Homeಮುಖಪುಟವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ

ವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರ ಟಾರ್ಪಾಲಿನ್ ಸುತ್ತಿದ ಮೃತ ದೇಹಗಳನ್ನು ಗಾಯಗೊಂಡ ವಲಸೆ ಕಾರ್ಮಿಕರ ಜೊತೆಗೆ ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಘಟನೆ ನಡೆದಿದೆ.

ಶನಿವಾರ ಬೆಳಿಗ್ಗೆ ಲಖನೌದಿಂದ 200 ಕಿ.ಮೀ ದೂರದಲ್ಲಿರುವ ಔರಿಯಾದಲ್ಲಿ ಮೃತಪಟ್ಟ ವಲಸಿಗರ ಮೃತದೇಹಗಳನ್ನು ಹಾಗೂ ಗಾಯಗೊಂಡವರನ್ನು ಟ್ರಕ್‌ನಲ್ಲಿ ಹಾಕಿ ಸಾಗಿಸುತ್ತಿದ್ದ ದೃಶ್ಯಗಳು ವ್ಯಾಪಕವಾಗಿ ಪ್ರಸಾರವಾಗಿವೆ.

ಘಟನೆಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಭಾರಿ ಖಂಡನೆ ವ್ಯಕ್ತಪಡಿಸಿದ್ದಾರೆ. ಅವರು ಇದನ್ನು “ಅಮಾನವೀಯ” ಕೃತ್ಯವೆಂದು ಕರೆದು, ಇಲ್ಲಿ ಜೀವಂತ ಮತ್ತು ಸತ್ತವರ ಘನತೆಯನ್ನು ಕಸಿದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ನಮ್ಮ ವಲಸೆ ಕಾರ್ಮಿಕರನ್ನು ಈ ರೀತಿ ಅಮಾನವೀಯವಾಗಿ ನಡೆಸುವುದನ್ನು ಬಹುಶಃ ತಪ್ಪಿಸಬಹುದು. ಜಾರ್ಖಂಡ್ ಗಡಿಯವರೆಗೆ ಮೃತ ದೇಹಗಳನ್ನು ಸೂಕ್ತವಾಗಿ ಸಾಗಿಸಲು ವ್ಯವಸ್ಥೆ ಮಾಡುವಂತೆ ನಿತೀಶ್ ಕುಮಾರ್ ಮತ್ತು ಉತ್ತರ ಪ್ರದೇಶದ ಸರ್ಕಾರ ಮತ್ತು ಕಚೇರಿಯನ್ನು ನಾನು ವಿನಂತಿಸುತ್ತೇನೆ. ಬೊಕಾರೊದಲ್ಲಿನ ಅವರ ಮನೆಗಳಿಗೆ ನಾವು ಸಾಕಷ್ಟು ಗೌರವಾನ್ವಿತ ವ್ಯವಸ್ಥೆಗಳನ್ನು ಖಚಿತಪಡಿಸುತ್ತೇವೆ” ಎಂದು ಸೊರೆನ್ ಟ್ವೀಟ್ ಮಾಡಿದ್ದಾರೆ.

ಔರಿಯಾದಲ್ಲಿ ಶನಿವಾರ ಮುಂಜಾನೆ 3.30 ರ ಸುಮಾರಿಗೆ ನಡೆದ ಟ್ರಕ್ ಅಫಘಾತದಲ್ಲಿ 26 ಟ್ರಕ್ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎರಡು ಟ್ರಕ್‌ಗಳಲ್ಲಿ, ಒಂದು ಪಂಜಾಬ್‌ನಿಂದ ಮತ್ತು ಇನ್ನೊಂದು ರಾಜಸ್ಥಾನದಿಂದ ಬಂದಿದ್ದು, ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದೆ.


ಓದಿ: ಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ


ಮೃತಪಟ್ಟವರಲ್ಲಿ 11 ಮಂದಿ ಜಾರ್ಖಂಡ್ ಮೂಲದವರಾಗಿದ್ದು ಒಬ್ಬರು ಪಲಮು ಮತ್ತು ಉಳಿದವರು ಬೊಕಾರೊ ಮತ್ತು ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ.

ಅಫಘಾತದ ಒಂದು ದಿನದ ನಂತರ, ಅಧಿಕಾರಿಗಳು ಶವಗಳನ್ನು ಮತ್ತು ಬದುಕುಳಿದವರನ್ನು ಮೂರು ಟ್ರಕ್‌ಗಳಲ್ಲಿ ಜಾರ್ಖಂಡ್‌ನ ಬೊಕಾರೊ ಮತ್ತು ಪಶ್ಚಿಮ ಬಂಗಾಳದ ಪುರುಲಿಯಾಕ್ಕೆ ವಾಪಸ್ ಕಳುಹಿಸಿದ್ದರು.

ನಂತರ ಸೊರೆನ್ ಅವರು ಆಕ್ರೋಶ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ ನಂತರ ಪ್ರಯಾಗರಾಜ್‌ ಬಳಿಯ ಹೆದ್ದಾರಿಯಲ್ಲಿ ಲಾರಿಗಳನ್ನು ನಿಲ್ಲಿಸಿ ಶವಗಳನ್ನು ಆಂಬುಲೆನ್ಸ್‌ಗೆ ತುಂಬಿಸಲಾಗಿದೆ.

ಪ್ರಯಾಣದ ಸಮಯದಲ್ಲಿ ದೇಹಗಳು ಕೊಳೆಯಲು ಪ್ರಾರಂಭಿಸಿವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಗೆ ಆದ ಫೋಟೋಗಳ ಬಗ್ಗರ ತನಿಖೆ ನಡೆಸಲಾಗುವುದು ಎಂದು ಔರಿಯ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಹೇಳಿದ್ದಾರೆ.

ಔರಿಯಾದಲ್ಲಿ ವಲಸೆ ಕಾರ್ಮಿಕರ ಸಾವು ಉತ್ತರಪ್ರದೇಶದಲ್ಲಿ ಪ್ರತಿಪಕ್ಷ ಮತ್ತು ಬಿಜೆಪಿ ಸರ್ಕಾರದ ನಡುವೆ ರಾಜಕೀಯ ಯುದ್ಧಕ್ಕೆ ನಾಂದಿ ಹಾಡಿದೆ.

ಕಾಂಗ್ರೆಸ್ ಆಡಳಿತದಲ್ಲಿರುವ ಎರಡು ರಾಜ್ಯಗಳಿಂದ ಲಾರಿಗಳು ಅಕ್ರಮವಾಗಿ ಓಡುತ್ತಿವೆ ಎಂದು ಸೂಚಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತಕ್ಕೆ ಕಾಂಗ್ರೆಸ್ ಪಕ್ಷವನ್ನು ದೂಷಿಸಿದ್ದಾರೆ.


ಓದಿ: ಪ್ರಿಯಾಂಕಾ ಗಾಂಧಿಗೆ 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...