Homeಮುಖಪುಟವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ

ವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರ ಟಾರ್ಪಾಲಿನ್ ಸುತ್ತಿದ ಮೃತ ದೇಹಗಳನ್ನು ಗಾಯಗೊಂಡ ವಲಸೆ ಕಾರ್ಮಿಕರ ಜೊತೆಗೆ ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಘಟನೆ ನಡೆದಿದೆ.

ಶನಿವಾರ ಬೆಳಿಗ್ಗೆ ಲಖನೌದಿಂದ 200 ಕಿ.ಮೀ ದೂರದಲ್ಲಿರುವ ಔರಿಯಾದಲ್ಲಿ ಮೃತಪಟ್ಟ ವಲಸಿಗರ ಮೃತದೇಹಗಳನ್ನು ಹಾಗೂ ಗಾಯಗೊಂಡವರನ್ನು ಟ್ರಕ್‌ನಲ್ಲಿ ಹಾಕಿ ಸಾಗಿಸುತ್ತಿದ್ದ ದೃಶ್ಯಗಳು ವ್ಯಾಪಕವಾಗಿ ಪ್ರಸಾರವಾಗಿವೆ.

ಘಟನೆಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಭಾರಿ ಖಂಡನೆ ವ್ಯಕ್ತಪಡಿಸಿದ್ದಾರೆ. ಅವರು ಇದನ್ನು “ಅಮಾನವೀಯ” ಕೃತ್ಯವೆಂದು ಕರೆದು, ಇಲ್ಲಿ ಜೀವಂತ ಮತ್ತು ಸತ್ತವರ ಘನತೆಯನ್ನು ಕಸಿದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ನಮ್ಮ ವಲಸೆ ಕಾರ್ಮಿಕರನ್ನು ಈ ರೀತಿ ಅಮಾನವೀಯವಾಗಿ ನಡೆಸುವುದನ್ನು ಬಹುಶಃ ತಪ್ಪಿಸಬಹುದು. ಜಾರ್ಖಂಡ್ ಗಡಿಯವರೆಗೆ ಮೃತ ದೇಹಗಳನ್ನು ಸೂಕ್ತವಾಗಿ ಸಾಗಿಸಲು ವ್ಯವಸ್ಥೆ ಮಾಡುವಂತೆ ನಿತೀಶ್ ಕುಮಾರ್ ಮತ್ತು ಉತ್ತರ ಪ್ರದೇಶದ ಸರ್ಕಾರ ಮತ್ತು ಕಚೇರಿಯನ್ನು ನಾನು ವಿನಂತಿಸುತ್ತೇನೆ. ಬೊಕಾರೊದಲ್ಲಿನ ಅವರ ಮನೆಗಳಿಗೆ ನಾವು ಸಾಕಷ್ಟು ಗೌರವಾನ್ವಿತ ವ್ಯವಸ್ಥೆಗಳನ್ನು ಖಚಿತಪಡಿಸುತ್ತೇವೆ” ಎಂದು ಸೊರೆನ್ ಟ್ವೀಟ್ ಮಾಡಿದ್ದಾರೆ.

ಔರಿಯಾದಲ್ಲಿ ಶನಿವಾರ ಮುಂಜಾನೆ 3.30 ರ ಸುಮಾರಿಗೆ ನಡೆದ ಟ್ರಕ್ ಅಫಘಾತದಲ್ಲಿ 26 ಟ್ರಕ್ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎರಡು ಟ್ರಕ್‌ಗಳಲ್ಲಿ, ಒಂದು ಪಂಜಾಬ್‌ನಿಂದ ಮತ್ತು ಇನ್ನೊಂದು ರಾಜಸ್ಥಾನದಿಂದ ಬಂದಿದ್ದು, ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದೆ.


ಓದಿ: ಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ


ಮೃತಪಟ್ಟವರಲ್ಲಿ 11 ಮಂದಿ ಜಾರ್ಖಂಡ್ ಮೂಲದವರಾಗಿದ್ದು ಒಬ್ಬರು ಪಲಮು ಮತ್ತು ಉಳಿದವರು ಬೊಕಾರೊ ಮತ್ತು ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ.

ಅಫಘಾತದ ಒಂದು ದಿನದ ನಂತರ, ಅಧಿಕಾರಿಗಳು ಶವಗಳನ್ನು ಮತ್ತು ಬದುಕುಳಿದವರನ್ನು ಮೂರು ಟ್ರಕ್‌ಗಳಲ್ಲಿ ಜಾರ್ಖಂಡ್‌ನ ಬೊಕಾರೊ ಮತ್ತು ಪಶ್ಚಿಮ ಬಂಗಾಳದ ಪುರುಲಿಯಾಕ್ಕೆ ವಾಪಸ್ ಕಳುಹಿಸಿದ್ದರು.

ನಂತರ ಸೊರೆನ್ ಅವರು ಆಕ್ರೋಶ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ ನಂತರ ಪ್ರಯಾಗರಾಜ್‌ ಬಳಿಯ ಹೆದ್ದಾರಿಯಲ್ಲಿ ಲಾರಿಗಳನ್ನು ನಿಲ್ಲಿಸಿ ಶವಗಳನ್ನು ಆಂಬುಲೆನ್ಸ್‌ಗೆ ತುಂಬಿಸಲಾಗಿದೆ.

ಪ್ರಯಾಣದ ಸಮಯದಲ್ಲಿ ದೇಹಗಳು ಕೊಳೆಯಲು ಪ್ರಾರಂಭಿಸಿವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಗೆ ಆದ ಫೋಟೋಗಳ ಬಗ್ಗರ ತನಿಖೆ ನಡೆಸಲಾಗುವುದು ಎಂದು ಔರಿಯ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಹೇಳಿದ್ದಾರೆ.

ಔರಿಯಾದಲ್ಲಿ ವಲಸೆ ಕಾರ್ಮಿಕರ ಸಾವು ಉತ್ತರಪ್ರದೇಶದಲ್ಲಿ ಪ್ರತಿಪಕ್ಷ ಮತ್ತು ಬಿಜೆಪಿ ಸರ್ಕಾರದ ನಡುವೆ ರಾಜಕೀಯ ಯುದ್ಧಕ್ಕೆ ನಾಂದಿ ಹಾಡಿದೆ.

ಕಾಂಗ್ರೆಸ್ ಆಡಳಿತದಲ್ಲಿರುವ ಎರಡು ರಾಜ್ಯಗಳಿಂದ ಲಾರಿಗಳು ಅಕ್ರಮವಾಗಿ ಓಡುತ್ತಿವೆ ಎಂದು ಸೂಚಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತಕ್ಕೆ ಕಾಂಗ್ರೆಸ್ ಪಕ್ಷವನ್ನು ದೂಷಿಸಿದ್ದಾರೆ.


ಓದಿ: ಪ್ರಿಯಾಂಕಾ ಗಾಂಧಿಗೆ 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...