊಬ್ಬ ವಿದ್ಯಾರ್ಥಿನಿ ಹೇಳಿದ್ದಾರೆ. ಘಟನೆಯ ಬಗ್ಗೆ ಮಾತನಾಡದಂತೆ ನಮಗೆ ಒತ್ತಡ ಹೇರಲಾಗುತ್ತಿದೆ ಎಂದು ಬಾಲಕಿಯರು ಆರೋಪಿಸಿದ್ದಾರೆ.


ಇದನ್ನೂ ಓದಿ: ಮತಾಂತರ ಆರೋಪ: ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳದಿಂದ ಶಾಲೆ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...