Homeಮುಖಪುಟವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ

ವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರ ಟಾರ್ಪಾಲಿನ್ ಸುತ್ತಿದ ಮೃತ ದೇಹಗಳನ್ನು ಗಾಯಗೊಂಡ ವಲಸೆ ಕಾರ್ಮಿಕರ ಜೊತೆಗೆ ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಘಟನೆ ನಡೆದಿದೆ.

ಶನಿವಾರ ಬೆಳಿಗ್ಗೆ ಲಖನೌದಿಂದ 200 ಕಿ.ಮೀ ದೂರದಲ್ಲಿರುವ ಔರಿಯಾದಲ್ಲಿ ಮೃತಪಟ್ಟ ವಲಸಿಗರ ಮೃತದೇಹಗಳನ್ನು ಹಾಗೂ ಗಾಯಗೊಂಡವರನ್ನು ಟ್ರಕ್‌ನಲ್ಲಿ ಹಾಕಿ ಸಾಗಿಸುತ್ತಿದ್ದ ದೃಶ್ಯಗಳು ವ್ಯಾಪಕವಾಗಿ ಪ್ರಸಾರವಾಗಿವೆ.

ಘಟನೆಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಭಾರಿ ಖಂಡನೆ ವ್ಯಕ್ತಪಡಿಸಿದ್ದಾರೆ. ಅವರು ಇದನ್ನು “ಅಮಾನವೀಯ” ಕೃತ್ಯವೆಂದು ಕರೆದು, ಇಲ್ಲಿ ಜೀವಂತ ಮತ್ತು ಸತ್ತವರ ಘನತೆಯನ್ನು ಕಸಿದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ನಮ್ಮ ವಲಸೆ ಕಾರ್ಮಿಕರನ್ನು ಈ ರೀತಿ ಅಮಾನವೀಯವಾಗಿ ನಡೆಸುವುದನ್ನು ಬಹುಶಃ ತಪ್ಪಿಸಬಹುದು. ಜಾರ್ಖಂಡ್ ಗಡಿಯವರೆಗೆ ಮೃತ ದೇಹಗಳನ್ನು ಸೂಕ್ತವಾಗಿ ಸಾಗಿಸಲು ವ್ಯವಸ್ಥೆ ಮಾಡುವಂತೆ ನಿತೀಶ್ ಕುಮಾರ್ ಮತ್ತು ಉತ್ತರ ಪ್ರದೇಶದ ಸರ್ಕಾರ ಮತ್ತು ಕಚೇರಿಯನ್ನು ನಾನು ವಿನಂತಿಸುತ್ತೇನೆ. ಬೊಕಾರೊದಲ್ಲಿನ ಅವರ ಮನೆಗಳಿಗೆ ನಾವು ಸಾಕಷ್ಟು ಗೌರವಾನ್ವಿತ ವ್ಯವಸ್ಥೆಗಳನ್ನು ಖಚಿತಪಡಿಸುತ್ತೇವೆ” ಎಂದು ಸೊರೆನ್ ಟ್ವೀಟ್ ಮಾಡಿದ್ದಾರೆ.

ಔರಿಯಾದಲ್ಲಿ ಶನಿವಾರ ಮುಂಜಾನೆ 3.30 ರ ಸುಮಾರಿಗೆ ನಡೆದ ಟ್ರಕ್ ಅಫಘಾತದಲ್ಲಿ 26 ಟ್ರಕ್ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎರಡು ಟ್ರಕ್‌ಗಳಲ್ಲಿ, ಒಂದು ಪಂಜಾಬ್‌ನಿಂದ ಮತ್ತು ಇನ್ನೊಂದು ರಾಜಸ್ಥಾನದಿಂದ ಬಂದಿದ್ದು, ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದೆ.


ಓದಿ: ಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ


ಮೃತಪಟ್ಟವರಲ್ಲಿ 11 ಮಂದಿ ಜಾರ್ಖಂಡ್ ಮೂಲದವರಾಗಿದ್ದು ಒಬ್ಬರು ಪಲಮು ಮತ್ತು ಉಳಿದವರು ಬೊಕಾರೊ ಮತ್ತು ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ.

ಅಫಘಾತದ ಒಂದು ದಿನದ ನಂತರ, ಅಧಿಕಾರಿಗಳು ಶವಗಳನ್ನು ಮತ್ತು ಬದುಕುಳಿದವರನ್ನು ಮೂರು ಟ್ರಕ್‌ಗಳಲ್ಲಿ ಜಾರ್ಖಂಡ್‌ನ ಬೊಕಾರೊ ಮತ್ತು ಪಶ್ಚಿಮ ಬಂಗಾಳದ ಪುರುಲಿಯಾಕ್ಕೆ ವಾಪಸ್ ಕಳುಹಿಸಿದ್ದರು.

ನಂತರ ಸೊರೆನ್ ಅವರು ಆಕ್ರೋಶ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ ನಂತರ ಪ್ರಯಾಗರಾಜ್‌ ಬಳಿಯ ಹೆದ್ದಾರಿಯಲ್ಲಿ ಲಾರಿಗಳನ್ನು ನಿಲ್ಲಿಸಿ ಶವಗಳನ್ನು ಆಂಬುಲೆನ್ಸ್‌ಗೆ ತುಂಬಿಸಲಾಗಿದೆ.

ಪ್ರಯಾಣದ ಸಮಯದಲ್ಲಿ ದೇಹಗಳು ಕೊಳೆಯಲು ಪ್ರಾರಂಭಿಸಿವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಗೆ ಆದ ಫೋಟೋಗಳ ಬಗ್ಗರ ತನಿಖೆ ನಡೆಸಲಾಗುವುದು ಎಂದು ಔರಿಯ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಹೇಳಿದ್ದಾರೆ.

ಔರಿಯಾದಲ್ಲಿ ವಲಸೆ ಕಾರ್ಮಿಕರ ಸಾವು ಉತ್ತರಪ್ರದೇಶದಲ್ಲಿ ಪ್ರತಿಪಕ್ಷ ಮತ್ತು ಬಿಜೆಪಿ ಸರ್ಕಾರದ ನಡುವೆ ರಾಜಕೀಯ ಯುದ್ಧಕ್ಕೆ ನಾಂದಿ ಹಾಡಿದೆ.

ಕಾಂಗ್ರೆಸ್ ಆಡಳಿತದಲ್ಲಿರುವ ಎರಡು ರಾಜ್ಯಗಳಿಂದ ಲಾರಿಗಳು ಅಕ್ರಮವಾಗಿ ಓಡುತ್ತಿವೆ ಎಂದು ಸೂಚಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತಕ್ಕೆ ಕಾಂಗ್ರೆಸ್ ಪಕ್ಷವನ್ನು ದೂಷಿಸಿದ್ದಾರೆ.


ಓದಿ: ಪ್ರಿಯಾಂಕಾ ಗಾಂಧಿಗೆ 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....