Homeಮುಖಪುಟಯುಪಿ ರಾಜ್ಯಸಭೆ ಚುನಾವಣೆ: 7 ಬಂಡಾಯ ಶಾಸಕರನ್ನು ಅಮಾನತುಗೊಳಿಸಿದ BSP!

ಯುಪಿ ರಾಜ್ಯಸಭೆ ಚುನಾವಣೆ: 7 ಬಂಡಾಯ ಶಾಸಕರನ್ನು ಅಮಾನತುಗೊಳಿಸಿದ BSP!

ಬಂಡಾಯ ಶಾಸಕರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಬುಧವಾರ ಭೇಟಿಯಾಗಿದ್ದು, ಅವರು ಪಕ್ಷ ಬದಲಿಸಬಹುದು ಎಂಬ ಊಹಾಪೋಹಗಳಿಗೆ ಬಲ ನೀಡಿದ್ದರು.

- Advertisement -
- Advertisement -

ಉತ್ತರಪ್ರದೇಶದ ರಾಜ್ಯಸಭಾ ಚುನಾವಣೆಗೆ ಬಹುಜನ ಸಮಾಜ ಪಕ್ಷದ (BSP) ಅಧಿಕೃತ ಅಭ್ಯರ್ಥಿ ರಾಮ್‌ಜೀ ಗೌತಮ್ ಅವರನ್ನು ನಾಮನಿರ್ದೇಶನವನ್ನು ವಿರೋಧಿಸಿದ್ದ ಪಕ್ಷದ ಏಳು ಬಂಡಾಯ ಶಾಸಕರನ್ನು ಮುಖ್ಯಸ್ಥೆ ಮಾಯಾವತಿ ಇಂದು ಅಮಾನತುಗೊಳಿಸಿದ್ದಾರೆ. 7 ಶಾಸಕರಲ್ಲಿ ಚೌಧರಿ ಅಸ್ಲಂ ಅಲಿ, ಹಕೀಮ್ ಲಾಲ್ ಬೈಂದ್, ಮೊಹಮ್ಮದ್ ಮುಜತಾಬಾ ಸಿದ್ದಿಕಿ, ಅಸ್ಲಂ ರೈನಿ, ಸುಷ್ಮಾ ಪಟೇಲ್, ಹರ್ಗೋವಿಂದ್ ಭಾರ್ಗವ ಮತ್ತು ಬಂದನಾ ಸಿಂಗ್ ಸೇರಿದ್ದಾರೆ.

ಬಂಡಾಯ ಶಾಸಕರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಬುಧವಾರ ಭೇಟಿಯಾಗಿದ್ದು, ಅವರು ಪಕ್ಷ ಬದಲಿಸಬಹುದು ಎಂಬ ಊಹಾಪೋಹಗಳಿಗೆ ಬಲ ನೀಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ 6 ಶಾಸಕರ ಕುರಿತ ಬಿಎಸ್‌ಪಿ ಅರ್ಜಿ ವಜಾಗೊಳಿಸಿದ ಸುಪ್ರೀಂ

ಅವರಲ್ಲಿ ನಾಲ್ವರು, ರಾಮ್‌ಜೀ ಗೌತಮ್ ಅವರ ಹೆಸರನ್ನು ರಾಜ್ಯಸಭಾ ಚುನಾವಣೆಗೆ ನಾಮನಿರ್ದೇಶನ ಮಾಡುವ ಬಗ್ಗೆ ತಮ್ಮ ಸಹಿಯನ್ನು ನಕಲಿ ಮಾಡಲಾಗಿದೆ ಎಂದು ಅಫಿಡವಿಟ್ ಸಹ ಸಲ್ಲಿಸಿದ್ದರೆಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಇದರ ನಡುವೆಯೇ ಖಾಲಿ ಬಿದ್ದಿರುವ 10 ಉತ್ತರ ಪ್ರದೇಶದ ಸ್ಥಾನಗಳಿಗೆ ನವೆಂಬರ್ 9 ರ ಚುನಾವಣೆಗೆ BSP ಅಭ್ಯರ್ಥಿಯಾಗಿ ರಾಮ್‌ಜೀ ಗೌತಮ್ ಅವರ ನಾಮನಿರ್ದೇಶನವನ್ನು ರಿಟರ್ನಿಂಗ್ ಅಧಿಕಾರಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಸಿಎಎ, ಎನ್‌ಪಿಆರ್, ಆರ್ಥಿಕತೆಯ ವಿರುದ್ಧ ಪ್ರತಿಪಕ್ಷಗಳ ಸಭೆ ಇಂದು: ಟಿಎಂಸಿ, ಬಿಎಸ್‌ಪಿ, ಆಪ್‌ ಗೈರು..

ಮಾಯಾವತಿ ಅವರ ಪಕ್ಷವು ಸೋಮವಾರ ರಾಜ್ಯಸಭಾ ಚುನಾವಣೆಗೆ ರಾಮ್‌ಜೀ ಗೌತಮ್‌ಗೆ ಸಾಕಷ್ಟು ಬೆಂಬಲವಿಲ್ಲದಿದ್ದರೂ ಸಹ ಅವರನ್ನು ಕಣಕ್ಕಿಳಿಸಿತ್ತು. ಇತರ ಬಿಜೆಪಿಯೇತರ ಪಕ್ಷಗಳು ಅವರ ಉಮೇದುವಾರಿಕೆಯನ್ನು (ನಾಮನಿರ್ದೇಶನ) ಬೆಂಬಲಿಸುವ ನಿರೀಕ್ಷೆಯಿದೆ ಎಂದು BSP ನಾಯಕರು ಸೂಚಿಸಿದ್ದರು.

ಒಟ್ಟಾರೆಯಾಗಿ, ಬಿಜೆಪಿಯ ಎಂಟು ಮಂದಿ ಸೇರಿದಂತೆ 11 ಅಭ್ಯರ್ಥಿಗಳು ಉತ್ತರಪ್ರದೇಶದ 10 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಖಾಲಿಯಿರುವ ಉತ್ತರ ಪ್ರದೇಶದ ಈ 10 ರಾಜ್ಯಸಭಾ ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ಈ ಹಿಂದೆ ಭಾರತೀಯ ಜನತಾ ಪಕ್ಷ (ಬಿಜೆಪಿ), 4 ಎಸ್‌ಪಿ, 2 ಬಿಎಸ್‌ಪಿ ಮತ್ತು 1 ಕಾಂಗ್ರೆಸ್ ಗೆದ್ದುಕೊಂಡಿದೆ.


ಇದನ್ನೂ ಓದಿ: ಯುಪಿ ಉಪಚುನಾವಣೆ: ಹೆಚ್ಚುತ್ತಿರುವ ಅಪರಾಧಗಳ ನೆರಳಲ್ಲಿ ಮತದಾರರು ಯಾರ ಕೈಹಿಡಿಯಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...