Homeಮುಖಪುಟಯುಪಿ ರಾಜ್ಯಸಭೆ ಚುನಾವಣೆ: 7 ಬಂಡಾಯ ಶಾಸಕರನ್ನು ಅಮಾನತುಗೊಳಿಸಿದ BSP!

ಯುಪಿ ರಾಜ್ಯಸಭೆ ಚುನಾವಣೆ: 7 ಬಂಡಾಯ ಶಾಸಕರನ್ನು ಅಮಾನತುಗೊಳಿಸಿದ BSP!

ಬಂಡಾಯ ಶಾಸಕರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಬುಧವಾರ ಭೇಟಿಯಾಗಿದ್ದು, ಅವರು ಪಕ್ಷ ಬದಲಿಸಬಹುದು ಎಂಬ ಊಹಾಪೋಹಗಳಿಗೆ ಬಲ ನೀಡಿದ್ದರು.

- Advertisement -
- Advertisement -

ಉತ್ತರಪ್ರದೇಶದ ರಾಜ್ಯಸಭಾ ಚುನಾವಣೆಗೆ ಬಹುಜನ ಸಮಾಜ ಪಕ್ಷದ (BSP) ಅಧಿಕೃತ ಅಭ್ಯರ್ಥಿ ರಾಮ್‌ಜೀ ಗೌತಮ್ ಅವರನ್ನು ನಾಮನಿರ್ದೇಶನವನ್ನು ವಿರೋಧಿಸಿದ್ದ ಪಕ್ಷದ ಏಳು ಬಂಡಾಯ ಶಾಸಕರನ್ನು ಮುಖ್ಯಸ್ಥೆ ಮಾಯಾವತಿ ಇಂದು ಅಮಾನತುಗೊಳಿಸಿದ್ದಾರೆ. 7 ಶಾಸಕರಲ್ಲಿ ಚೌಧರಿ ಅಸ್ಲಂ ಅಲಿ, ಹಕೀಮ್ ಲಾಲ್ ಬೈಂದ್, ಮೊಹಮ್ಮದ್ ಮುಜತಾಬಾ ಸಿದ್ದಿಕಿ, ಅಸ್ಲಂ ರೈನಿ, ಸುಷ್ಮಾ ಪಟೇಲ್, ಹರ್ಗೋವಿಂದ್ ಭಾರ್ಗವ ಮತ್ತು ಬಂದನಾ ಸಿಂಗ್ ಸೇರಿದ್ದಾರೆ.

ಬಂಡಾಯ ಶಾಸಕರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಬುಧವಾರ ಭೇಟಿಯಾಗಿದ್ದು, ಅವರು ಪಕ್ಷ ಬದಲಿಸಬಹುದು ಎಂಬ ಊಹಾಪೋಹಗಳಿಗೆ ಬಲ ನೀಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ 6 ಶಾಸಕರ ಕುರಿತ ಬಿಎಸ್‌ಪಿ ಅರ್ಜಿ ವಜಾಗೊಳಿಸಿದ ಸುಪ್ರೀಂ

ಅವರಲ್ಲಿ ನಾಲ್ವರು, ರಾಮ್‌ಜೀ ಗೌತಮ್ ಅವರ ಹೆಸರನ್ನು ರಾಜ್ಯಸಭಾ ಚುನಾವಣೆಗೆ ನಾಮನಿರ್ದೇಶನ ಮಾಡುವ ಬಗ್ಗೆ ತಮ್ಮ ಸಹಿಯನ್ನು ನಕಲಿ ಮಾಡಲಾಗಿದೆ ಎಂದು ಅಫಿಡವಿಟ್ ಸಹ ಸಲ್ಲಿಸಿದ್ದರೆಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಇದರ ನಡುವೆಯೇ ಖಾಲಿ ಬಿದ್ದಿರುವ 10 ಉತ್ತರ ಪ್ರದೇಶದ ಸ್ಥಾನಗಳಿಗೆ ನವೆಂಬರ್ 9 ರ ಚುನಾವಣೆಗೆ BSP ಅಭ್ಯರ್ಥಿಯಾಗಿ ರಾಮ್‌ಜೀ ಗೌತಮ್ ಅವರ ನಾಮನಿರ್ದೇಶನವನ್ನು ರಿಟರ್ನಿಂಗ್ ಅಧಿಕಾರಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಸಿಎಎ, ಎನ್‌ಪಿಆರ್, ಆರ್ಥಿಕತೆಯ ವಿರುದ್ಧ ಪ್ರತಿಪಕ್ಷಗಳ ಸಭೆ ಇಂದು: ಟಿಎಂಸಿ, ಬಿಎಸ್‌ಪಿ, ಆಪ್‌ ಗೈರು..

ಮಾಯಾವತಿ ಅವರ ಪಕ್ಷವು ಸೋಮವಾರ ರಾಜ್ಯಸಭಾ ಚುನಾವಣೆಗೆ ರಾಮ್‌ಜೀ ಗೌತಮ್‌ಗೆ ಸಾಕಷ್ಟು ಬೆಂಬಲವಿಲ್ಲದಿದ್ದರೂ ಸಹ ಅವರನ್ನು ಕಣಕ್ಕಿಳಿಸಿತ್ತು. ಇತರ ಬಿಜೆಪಿಯೇತರ ಪಕ್ಷಗಳು ಅವರ ಉಮೇದುವಾರಿಕೆಯನ್ನು (ನಾಮನಿರ್ದೇಶನ) ಬೆಂಬಲಿಸುವ ನಿರೀಕ್ಷೆಯಿದೆ ಎಂದು BSP ನಾಯಕರು ಸೂಚಿಸಿದ್ದರು.

ಒಟ್ಟಾರೆಯಾಗಿ, ಬಿಜೆಪಿಯ ಎಂಟು ಮಂದಿ ಸೇರಿದಂತೆ 11 ಅಭ್ಯರ್ಥಿಗಳು ಉತ್ತರಪ್ರದೇಶದ 10 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಖಾಲಿಯಿರುವ ಉತ್ತರ ಪ್ರದೇಶದ ಈ 10 ರಾಜ್ಯಸಭಾ ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ಈ ಹಿಂದೆ ಭಾರತೀಯ ಜನತಾ ಪಕ್ಷ (ಬಿಜೆಪಿ), 4 ಎಸ್‌ಪಿ, 2 ಬಿಎಸ್‌ಪಿ ಮತ್ತು 1 ಕಾಂಗ್ರೆಸ್ ಗೆದ್ದುಕೊಂಡಿದೆ.


ಇದನ್ನೂ ಓದಿ: ಯುಪಿ ಉಪಚುನಾವಣೆ: ಹೆಚ್ಚುತ್ತಿರುವ ಅಪರಾಧಗಳ ನೆರಳಲ್ಲಿ ಮತದಾರರು ಯಾರ ಕೈಹಿಡಿಯಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...