Homeಮುಖಪುಟಯುಪಿ ರಾಜ್ಯಸಭೆ ಚುನಾವಣೆ: 7 ಬಂಡಾಯ ಶಾಸಕರನ್ನು ಅಮಾನತುಗೊಳಿಸಿದ BSP!

ಯುಪಿ ರಾಜ್ಯಸಭೆ ಚುನಾವಣೆ: 7 ಬಂಡಾಯ ಶಾಸಕರನ್ನು ಅಮಾನತುಗೊಳಿಸಿದ BSP!

ಬಂಡಾಯ ಶಾಸಕರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಬುಧವಾರ ಭೇಟಿಯಾಗಿದ್ದು, ಅವರು ಪಕ್ಷ ಬದಲಿಸಬಹುದು ಎಂಬ ಊಹಾಪೋಹಗಳಿಗೆ ಬಲ ನೀಡಿದ್ದರು.

- Advertisement -
- Advertisement -

ಉತ್ತರಪ್ರದೇಶದ ರಾಜ್ಯಸಭಾ ಚುನಾವಣೆಗೆ ಬಹುಜನ ಸಮಾಜ ಪಕ್ಷದ (BSP) ಅಧಿಕೃತ ಅಭ್ಯರ್ಥಿ ರಾಮ್‌ಜೀ ಗೌತಮ್ ಅವರನ್ನು ನಾಮನಿರ್ದೇಶನವನ್ನು ವಿರೋಧಿಸಿದ್ದ ಪಕ್ಷದ ಏಳು ಬಂಡಾಯ ಶಾಸಕರನ್ನು ಮುಖ್ಯಸ್ಥೆ ಮಾಯಾವತಿ ಇಂದು ಅಮಾನತುಗೊಳಿಸಿದ್ದಾರೆ. 7 ಶಾಸಕರಲ್ಲಿ ಚೌಧರಿ ಅಸ್ಲಂ ಅಲಿ, ಹಕೀಮ್ ಲಾಲ್ ಬೈಂದ್, ಮೊಹಮ್ಮದ್ ಮುಜತಾಬಾ ಸಿದ್ದಿಕಿ, ಅಸ್ಲಂ ರೈನಿ, ಸುಷ್ಮಾ ಪಟೇಲ್, ಹರ್ಗೋವಿಂದ್ ಭಾರ್ಗವ ಮತ್ತು ಬಂದನಾ ಸಿಂಗ್ ಸೇರಿದ್ದಾರೆ.

ಬಂಡಾಯ ಶಾಸಕರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಬುಧವಾರ ಭೇಟಿಯಾಗಿದ್ದು, ಅವರು ಪಕ್ಷ ಬದಲಿಸಬಹುದು ಎಂಬ ಊಹಾಪೋಹಗಳಿಗೆ ಬಲ ನೀಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ 6 ಶಾಸಕರ ಕುರಿತ ಬಿಎಸ್‌ಪಿ ಅರ್ಜಿ ವಜಾಗೊಳಿಸಿದ ಸುಪ್ರೀಂ

ಅವರಲ್ಲಿ ನಾಲ್ವರು, ರಾಮ್‌ಜೀ ಗೌತಮ್ ಅವರ ಹೆಸರನ್ನು ರಾಜ್ಯಸಭಾ ಚುನಾವಣೆಗೆ ನಾಮನಿರ್ದೇಶನ ಮಾಡುವ ಬಗ್ಗೆ ತಮ್ಮ ಸಹಿಯನ್ನು ನಕಲಿ ಮಾಡಲಾಗಿದೆ ಎಂದು ಅಫಿಡವಿಟ್ ಸಹ ಸಲ್ಲಿಸಿದ್ದರೆಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಇದರ ನಡುವೆಯೇ ಖಾಲಿ ಬಿದ್ದಿರುವ 10 ಉತ್ತರ ಪ್ರದೇಶದ ಸ್ಥಾನಗಳಿಗೆ ನವೆಂಬರ್ 9 ರ ಚುನಾವಣೆಗೆ BSP ಅಭ್ಯರ್ಥಿಯಾಗಿ ರಾಮ್‌ಜೀ ಗೌತಮ್ ಅವರ ನಾಮನಿರ್ದೇಶನವನ್ನು ರಿಟರ್ನಿಂಗ್ ಅಧಿಕಾರಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಸಿಎಎ, ಎನ್‌ಪಿಆರ್, ಆರ್ಥಿಕತೆಯ ವಿರುದ್ಧ ಪ್ರತಿಪಕ್ಷಗಳ ಸಭೆ ಇಂದು: ಟಿಎಂಸಿ, ಬಿಎಸ್‌ಪಿ, ಆಪ್‌ ಗೈರು..

ಮಾಯಾವತಿ ಅವರ ಪಕ್ಷವು ಸೋಮವಾರ ರಾಜ್ಯಸಭಾ ಚುನಾವಣೆಗೆ ರಾಮ್‌ಜೀ ಗೌತಮ್‌ಗೆ ಸಾಕಷ್ಟು ಬೆಂಬಲವಿಲ್ಲದಿದ್ದರೂ ಸಹ ಅವರನ್ನು ಕಣಕ್ಕಿಳಿಸಿತ್ತು. ಇತರ ಬಿಜೆಪಿಯೇತರ ಪಕ್ಷಗಳು ಅವರ ಉಮೇದುವಾರಿಕೆಯನ್ನು (ನಾಮನಿರ್ದೇಶನ) ಬೆಂಬಲಿಸುವ ನಿರೀಕ್ಷೆಯಿದೆ ಎಂದು BSP ನಾಯಕರು ಸೂಚಿಸಿದ್ದರು.

ಒಟ್ಟಾರೆಯಾಗಿ, ಬಿಜೆಪಿಯ ಎಂಟು ಮಂದಿ ಸೇರಿದಂತೆ 11 ಅಭ್ಯರ್ಥಿಗಳು ಉತ್ತರಪ್ರದೇಶದ 10 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಖಾಲಿಯಿರುವ ಉತ್ತರ ಪ್ರದೇಶದ ಈ 10 ರಾಜ್ಯಸಭಾ ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ಈ ಹಿಂದೆ ಭಾರತೀಯ ಜನತಾ ಪಕ್ಷ (ಬಿಜೆಪಿ), 4 ಎಸ್‌ಪಿ, 2 ಬಿಎಸ್‌ಪಿ ಮತ್ತು 1 ಕಾಂಗ್ರೆಸ್ ಗೆದ್ದುಕೊಂಡಿದೆ.


ಇದನ್ನೂ ಓದಿ: ಯುಪಿ ಉಪಚುನಾವಣೆ: ಹೆಚ್ಚುತ್ತಿರುವ ಅಪರಾಧಗಳ ನೆರಳಲ್ಲಿ ಮತದಾರರು ಯಾರ ಕೈಹಿಡಿಯಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...