Homeದಲಿತ್ ಫೈಲ್ಸ್ಯುಪಿ | ಗೋಣಿಚೀಲದಲ್ಲಿ ದಲಿತ ಯುವತಿಯ ನಗ್ನ ಶವ ಪತ್ತೆ; ರಾಜಕೀಯ ಕಾರಣಕ್ಕೆ ಕೊಲೆ ಎಂದ...

ಯುಪಿ | ಗೋಣಿಚೀಲದಲ್ಲಿ ದಲಿತ ಯುವತಿಯ ನಗ್ನ ಶವ ಪತ್ತೆ; ರಾಜಕೀಯ ಕಾರಣಕ್ಕೆ ಕೊಲೆ ಎಂದ ಕುಟುಂಬ

- Advertisement -
- Advertisement -

ಉತ್ತರ ಪ್ರದೇಶದ ಉಪಚುನಾವಣೆ ಮತದಾನದ ದಿನದಂದೆ ಮೈನ್‌ಪುರಿಯ ಕರ್ಹಾಲ್ ವಿಧಾನಸಭಾ ಕ್ಷೇತ್ರದಲ್ಲಿ 23 ವರ್ಷದ ದಲಿತ ಯುವತಿಯ ನಗ್ನ ಶವ ಪತ್ತೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಕೊಲೆಯಾದ ಯುವತಿಯನ್ನು ದುರ್ಗಾ ಎಂದು ಗುರುತಿಸಲಾಗಿದ್ದು, ಅವರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಯುಪಿ

ಮೃತ ಯುವತಿಯ ಶವ ಬುಧವಾರ ಕರ್ಹಾಲ್ ಪ್ರದೇಶದಲ್ಲಿ ಗೋಣಿಚೀಲದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ರಾಜಕೀಯ ಕಾರಣಕ್ಕೆ ಯುವತಿಯನ್ನು ಕೊಲೆ ಮಾಡಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ ಎಂದು ಮೈನ್‌ಪುರಿ ಪೊಲೀಸ್ ಅಧೀಕ್ಷಕ (ಎಸ್‌ಪಿ), ವಿನೋದ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಂದು ಬೆಳಗ್ಗೆ ಕರ್ಹಾಲ್‌ನ 23 ವರ್ಷದ ಯುವತಿಯ ಶವ ಪತ್ತೆಯಾಗಿದೆ. ಆಕೆಯ ತಂದೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರಲ್ಲಿ ಒಬ್ಬರು ಪ್ರಶಾಂತ್ ಯಾದವ್ ಮತ್ತು ಇನ್ನೊಬ್ಬರು ಮೋಹನ್ ಕಥೇರಿಯಾ, ಇಬ್ಬರನ್ನೂ ಬಂಧಿಸಲಾಗಿದೆ. ಬಿಜೆಪಿಗೆ ಮತ ಹಾಕುವುದನ್ನು ತಡೆಯುವ ಸಲುವಾಗಿ ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಆಕೆಯ ಪೋಷಕರು ಹೇಳಿಕೆ ನೀಡಿದ್ದಾರೆ” ಎಂದು ಮೈನ್‌ಪುರಿ ಎಸ್‌ಪಿ ತಿಳಿಸಿದ್ದಾರೆ.

ಈ ನಡುವೆ, ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಸ್ಥಾನಗಳಾದ ಕತೇಹಾರಿ (ಅಂಬೇಡ್ಕರ್ ನಗರ), ಕರ್ಹಾಲ್ (ಮೈನ್‌ಪುರಿ), ಮೀರಾಪುರ್ (ಮುಜಾಫರ್‌ನಗರ), ಘಾಜಿಯಾಬಾದ್, ಮಜವಾನ್ (ಮಿರ್ಜಾಪುರ), ಸಿಸಮಾವು (ಕಾನ್ಪುರ್ ನಗರ), ಖೈರ್ (ಅಲಿಗಢ), ಫುಲ್ಪುರ್ (ಪ್ರಯಾಗ್ರಾಜ್) ಮತ್ತು ಕುಂದರ್ಕಿ (ಮೊರಾದಾಬಾದ್) ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯುತ್ತಿದೆ. ಯುಪಿ

ಈ ಎಲ್ಲಾ 9 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮಾತ್ರ ಏಕಾಂಗಿಯಾಗಿ ಸ್ಪರ್ಧಿಸುತ್ತಿದ್ದು, ಇಂಡಿಯಾ ಒಕ್ಕೂಟದ ಪಕ್ಷವಾದ ಕಾಂಗ್ರೆಸ್ ಅವರನ್ನು ಬೆಂಬಲಿಸುತ್ತಿದೆ. ಆದರೆ ಬಿಎಸ್‌ಪಿ ಎಲ್ಲಾ ಒಂಬತ್ತು ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ಚುನಾವಣೆ ಬಗ್ಗೆ ಸೋಮವಾರ ಮಾತನಾಡಿದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ವಿಧಾನಸಭಾ ಉಪಚುನಾವಣೆಯು ”ಬಾಬಾಸಾಹೇಬ್ ಭೀಮ್ ರಾವ್ ಅಂಬೇಡ್ಕರ್” ಮತ್ತು “ಬಾಬಾ”ನನ್ನು ನಂಬುವವರ ನಡುವಿನ ಹೋರಾಟವಾಗಿದೆ ಎಂದು ಹೇಳಿದ್ದರು.

“ಇದು ಬಾಬಾ ಸಾಹೇಬರನ್ನು ನಂಬುವವರು ಮತ್ತು ‘ಬಾಬಾ’ರನ್ನು ನಂಬುವವರ ನಡುವಿನ ಹೋರಾಟವಾಗಿದೆ. ಒಂದು ಕಡೆ ಸಂವಿಧಾನವನ್ನು ರಚಿಸಿದವರು ಮತ್ತು ರಕ್ಷಿಸುವವರು ಮತ್ತೊಂದು ಕಡೆ, ಅದನ್ನು ನಾಶಪಡಿಸುವವರು” ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಇಲ್ಲಿಯವರೆಗೆ, ಸಂವಿಧಾನವು ‘ಹಿಂದುಳಿದ ವರ್ಗ, ದಲಿತ, ಮತ್ತು ಅಲ್ಪಸಂಖ್ಯಾತ(ಪಿಡಿಎ)’ರನ್ನು ರಕ್ಷಿಸಿದೆ; ಈಗ ಪಿಡಿಎ ಸಂವಿಧಾನವನ್ನು ರಕ್ಷಿಸುತ್ತದೆ! ಏಕತೆಯನ್ನು ಘೋಷಿಸಿ. ಜೈ ಸಂವಿಧಾನ, ಜೈ ಪಿಡಿಎ!,” ಎಂದು ಅವರು ಹೇಳಿದ್ದಾರೆ. ಅಖಿಲೇಶ್ ಅವರು ಲೋಕಸಭೆ ಚುನಾವಣೆಗೂ ಮುನ್ನ, ಪಿಡಿಎ ಅಂದರೆ ಪಿಚ್‌ಡೆ, ದಲಿತ, ಅಲ್ಪಸಂಖ್ಯಾಕ್ (ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ) ಎಂಬ ಘೋಷಣೆಯನ್ನು ರೂಪಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...