Homeಮುಖಪುಟಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಕುಟುಂಬವು ಪೊಲೀಸರೊಂದಿಗೆ ವಾದಿಸುತ್ತಿರುವ ಮತ್ತು ಯುವತಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಒಯ್ಯುತ್ತಿರುವ ದೃಶ್ಯಗಳು ಸೆರೆಯಾಗಿವೆ.

- Advertisement -
- Advertisement -

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆಗೊಳಗಾಗಿದ್ದ ಯುವತಿ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಯುವತಿಯ ಶವವನ್ನು ಅಂತ್ಯ ಸಂಸ್ಕಾರ ಮಾಡುವುದಕ್ಕೆ ಕುಟುಂಬದವರಿಗೆ ಕೂಡಾ ಅನುಮತಿ ನೀಡದ ಉತ್ತರ ಪ್ರದೇಶದ ಪೊಲೀಸರು ತಾವೇ ಮಧ್ಯರಾತ್ರಿ ಶವವನ್ನು ಸುಟ್ಟಿದ್ದಾರೆ. ಇದರ ವಿರುದ್ಧ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಮತ್ತು ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದು, ಈ ಸಂಬಂಧ ಕುಟುಂಬವು ಪೊಲೀಸರೊಂದಿಗೆ ವಾದಿಸುತ್ತಿರುವ ಮತ್ತು ಯುವತಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಒಯ್ಯುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕೊನೆಯ ಬಾರಿ ಮುಖವನ್ನು ನೋಡಲೂ ಅವಕಾಶ ಕೊಡದೇ ಪೊಲೀಸರು ಶವಸಂಸ್ಕಾರ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕುಟುಂಬದವರನ್ನು ಬಂಧನದಲ್ಲಿಟ್ಟಿರುವುದು. ಚಿತ್ರ ಕೃಪೆ: ಎನ್‌ಡಿಟಿವಿ

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್‌ನ 19 ವರ್ಷದ ಯುವತಿ ನಿನ್ನೆ ಬೆಳಿಗ್ಗೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಗಾಯಗಳು, ಮೂಳೆ ಮುರಿತ ಸೇರಿದಂತೆ ನಾಲಿಗೆ ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು. ನಿನ್ನೆ ದೆಹಲಿಗೆ ತೆರಳುವವರೆಗೂ ಆಕೆಯನ್ನು ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿಡಲಾಗಿತ್ತು.

ದೆಹಲಿ ಆಸ್ಪತ್ರೆಯ ಹೊರಗೆ ಪ್ರತಿಭಟನಾಕಾರರು ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎಂದು ಪ್ರತಿಭಟಿಸುತ್ತಿರುವಾಗ, ಸಂತ್ರಸ್ತೆಯ ಮೃತ ದೇಹವನ್ನು ಯುಪಿ ಪೊಲೀಸರು ತಮಗೆ ಅರಿವಿಲ್ಲದೆ ತೆಗೆದುಕೊಂಡುಹೋಗಿದ್ದಾರೆ ಎಂದು ಯುವತಿಯ ಸಹೋದರರು ಆರೋಪಿಸಿದ್ದಾರೆ.

ಆಕೆಯ ತಂದೆ ಮತ್ತು ಸಹೋದರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಅವರನ್ನು ಯುಪಿ ನಂಬರ್ ಪ್ಲೇಟ್ ಇರುವ ಕಪ್ಪು ಸ್ಕಾರ್ಪಿಯೋದಲ್ಲಿ ಪೊಲೀಸರು ಕರೆದೊಯ್ದರು ಎಂದು ತಿಳಿದುಬಂದಿದೆ.

 

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಯುವತಿಯ ಶವವನ್ನು ಮಧ್ಯರಾತ್ರಿಯಲ್ಲಿ ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್‌ನಲ್ಲಿರುವ ಹಳ್ಳಿಗೆ ಕೊಂಡೊಯ್ಯಲಾಯಿತು. ಪೊಲೀಸರು ಶವಸಂಸ್ಕಾರ ಮಾಡುತ್ತಿದ್ದಾರೆ ಎಂಬುದು ಕುಟುಂಬದವರಿಗೆ ತಿಳಿದನಂತರ ಇದನ್ನು ಕುಟುಂಬದವರು ಮತ್ತು ಗ್ರಾಮಸ್ಥರು ವಿರೋಧಿಸಿದ್ದಾರೆ. ಶವವನ್ನು ಮನೆಗೆ ತಂದು, ನಂತರ ಬೆಳಿಗ್ಗೆ ಶವಸಂಸ್ಕಾರ ಮಾಡುವಂತೆ ಆಕೆಯ ತಂದೆ ಬೇಡಿಕೊಂಡಿದ್ದಾರೆ.

ಕುಟುಂಬಸ್ಥರು ಮತ್ತು ಗ್ರಾಮಸ್ಥರು ಗೋಗರೆಯುತ್ತಿರುವುದು. ಚಿತ್ರಕೃಪೆ: ಎನ್‌ಡಿಟಿವಿ

ಆದರೂ, ಪ್ರತಿಭಟಿಸುತ್ತಿದ್ದವರನ್ನು ದೂರ ತಳ್ಳಿದ ಪೊಲೀಸರು ಸ್ಮಶಾನದ ಬಳಿಗೆ ವಾಹನವನ್ನು ತೆಗೆದುಕೊಂಡು ಹೋದರು.

“ಕೊನೆಯ ವಿಧಿಗಳಿಗಾಗಿ ಶವವನ್ನು ಮನೆಗೆ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್ಕರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಬೆಳಿಗ್ಗೆ 2:30 ಕ್ಕೆ, ಆಕೆಯ ಕುಟುಂಬದ ಬಹುಪಾಲು ಜನ ಮನೆಯಲ್ಲಿದ್ದಾಗ, ಪೊಲೀಸರು ಶವವನ್ನು ಸುಟ್ಟಿದ್ದಾರೆ. ವರದಿಗಾರರನ್ನು, ಕುಟುಂಬ ಮತ್ತು ಗ್ರಾಮಸ್ಥರನ್ನು ದೂರವಿರಿಸಲು ಹತ್ರಾಸ್ ಪೊಲೀಸರು ಮಾನವ ಸರಪಳಿಯನ್ನು ರಚಿಸಿದರು. ಪೊಲೀಸರು ಮಾತ್ರ ಹಾಜರಿದ್ದರು. ಕುಟುಂಬದವರು ಅವಳನ್ನು ಕೊನೆಯ ಬಾರಿಯೂ ನೋಡಲಾಗಲಿಲ್ಲ. ಅವರನ್ನು ಮನೆಯಲ್ಲಿ ಬಂಧಿಸಲಾಗಿದೆ” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಶವವನ್ನು ಸುಡುತ್ತಿರುವ ಪೊಲೀಸರು. ಚಿತ್ರಕೃಪೆ: ಎನ್‌ಡಿಟಿವಿ

ಇದನ್ನೂ ಓದಿ:ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಅತ್ಯಾಚಾರ ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾಲ್ವರು ಆರೋಪಿಗಳಾದ ಸಂದೀಪ್, ರಾಮು, ಲವ್ಕುಶ್ ಮತ್ತು ರವಿ ಮೇಲೆ ಸಾಮೂಹಿಕ ಅತ್ಯಾಚಾರ, ಸೆಕ್ಷನ್ 302 (ಕೊಲೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳನ್ನು ಹಾಕಲಾಗಿದೆ.

ಆರಂಭದಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿದ್ದ ಪೊಲೀಸರು, ಯುವತಿಯ ಔಪಚಾರಿಕ ಹೇಳಿಕೆಯ ನಂತರವೇ ಅತ್ಯಾಚಾರ ಆರೋಪಗಳನ್ನು ಸೇರಿಸಿದ್ದರು.

ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಂತ್ರಸ್ತರ ಮನವಿಗೆ ಸ್ಪಂದಿಸಲಿಲ್ಲ. ಆದರೆ ಸಾರ್ವಜನಿಕರ ಆಕ್ರೋಶದ ನಂತರ ಮಾತ್ರ ಪ್ರತಿಕ್ರಿಯಿಸಿದ್ದಾರೆ ಎನ್ನುವ ಯುವತಿಯ ಕುಟುಂಬದ ಆರೋಪವನ್ನು ಯುಪಿ ಪೊಲೀಸರು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...