Homeಮುಖಪುಟವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ

ವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರ ಟಾರ್ಪಾಲಿನ್ ಸುತ್ತಿದ ಮೃತ ದೇಹಗಳನ್ನು ಗಾಯಗೊಂಡ ವಲಸೆ ಕಾರ್ಮಿಕರ ಜೊತೆಗೆ ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಘಟನೆ ನಡೆದಿದೆ.

ಶನಿವಾರ ಬೆಳಿಗ್ಗೆ ಲಖನೌದಿಂದ 200 ಕಿ.ಮೀ ದೂರದಲ್ಲಿರುವ ಔರಿಯಾದಲ್ಲಿ ಮೃತಪಟ್ಟ ವಲಸಿಗರ ಮೃತದೇಹಗಳನ್ನು ಹಾಗೂ ಗಾಯಗೊಂಡವರನ್ನು ಟ್ರಕ್‌ನಲ್ಲಿ ಹಾಕಿ ಸಾಗಿಸುತ್ತಿದ್ದ ದೃಶ್ಯಗಳು ವ್ಯಾಪಕವಾಗಿ ಪ್ರಸಾರವಾಗಿವೆ.

ಘಟನೆಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಭಾರಿ ಖಂಡನೆ ವ್ಯಕ್ತಪಡಿಸಿದ್ದಾರೆ. ಅವರು ಇದನ್ನು “ಅಮಾನವೀಯ” ಕೃತ್ಯವೆಂದು ಕರೆದು, ಇಲ್ಲಿ ಜೀವಂತ ಮತ್ತು ಸತ್ತವರ ಘನತೆಯನ್ನು ಕಸಿದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ನಮ್ಮ ವಲಸೆ ಕಾರ್ಮಿಕರನ್ನು ಈ ರೀತಿ ಅಮಾನವೀಯವಾಗಿ ನಡೆಸುವುದನ್ನು ಬಹುಶಃ ತಪ್ಪಿಸಬಹುದು. ಜಾರ್ಖಂಡ್ ಗಡಿಯವರೆಗೆ ಮೃತ ದೇಹಗಳನ್ನು ಸೂಕ್ತವಾಗಿ ಸಾಗಿಸಲು ವ್ಯವಸ್ಥೆ ಮಾಡುವಂತೆ ನಿತೀಶ್ ಕುಮಾರ್ ಮತ್ತು ಉತ್ತರ ಪ್ರದೇಶದ ಸರ್ಕಾರ ಮತ್ತು ಕಚೇರಿಯನ್ನು ನಾನು ವಿನಂತಿಸುತ್ತೇನೆ. ಬೊಕಾರೊದಲ್ಲಿನ ಅವರ ಮನೆಗಳಿಗೆ ನಾವು ಸಾಕಷ್ಟು ಗೌರವಾನ್ವಿತ ವ್ಯವಸ್ಥೆಗಳನ್ನು ಖಚಿತಪಡಿಸುತ್ತೇವೆ” ಎಂದು ಸೊರೆನ್ ಟ್ವೀಟ್ ಮಾಡಿದ್ದಾರೆ.

ಔರಿಯಾದಲ್ಲಿ ಶನಿವಾರ ಮುಂಜಾನೆ 3.30 ರ ಸುಮಾರಿಗೆ ನಡೆದ ಟ್ರಕ್ ಅಫಘಾತದಲ್ಲಿ 26 ಟ್ರಕ್ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎರಡು ಟ್ರಕ್‌ಗಳಲ್ಲಿ, ಒಂದು ಪಂಜಾಬ್‌ನಿಂದ ಮತ್ತು ಇನ್ನೊಂದು ರಾಜಸ್ಥಾನದಿಂದ ಬಂದಿದ್ದು, ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದೆ.


ಓದಿ: ಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ


ಮೃತಪಟ್ಟವರಲ್ಲಿ 11 ಮಂದಿ ಜಾರ್ಖಂಡ್ ಮೂಲದವರಾಗಿದ್ದು ಒಬ್ಬರು ಪಲಮು ಮತ್ತು ಉಳಿದವರು ಬೊಕಾರೊ ಮತ್ತು ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ.

ಅಫಘಾತದ ಒಂದು ದಿನದ ನಂತರ, ಅಧಿಕಾರಿಗಳು ಶವಗಳನ್ನು ಮತ್ತು ಬದುಕುಳಿದವರನ್ನು ಮೂರು ಟ್ರಕ್‌ಗಳಲ್ಲಿ ಜಾರ್ಖಂಡ್‌ನ ಬೊಕಾರೊ ಮತ್ತು ಪಶ್ಚಿಮ ಬಂಗಾಳದ ಪುರುಲಿಯಾಕ್ಕೆ ವಾಪಸ್ ಕಳುಹಿಸಿದ್ದರು.

ನಂತರ ಸೊರೆನ್ ಅವರು ಆಕ್ರೋಶ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ ನಂತರ ಪ್ರಯಾಗರಾಜ್‌ ಬಳಿಯ ಹೆದ್ದಾರಿಯಲ್ಲಿ ಲಾರಿಗಳನ್ನು ನಿಲ್ಲಿಸಿ ಶವಗಳನ್ನು ಆಂಬುಲೆನ್ಸ್‌ಗೆ ತುಂಬಿಸಲಾಗಿದೆ.

ಪ್ರಯಾಣದ ಸಮಯದಲ್ಲಿ ದೇಹಗಳು ಕೊಳೆಯಲು ಪ್ರಾರಂಭಿಸಿವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಗೆ ಆದ ಫೋಟೋಗಳ ಬಗ್ಗರ ತನಿಖೆ ನಡೆಸಲಾಗುವುದು ಎಂದು ಔರಿಯ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಹೇಳಿದ್ದಾರೆ.

ಔರಿಯಾದಲ್ಲಿ ವಲಸೆ ಕಾರ್ಮಿಕರ ಸಾವು ಉತ್ತರಪ್ರದೇಶದಲ್ಲಿ ಪ್ರತಿಪಕ್ಷ ಮತ್ತು ಬಿಜೆಪಿ ಸರ್ಕಾರದ ನಡುವೆ ರಾಜಕೀಯ ಯುದ್ಧಕ್ಕೆ ನಾಂದಿ ಹಾಡಿದೆ.

ಕಾಂಗ್ರೆಸ್ ಆಡಳಿತದಲ್ಲಿರುವ ಎರಡು ರಾಜ್ಯಗಳಿಂದ ಲಾರಿಗಳು ಅಕ್ರಮವಾಗಿ ಓಡುತ್ತಿವೆ ಎಂದು ಸೂಚಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತಕ್ಕೆ ಕಾಂಗ್ರೆಸ್ ಪಕ್ಷವನ್ನು ದೂಷಿಸಿದ್ದಾರೆ.


ಓದಿ: ಪ್ರಿಯಾಂಕಾ ಗಾಂಧಿಗೆ 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...