HomeUncategorizedಮುಜಾಫರ್‌ನಗರ ಪ್ರಕರಣ: ಶಾಲೆಯನ್ನು ಮುಚ್ಚುವಂತೆ ಆದೇಶ

ಮುಜಾಫರ್‌ನಗರ ಪ್ರಕರಣ: ಶಾಲೆಯನ್ನು ಮುಚ್ಚುವಂತೆ ಆದೇಶ

- Advertisement -
- Advertisement -

ಉತ್ತರಪ್ರದೇಶದ ಮುಜಾಫರ್‌ನಗರ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಥಳಿಸುವಂತೆ ಇತರ ವಿದ್ಯಾರ್ಥಿಗಳಿಗೆ ಶಿಕ್ಷಕಿ ಸೂಚಿಸಿದ ವಿಡಿಯೋ ವೈರಲ್ ಬೆನ್ನಲ್ಲೇ ಇದೀಗ ಘಟನೆ ನಡೆದ ಶಾಲೆಯನ್ನು ಮುಚ್ಚಲು ಆದೇಶಿಸಲಾಗಿದೆ.

ಶಾಲಾ ಆಡಳಿತ ಮಂಡಳಿಗೆ ಈ ಕುರಿತು ಶಿಕ್ಷಣ ಇಲಾಖೆ ನೊಟೀಸ್ ಜಾರಿಗೊಳಿಸಿದೆ. ಶಾಲೆಯಲ್ಲಿ ಕಲಿಯುತ್ತಿದ್ದ ಮಕ್ಕಳನ್ನು ಸ್ಥಳೀಯ ಶಾಲೆಗೆ ಸೇರಿಸಲಾಗುವುದು. ಶಾಲೆ ಸಧ್ಯ ಮುಚ್ಚುವುದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಶಿಕ್ಷಕಿಯೋರ್ವರು ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿತ್ತು.

ವಿಡಿಯೋ ವೈರಲ್ ಬೆನ್ನಲ್ಲೇ ರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸುದ್ದಿಯಾಗಿತ್ತು. ಶಿಕ್ಷಕಿಯ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿತ್ತು. ಶಿಕ್ಷಕಿಯ ವಿರುದ್ಧ ಪ್ರಕರಣವನ್ನು ಈಗಾಗಲೇ ದಾಖಲಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಶಿಕ್ಷಕಿಯ ವಿರುದ್ಧ ತೆಗೆದುಕೊಂಡು ಕ್ರಮಗಳ ಬಗ್ಗೆ ಒಂದು ವಾರದಲ್ಲಿ ವರದಿಯನ್ನು ನೀಡುವಂತೆ ಸೂಚಿಸಿತ್ತು.

ವೈರಲ್ ಆಗಿರುವ ವೀಡಿಯೊದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಹೊಡೆಯುವಂತೆ ಒತ್ತಾಯಿಸುವುದನ್ನು ನೋಡಬಹುದು.

ಈ ಬಗ್ಗೆ ಆ ಬಾಲಕನ ತಾಯಿ ರುಬೀನಾ ಮಾತನಾಡಿ, ನನ್ನ ಮಗ ನಿನ್ನೆ ಮನೆಗೆ ಬಂದಾಗ ಅಳುತ್ತಿದ್ದನು. ನಾವು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಹೋಮ್ ವರ್ಕ್ ಮಾಡದಿದ್ದಕ್ಕೆ ಟೀಚರ್ ಶಿಕ್ಷೆ ಕೊಟ್ಟಿರಬೇಕು ಎಂದುಕೊಂಡೆವು. ಆದರೆ ವೀಡಿಯೊವನ್ನು ನೋಡಿದಾಗ ನಮಗೆ ಆಘಾತವಾಯಿತು ಎಂದು ಹೇಳಿದ್ದಾರೆ.

ಬಾಲಕನ ಸೋದರ ಸಂಬಂಧಿ ಮೊಹಮ್ಮದ್ ನದೀಮ್ (25) ಎನ್ನುವವರು ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಅವರು ಬೇರೆ ಯಾವುದೋ ಕೆಲಸಕ್ಕೆಂದು ಶಾಲೆಗೆ ಹೋಗಿದ್ದರು ಆ ವೇಳೆ ಈ ಘಟನೆ ನಡೆಯುತ್ತಿದ್ದಾಗ ವಿಡಿಯೋ ಚಿತ್ರಿಕರಿಸಿದ್ದಾರೆ ಎಂದು ಹೇಳಿದ್ದಾರೆ.

ಬಾಲಕನಿಗೆ ಪ್ರತ್ಯೇಕವಾಗಿ ನಿಲ್ಲಿಸಲಾಗಿತ್ತು, ಶಿಕ್ಷಕರು ಆದೇಶಿಸಿದಂತೆ ಅವನ ಸಹಪಾಠಿಗಳು ಕಪಾಳಮೋಕ್ಷ ಮಾಡುವುದನ್ನು ನಾನು ನೋಡಿದೆ. ಆಗ ನಾನು ಯಾರ ಗಮನಕ್ಕೂ ಬಾರದಂತೆ ವಿಡಿಯೋ ಮಾಡಿದೆ. ಆ ಶಿಕ್ಷಕಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದರು ಎಂದು ನದೀಮ್ ಹೇಳಿದ್ದಾರೆ.

ಬಾಲಕನ ತಂದೆ ಇರ್ಷಾದ್ ಮಾತನಾಡಿ, ಶಿಕ್ಷಕರು ನನ್ನ ಮಗನನ್ನು ಏಕೆ ಈ ರೀತಿ ನಡೆಸಿಕೊಂಡರು ಎಂದು ನಮಗೆ ತಿಳಿದಿಲ್ಲ. ಅವರು ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದು ದುಃಖಕರ ಸಂಗತಿ ಎಂದು ಹೇಳಿದ್ದರು.

ಇದನ್ನು ಓದಿ: ಕೋಲಾರದಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಯುವಕನ ಪ್ರೀತಿಸಿದ ಮಗಳನ್ನು ಕೊಂದ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...