Homeದಲಿತ್ ಫೈಲ್ಸ್ಯುಪಿ | ಗೋಣಿಚೀಲದಲ್ಲಿ ದಲಿತ ಯುವತಿಯ ನಗ್ನ ಶವ ಪತ್ತೆ; ರಾಜಕೀಯ ಕಾರಣಕ್ಕೆ ಕೊಲೆ ಎಂದ...

ಯುಪಿ | ಗೋಣಿಚೀಲದಲ್ಲಿ ದಲಿತ ಯುವತಿಯ ನಗ್ನ ಶವ ಪತ್ತೆ; ರಾಜಕೀಯ ಕಾರಣಕ್ಕೆ ಕೊಲೆ ಎಂದ ಕುಟುಂಬ

- Advertisement -
- Advertisement -

ಉತ್ತರ ಪ್ರದೇಶದ ಉಪಚುನಾವಣೆ ಮತದಾನದ ದಿನದಂದೆ ಮೈನ್‌ಪುರಿಯ ಕರ್ಹಾಲ್ ವಿಧಾನಸಭಾ ಕ್ಷೇತ್ರದಲ್ಲಿ 23 ವರ್ಷದ ದಲಿತ ಯುವತಿಯ ನಗ್ನ ಶವ ಪತ್ತೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಕೊಲೆಯಾದ ಯುವತಿಯನ್ನು ದುರ್ಗಾ ಎಂದು ಗುರುತಿಸಲಾಗಿದ್ದು, ಅವರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಯುಪಿ

ಮೃತ ಯುವತಿಯ ಶವ ಬುಧವಾರ ಕರ್ಹಾಲ್ ಪ್ರದೇಶದಲ್ಲಿ ಗೋಣಿಚೀಲದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ರಾಜಕೀಯ ಕಾರಣಕ್ಕೆ ಯುವತಿಯನ್ನು ಕೊಲೆ ಮಾಡಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ ಎಂದು ಮೈನ್‌ಪುರಿ ಪೊಲೀಸ್ ಅಧೀಕ್ಷಕ (ಎಸ್‌ಪಿ), ವಿನೋದ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಂದು ಬೆಳಗ್ಗೆ ಕರ್ಹಾಲ್‌ನ 23 ವರ್ಷದ ಯುವತಿಯ ಶವ ಪತ್ತೆಯಾಗಿದೆ. ಆಕೆಯ ತಂದೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರಲ್ಲಿ ಒಬ್ಬರು ಪ್ರಶಾಂತ್ ಯಾದವ್ ಮತ್ತು ಇನ್ನೊಬ್ಬರು ಮೋಹನ್ ಕಥೇರಿಯಾ, ಇಬ್ಬರನ್ನೂ ಬಂಧಿಸಲಾಗಿದೆ. ಬಿಜೆಪಿಗೆ ಮತ ಹಾಕುವುದನ್ನು ತಡೆಯುವ ಸಲುವಾಗಿ ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಆಕೆಯ ಪೋಷಕರು ಹೇಳಿಕೆ ನೀಡಿದ್ದಾರೆ” ಎಂದು ಮೈನ್‌ಪುರಿ ಎಸ್‌ಪಿ ತಿಳಿಸಿದ್ದಾರೆ.

ಈ ನಡುವೆ, ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಸ್ಥಾನಗಳಾದ ಕತೇಹಾರಿ (ಅಂಬೇಡ್ಕರ್ ನಗರ), ಕರ್ಹಾಲ್ (ಮೈನ್‌ಪುರಿ), ಮೀರಾಪುರ್ (ಮುಜಾಫರ್‌ನಗರ), ಘಾಜಿಯಾಬಾದ್, ಮಜವಾನ್ (ಮಿರ್ಜಾಪುರ), ಸಿಸಮಾವು (ಕಾನ್ಪುರ್ ನಗರ), ಖೈರ್ (ಅಲಿಗಢ), ಫುಲ್ಪುರ್ (ಪ್ರಯಾಗ್ರಾಜ್) ಮತ್ತು ಕುಂದರ್ಕಿ (ಮೊರಾದಾಬಾದ್) ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯುತ್ತಿದೆ. ಯುಪಿ

ಈ ಎಲ್ಲಾ 9 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮಾತ್ರ ಏಕಾಂಗಿಯಾಗಿ ಸ್ಪರ್ಧಿಸುತ್ತಿದ್ದು, ಇಂಡಿಯಾ ಒಕ್ಕೂಟದ ಪಕ್ಷವಾದ ಕಾಂಗ್ರೆಸ್ ಅವರನ್ನು ಬೆಂಬಲಿಸುತ್ತಿದೆ. ಆದರೆ ಬಿಎಸ್‌ಪಿ ಎಲ್ಲಾ ಒಂಬತ್ತು ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ಚುನಾವಣೆ ಬಗ್ಗೆ ಸೋಮವಾರ ಮಾತನಾಡಿದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ವಿಧಾನಸಭಾ ಉಪಚುನಾವಣೆಯು ”ಬಾಬಾಸಾಹೇಬ್ ಭೀಮ್ ರಾವ್ ಅಂಬೇಡ್ಕರ್” ಮತ್ತು “ಬಾಬಾ”ನನ್ನು ನಂಬುವವರ ನಡುವಿನ ಹೋರಾಟವಾಗಿದೆ ಎಂದು ಹೇಳಿದ್ದರು.

“ಇದು ಬಾಬಾ ಸಾಹೇಬರನ್ನು ನಂಬುವವರು ಮತ್ತು ‘ಬಾಬಾ’ರನ್ನು ನಂಬುವವರ ನಡುವಿನ ಹೋರಾಟವಾಗಿದೆ. ಒಂದು ಕಡೆ ಸಂವಿಧಾನವನ್ನು ರಚಿಸಿದವರು ಮತ್ತು ರಕ್ಷಿಸುವವರು ಮತ್ತೊಂದು ಕಡೆ, ಅದನ್ನು ನಾಶಪಡಿಸುವವರು” ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಇಲ್ಲಿಯವರೆಗೆ, ಸಂವಿಧಾನವು ‘ಹಿಂದುಳಿದ ವರ್ಗ, ದಲಿತ, ಮತ್ತು ಅಲ್ಪಸಂಖ್ಯಾತ(ಪಿಡಿಎ)’ರನ್ನು ರಕ್ಷಿಸಿದೆ; ಈಗ ಪಿಡಿಎ ಸಂವಿಧಾನವನ್ನು ರಕ್ಷಿಸುತ್ತದೆ! ಏಕತೆಯನ್ನು ಘೋಷಿಸಿ. ಜೈ ಸಂವಿಧಾನ, ಜೈ ಪಿಡಿಎ!,” ಎಂದು ಅವರು ಹೇಳಿದ್ದಾರೆ. ಅಖಿಲೇಶ್ ಅವರು ಲೋಕಸಭೆ ಚುನಾವಣೆಗೂ ಮುನ್ನ, ಪಿಡಿಎ ಅಂದರೆ ಪಿಚ್‌ಡೆ, ದಲಿತ, ಅಲ್ಪಸಂಖ್ಯಾಕ್ (ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ) ಎಂಬ ಘೋಷಣೆಯನ್ನು ರೂಪಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...