Homeಮುಖಪುಟಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಕುಟುಂಬವು ಪೊಲೀಸರೊಂದಿಗೆ ವಾದಿಸುತ್ತಿರುವ ಮತ್ತು ಯುವತಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಒಯ್ಯುತ್ತಿರುವ ದೃಶ್ಯಗಳು ಸೆರೆಯಾಗಿವೆ.

- Advertisement -
- Advertisement -

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆಗೊಳಗಾಗಿದ್ದ ಯುವತಿ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಯುವತಿಯ ಶವವನ್ನು ಅಂತ್ಯ ಸಂಸ್ಕಾರ ಮಾಡುವುದಕ್ಕೆ ಕುಟುಂಬದವರಿಗೆ ಕೂಡಾ ಅನುಮತಿ ನೀಡದ ಉತ್ತರ ಪ್ರದೇಶದ ಪೊಲೀಸರು ತಾವೇ ಮಧ್ಯರಾತ್ರಿ ಶವವನ್ನು ಸುಟ್ಟಿದ್ದಾರೆ. ಇದರ ವಿರುದ್ಧ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಮತ್ತು ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದು, ಈ ಸಂಬಂಧ ಕುಟುಂಬವು ಪೊಲೀಸರೊಂದಿಗೆ ವಾದಿಸುತ್ತಿರುವ ಮತ್ತು ಯುವತಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಒಯ್ಯುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕೊನೆಯ ಬಾರಿ ಮುಖವನ್ನು ನೋಡಲೂ ಅವಕಾಶ ಕೊಡದೇ ಪೊಲೀಸರು ಶವಸಂಸ್ಕಾರ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕುಟುಂಬದವರನ್ನು ಬಂಧನದಲ್ಲಿಟ್ಟಿರುವುದು. ಚಿತ್ರ ಕೃಪೆ: ಎನ್‌ಡಿಟಿವಿ

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್‌ನ 19 ವರ್ಷದ ಯುವತಿ ನಿನ್ನೆ ಬೆಳಿಗ್ಗೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಗಾಯಗಳು, ಮೂಳೆ ಮುರಿತ ಸೇರಿದಂತೆ ನಾಲಿಗೆ ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು. ನಿನ್ನೆ ದೆಹಲಿಗೆ ತೆರಳುವವರೆಗೂ ಆಕೆಯನ್ನು ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿಡಲಾಗಿತ್ತು.

ದೆಹಲಿ ಆಸ್ಪತ್ರೆಯ ಹೊರಗೆ ಪ್ರತಿಭಟನಾಕಾರರು ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎಂದು ಪ್ರತಿಭಟಿಸುತ್ತಿರುವಾಗ, ಸಂತ್ರಸ್ತೆಯ ಮೃತ ದೇಹವನ್ನು ಯುಪಿ ಪೊಲೀಸರು ತಮಗೆ ಅರಿವಿಲ್ಲದೆ ತೆಗೆದುಕೊಂಡುಹೋಗಿದ್ದಾರೆ ಎಂದು ಯುವತಿಯ ಸಹೋದರರು ಆರೋಪಿಸಿದ್ದಾರೆ.

ಆಕೆಯ ತಂದೆ ಮತ್ತು ಸಹೋದರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಅವರನ್ನು ಯುಪಿ ನಂಬರ್ ಪ್ಲೇಟ್ ಇರುವ ಕಪ್ಪು ಸ್ಕಾರ್ಪಿಯೋದಲ್ಲಿ ಪೊಲೀಸರು ಕರೆದೊಯ್ದರು ಎಂದು ತಿಳಿದುಬಂದಿದೆ.

 

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಯುವತಿಯ ಶವವನ್ನು ಮಧ್ಯರಾತ್ರಿಯಲ್ಲಿ ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್‌ನಲ್ಲಿರುವ ಹಳ್ಳಿಗೆ ಕೊಂಡೊಯ್ಯಲಾಯಿತು. ಪೊಲೀಸರು ಶವಸಂಸ್ಕಾರ ಮಾಡುತ್ತಿದ್ದಾರೆ ಎಂಬುದು ಕುಟುಂಬದವರಿಗೆ ತಿಳಿದನಂತರ ಇದನ್ನು ಕುಟುಂಬದವರು ಮತ್ತು ಗ್ರಾಮಸ್ಥರು ವಿರೋಧಿಸಿದ್ದಾರೆ. ಶವವನ್ನು ಮನೆಗೆ ತಂದು, ನಂತರ ಬೆಳಿಗ್ಗೆ ಶವಸಂಸ್ಕಾರ ಮಾಡುವಂತೆ ಆಕೆಯ ತಂದೆ ಬೇಡಿಕೊಂಡಿದ್ದಾರೆ.

ಕುಟುಂಬಸ್ಥರು ಮತ್ತು ಗ್ರಾಮಸ್ಥರು ಗೋಗರೆಯುತ್ತಿರುವುದು. ಚಿತ್ರಕೃಪೆ: ಎನ್‌ಡಿಟಿವಿ

ಆದರೂ, ಪ್ರತಿಭಟಿಸುತ್ತಿದ್ದವರನ್ನು ದೂರ ತಳ್ಳಿದ ಪೊಲೀಸರು ಸ್ಮಶಾನದ ಬಳಿಗೆ ವಾಹನವನ್ನು ತೆಗೆದುಕೊಂಡು ಹೋದರು.

“ಕೊನೆಯ ವಿಧಿಗಳಿಗಾಗಿ ಶವವನ್ನು ಮನೆಗೆ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್ಕರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಬೆಳಿಗ್ಗೆ 2:30 ಕ್ಕೆ, ಆಕೆಯ ಕುಟುಂಬದ ಬಹುಪಾಲು ಜನ ಮನೆಯಲ್ಲಿದ್ದಾಗ, ಪೊಲೀಸರು ಶವವನ್ನು ಸುಟ್ಟಿದ್ದಾರೆ. ವರದಿಗಾರರನ್ನು, ಕುಟುಂಬ ಮತ್ತು ಗ್ರಾಮಸ್ಥರನ್ನು ದೂರವಿರಿಸಲು ಹತ್ರಾಸ್ ಪೊಲೀಸರು ಮಾನವ ಸರಪಳಿಯನ್ನು ರಚಿಸಿದರು. ಪೊಲೀಸರು ಮಾತ್ರ ಹಾಜರಿದ್ದರು. ಕುಟುಂಬದವರು ಅವಳನ್ನು ಕೊನೆಯ ಬಾರಿಯೂ ನೋಡಲಾಗಲಿಲ್ಲ. ಅವರನ್ನು ಮನೆಯಲ್ಲಿ ಬಂಧಿಸಲಾಗಿದೆ” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಶವವನ್ನು ಸುಡುತ್ತಿರುವ ಪೊಲೀಸರು. ಚಿತ್ರಕೃಪೆ: ಎನ್‌ಡಿಟಿವಿ

ಇದನ್ನೂ ಓದಿ:ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಅತ್ಯಾಚಾರ ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾಲ್ವರು ಆರೋಪಿಗಳಾದ ಸಂದೀಪ್, ರಾಮು, ಲವ್ಕುಶ್ ಮತ್ತು ರವಿ ಮೇಲೆ ಸಾಮೂಹಿಕ ಅತ್ಯಾಚಾರ, ಸೆಕ್ಷನ್ 302 (ಕೊಲೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳನ್ನು ಹಾಕಲಾಗಿದೆ.

ಆರಂಭದಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿದ್ದ ಪೊಲೀಸರು, ಯುವತಿಯ ಔಪಚಾರಿಕ ಹೇಳಿಕೆಯ ನಂತರವೇ ಅತ್ಯಾಚಾರ ಆರೋಪಗಳನ್ನು ಸೇರಿಸಿದ್ದರು.

ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಂತ್ರಸ್ತರ ಮನವಿಗೆ ಸ್ಪಂದಿಸಲಿಲ್ಲ. ಆದರೆ ಸಾರ್ವಜನಿಕರ ಆಕ್ರೋಶದ ನಂತರ ಮಾತ್ರ ಪ್ರತಿಕ್ರಿಯಿಸಿದ್ದಾರೆ ಎನ್ನುವ ಯುವತಿಯ ಕುಟುಂಬದ ಆರೋಪವನ್ನು ಯುಪಿ ಪೊಲೀಸರು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...