Homeಮುಖಪುಟವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ

ವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರ ಟಾರ್ಪಾಲಿನ್ ಸುತ್ತಿದ ಮೃತ ದೇಹಗಳನ್ನು ಗಾಯಗೊಂಡ ವಲಸೆ ಕಾರ್ಮಿಕರ ಜೊತೆಗೆ ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಘಟನೆ ನಡೆದಿದೆ.

ಶನಿವಾರ ಬೆಳಿಗ್ಗೆ ಲಖನೌದಿಂದ 200 ಕಿ.ಮೀ ದೂರದಲ್ಲಿರುವ ಔರಿಯಾದಲ್ಲಿ ಮೃತಪಟ್ಟ ವಲಸಿಗರ ಮೃತದೇಹಗಳನ್ನು ಹಾಗೂ ಗಾಯಗೊಂಡವರನ್ನು ಟ್ರಕ್‌ನಲ್ಲಿ ಹಾಕಿ ಸಾಗಿಸುತ್ತಿದ್ದ ದೃಶ್ಯಗಳು ವ್ಯಾಪಕವಾಗಿ ಪ್ರಸಾರವಾಗಿವೆ.

ಘಟನೆಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಭಾರಿ ಖಂಡನೆ ವ್ಯಕ್ತಪಡಿಸಿದ್ದಾರೆ. ಅವರು ಇದನ್ನು “ಅಮಾನವೀಯ” ಕೃತ್ಯವೆಂದು ಕರೆದು, ಇಲ್ಲಿ ಜೀವಂತ ಮತ್ತು ಸತ್ತವರ ಘನತೆಯನ್ನು ಕಸಿದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ನಮ್ಮ ವಲಸೆ ಕಾರ್ಮಿಕರನ್ನು ಈ ರೀತಿ ಅಮಾನವೀಯವಾಗಿ ನಡೆಸುವುದನ್ನು ಬಹುಶಃ ತಪ್ಪಿಸಬಹುದು. ಜಾರ್ಖಂಡ್ ಗಡಿಯವರೆಗೆ ಮೃತ ದೇಹಗಳನ್ನು ಸೂಕ್ತವಾಗಿ ಸಾಗಿಸಲು ವ್ಯವಸ್ಥೆ ಮಾಡುವಂತೆ ನಿತೀಶ್ ಕುಮಾರ್ ಮತ್ತು ಉತ್ತರ ಪ್ರದೇಶದ ಸರ್ಕಾರ ಮತ್ತು ಕಚೇರಿಯನ್ನು ನಾನು ವಿನಂತಿಸುತ್ತೇನೆ. ಬೊಕಾರೊದಲ್ಲಿನ ಅವರ ಮನೆಗಳಿಗೆ ನಾವು ಸಾಕಷ್ಟು ಗೌರವಾನ್ವಿತ ವ್ಯವಸ್ಥೆಗಳನ್ನು ಖಚಿತಪಡಿಸುತ್ತೇವೆ” ಎಂದು ಸೊರೆನ್ ಟ್ವೀಟ್ ಮಾಡಿದ್ದಾರೆ.

ಔರಿಯಾದಲ್ಲಿ ಶನಿವಾರ ಮುಂಜಾನೆ 3.30 ರ ಸುಮಾರಿಗೆ ನಡೆದ ಟ್ರಕ್ ಅಫಘಾತದಲ್ಲಿ 26 ಟ್ರಕ್ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎರಡು ಟ್ರಕ್‌ಗಳಲ್ಲಿ, ಒಂದು ಪಂಜಾಬ್‌ನಿಂದ ಮತ್ತು ಇನ್ನೊಂದು ರಾಜಸ್ಥಾನದಿಂದ ಬಂದಿದ್ದು, ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದೆ.


ಓದಿ: ಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ


ಮೃತಪಟ್ಟವರಲ್ಲಿ 11 ಮಂದಿ ಜಾರ್ಖಂಡ್ ಮೂಲದವರಾಗಿದ್ದು ಒಬ್ಬರು ಪಲಮು ಮತ್ತು ಉಳಿದವರು ಬೊಕಾರೊ ಮತ್ತು ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ.

ಅಫಘಾತದ ಒಂದು ದಿನದ ನಂತರ, ಅಧಿಕಾರಿಗಳು ಶವಗಳನ್ನು ಮತ್ತು ಬದುಕುಳಿದವರನ್ನು ಮೂರು ಟ್ರಕ್‌ಗಳಲ್ಲಿ ಜಾರ್ಖಂಡ್‌ನ ಬೊಕಾರೊ ಮತ್ತು ಪಶ್ಚಿಮ ಬಂಗಾಳದ ಪುರುಲಿಯಾಕ್ಕೆ ವಾಪಸ್ ಕಳುಹಿಸಿದ್ದರು.

ನಂತರ ಸೊರೆನ್ ಅವರು ಆಕ್ರೋಶ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ ನಂತರ ಪ್ರಯಾಗರಾಜ್‌ ಬಳಿಯ ಹೆದ್ದಾರಿಯಲ್ಲಿ ಲಾರಿಗಳನ್ನು ನಿಲ್ಲಿಸಿ ಶವಗಳನ್ನು ಆಂಬುಲೆನ್ಸ್‌ಗೆ ತುಂಬಿಸಲಾಗಿದೆ.

ಪ್ರಯಾಣದ ಸಮಯದಲ್ಲಿ ದೇಹಗಳು ಕೊಳೆಯಲು ಪ್ರಾರಂಭಿಸಿವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಗೆ ಆದ ಫೋಟೋಗಳ ಬಗ್ಗರ ತನಿಖೆ ನಡೆಸಲಾಗುವುದು ಎಂದು ಔರಿಯ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಹೇಳಿದ್ದಾರೆ.

ಔರಿಯಾದಲ್ಲಿ ವಲಸೆ ಕಾರ್ಮಿಕರ ಸಾವು ಉತ್ತರಪ್ರದೇಶದಲ್ಲಿ ಪ್ರತಿಪಕ್ಷ ಮತ್ತು ಬಿಜೆಪಿ ಸರ್ಕಾರದ ನಡುವೆ ರಾಜಕೀಯ ಯುದ್ಧಕ್ಕೆ ನಾಂದಿ ಹಾಡಿದೆ.

ಕಾಂಗ್ರೆಸ್ ಆಡಳಿತದಲ್ಲಿರುವ ಎರಡು ರಾಜ್ಯಗಳಿಂದ ಲಾರಿಗಳು ಅಕ್ರಮವಾಗಿ ಓಡುತ್ತಿವೆ ಎಂದು ಸೂಚಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತಕ್ಕೆ ಕಾಂಗ್ರೆಸ್ ಪಕ್ಷವನ್ನು ದೂಷಿಸಿದ್ದಾರೆ.


ಓದಿ: ಪ್ರಿಯಾಂಕಾ ಗಾಂಧಿಗೆ 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...