Homeಮುಖಪುಟಯುಪಿ: 17 ವಿದ್ಯಾರ್ಥಿನಿಯರಿಗೆ ಮಾದಕವಸ್ತು ನೀಡಿ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲ

ಯುಪಿ: 17 ವಿದ್ಯಾರ್ಥಿನಿಯರಿಗೆ ಮಾದಕವಸ್ತು ನೀಡಿ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲ

- Advertisement -
- Advertisement -

ರಾತ್ರಿ ವೇಳೆ ಶಾಲೆಯಲ್ಲೇ ವಿದ್ಯಾರ್ಥಿನಿಯನ್ನು ಉಳಿಸಿಕೊಂಡು ಪ್ರಾಂಶುಪಾಲ ಹಾಗೂ ಆತನ ಸಹಚರ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌‌ನಗರ ಜಿಲ್ಲೆಯಲ್ಲಿ ನಡೆದಿದೆ.

10ನೇ ತರಗತಿಯಲ್ಲಿ ಓದುತ್ತಿದ್ದ 17 ವಿದ್ಯಾರ್ಥಿನಿಯರನ್ನು ಪ್ರಾಯೋಗಿಕ ಪರೀಕ್ಷೆಯ ತಯಾರಿಗಾಗಿ ರಾತ್ರಿ ಶಾಲೆಯಲ್ಲೇ ಉಳಿಯಬೇಕು ಎಂದು ಉಳಿಸಿಕೊಂಡು, ಪ್ರಾಂಶುಪಾಲರು ಮತ್ತು ಅವರ ಸಹಚರರು ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ.

ಸಿಬಿಎಸ್‌ಇ ಪಠ್ಯಕ್ರಮದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೇರೊಂದು ಶಾಲೆಯಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯುತ್ತದೆ. ಅದಕ್ಕಾಗಿ, ಪರೀಕ್ಷೆಗೆ ತಯಾರಾಗಲು ರಾತ್ರಿಪೂರ್ತಿ ಶಾಲೆಯಲ್ಲೇ ಉಳಿಯಬೇಕು ಎಂದು 17 ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಶಾಲೆಯಲ್ಲೇ ಉಳಿಸಿಕೊಂಡಿದ್ದಾರೆ. ಈ ವೇಳೆ, ವಿದ್ಯಾರ್ಥಿನಿಯರಿಗೆ ಮಾದಕವಸ್ತುವನ್ನು ನೀಡಿದ್ದಾರೆ ಮತ್ತು ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಅಲ್ಲದೆ, ಮರುದಿನ ವಿದ್ಯಾರ್ಥಿನಿಯರು ತಮ್ಮ ಮನೆಗೆ ತೆರಳಿದ್ದಾಗಿ ಹೇಳಿಕೊಂಡಿದ್ದಾರೆ.

ನವೆಂಬರ್ 18ರಂದು ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲಾಗಿದ್ದು, ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇಬ್ಬರು ಆರೋಪಿಗಳ ವಿರುದ್ದ ಸೆಕ್ಷನ್ 328 (ಮಹಿಳೆಯರ ನಮ್ರತೆಗೆ ಆಕ್ರೋಶ), 358 (ವಿಷದಿಂದ ನೋವುಂಟುಮಾಡುವುದು), 506 (ಕ್ರಿಮಿನಲ್ ಬೆದರಿಕೆ ) ಮತ್ತು POCSO ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೆ, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಅಮಾನತುಗೊಳಿಸಿದ್ದೇವೆ” ಎಂದು ಮುಜಫರ್‌ನಗರ ಪೊಲೀಸ್ ಮುಖ್ಯಸ್ಥ ಅಭಿಷೇಕ್ ಯಾದವ್ ಹೇಳಿದ್ದಾರೆ.

ಸ್ಥಳೀಯ ಶಾಸಕ ಪ್ರಮೋದ್ ಉತ್ವಾಲ್ ಅವರು ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ನಂತರವೇ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.


ಇದನ್ನೂ ಓದಿ: ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ


“ಪ್ರಾಯೋಗಿಕ ಪರೀಕ್ಷೆಯ ನೆಪದಲ್ಲಿ 16-17 ಹುಡುಗಿಯರನ್ನು ಶಾಲೆಯಲ್ಲಿ ರಾತ್ರಿ ಉಳಿದುಕೊಳ್ಳುವಂತೆ ಪ್ರಾಂಶುಪಾಲ ಯೋಗೇಶ್  ಹೇಳಿದ್ದಾರೆ. ಹುಡುಗಿಯರನ್ನು ಕಾಪಿ ಬರೆಯುವಂತೆ ಸೂಚಿಸಿದ್ದಾರೆ. ನಂತರ ಅವರನ್ನು ರಾತ್ರಿ ಶಾಲೆಯಲ್ಲೇ ಉಳಿದುಕೊಳ್ಳಲು ಹೇಳಿದ್ದಾರೆ. ಮರುದಿನವೂ ಹೆಚ್ಚಿನ ಪ್ರಾಕ್ಟಿಕಲ್ಸ್ ಇರುತ್ತದೆ ಎಂದು ತಿಳಿಸಿದ್ದಾರೆ. ನಂತರ, ಬಾಲಕಿಯರಿಗೆ ಖಿಚಡಿ ನೀಡಲಾಗಿದೆ. ಅದನ್ನು, ತಿಂದ ನಂತರ ಪ್ರಜ್ಞೆ ಕಳೆದುಕೊಂಡರು ಮತ್ತು ನಂತರ ಕಿರುಕುಳ ನೀಡಿದ್ದಾರೆ”ಎಂದು ದೂರುದಾರರು ಆರೋಪಿಸಿದ್ದಾರೆ.

“ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುವ 29 ವಿದ್ಯಾರ್ಥಿಗಳಿದ್ದಾರೆ. ಆದರೆ ಹುಡುಗಿಯರನ್ನು ಮಾತ್ರ ರಾತ್ರಿ ಉಳಿದುಕೊಳ್ಳಲು ಹೇಳಲಾಗಿದೆ. ಶಾಲೆಯಲ್ಲಿ ಉಳಿದುಕೊಂಡ ಮಕ್ಕಳಿಗೆ ನಿದ್ರಾಜನಕವನ್ನು ನೀಡಲಾಗಿದೆ” ಎಂದು ಮತ್ತೊಬ್ಬ ದೂರುದಾರರು ಹೇಳಿದ್ದಾರೆ.

ಪರೀಕ್ಷಾ ಮಂಡಳಿಯು ಪ್ರಾಯೋಗಿಕ ಪರೀಕ್ಷೆಗಳಿಗೆ ದಿನಾಂಕಗಳನ್ನು ಘೋಷಿಸಿದೆಯೇ ಎಂದು ವಿದ್ಯಾರ್ಥಿನಿಯರನ್ನು ಪ್ರಶ್ನಿಸಿದಾಗ, ಒಬ್ಬ ವಿದ್ಯಾರ್ಥಿನಿ ತಮಗೆ ಪರೀಕ್ಷಾ ದಿನಾಂಕದ ಬಗ್ಗೆ ತಿಳಿದಿರಲಿಲ್ಲ. ಆದರೆ, ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವಂತೆ ಹೇಳಲಾಗಿತ್ತು ಎಂದು ಹೇಳಿದ್ದಾರೆ.

ಇದು ಯಾವ ಪ್ರಾಕ್ಟಿಕಲ್ ಎಕ್ಸಾಮ್ ಎಂದು ಕೇಳಿದಾಗ “ಹಿಂದಿ ಪ್ರಾಕ್ಟಿಕಲ್” ಎಂದು ವಿದ್ಯಾರ್ಥಿನಿ ಉತ್ತರಿಸಿದ್ದಾರೆ.

“ಪ್ರಾಕ್ಟಿಕಲ್ ಕೆ ಲಿಯೇ ಬುಲಾಯಾ ಥಾ (ನಮ್ಮನ್ನು ಪ್ರಾಯೋಗಿಕ ಪರೀಕ್ಷೆಗಳಿಗೆ ಕರೆಯಲಾಗಿತ್ತು)” ನಂತರ, ಪ್ರಿನ್ಸಿಪಾಲರು ತಯಾರಿಸಿದ ಕಿಚಡಿಯನ್ನು ನಮಗೆ ನೀಡಲಾಗಿಯಿತು. ಅದನ್ನು ತಿಂದ ಬಳಿಕ ಪ್ರಜ್ಞಾಹೀನರಾದೆವು. ನಮಗೆ ಅವರು ಕಿರುಕುಳ ನೀಡಿದ್ದಾರೆ ಎಂದು ಮತ್ತೊಬ್ಬ ವಿದ್ಯಾರ್ಥಿನಿ ಹೇಳಿದ್ದಾರೆ. ಘಟನೆಯ ಬಗ್ಗೆ ಮಾತನಾಡದಂತೆ ನಮಗೆ ಒತ್ತಡ ಹೇರಲಾಗುತ್ತಿದೆ ಎಂದು ಬಾಲಕಿಯರು ಆರೋಪಿಸಿದ್ದಾರೆ.


ಇದನ್ನೂ ಓದಿ: ಮತಾಂತರ ಆರೋಪ: ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳದಿಂದ ಶಾಲೆ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...