Homeಮುಖಪುಟವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ

ವಲಸೆ ಕಾರ್ಮಿಕರ ಮೃತದೇಹವನ್ನು ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಯುಪಿ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರ ಟಾರ್ಪಾಲಿನ್ ಸುತ್ತಿದ ಮೃತ ದೇಹಗಳನ್ನು ಗಾಯಗೊಂಡ ವಲಸೆ ಕಾರ್ಮಿಕರ ಜೊತೆಗೆ ತೆರೆದ ಟ್ರಕ್‌ನಲ್ಲಿ ಹಾಕಿ ಕಳುಹಿಸಿದ ಘಟನೆ ನಡೆದಿದೆ.

ಶನಿವಾರ ಬೆಳಿಗ್ಗೆ ಲಖನೌದಿಂದ 200 ಕಿ.ಮೀ ದೂರದಲ್ಲಿರುವ ಔರಿಯಾದಲ್ಲಿ ಮೃತಪಟ್ಟ ವಲಸಿಗರ ಮೃತದೇಹಗಳನ್ನು ಹಾಗೂ ಗಾಯಗೊಂಡವರನ್ನು ಟ್ರಕ್‌ನಲ್ಲಿ ಹಾಕಿ ಸಾಗಿಸುತ್ತಿದ್ದ ದೃಶ್ಯಗಳು ವ್ಯಾಪಕವಾಗಿ ಪ್ರಸಾರವಾಗಿವೆ.

ಘಟನೆಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಭಾರಿ ಖಂಡನೆ ವ್ಯಕ್ತಪಡಿಸಿದ್ದಾರೆ. ಅವರು ಇದನ್ನು “ಅಮಾನವೀಯ” ಕೃತ್ಯವೆಂದು ಕರೆದು, ಇಲ್ಲಿ ಜೀವಂತ ಮತ್ತು ಸತ್ತವರ ಘನತೆಯನ್ನು ಕಸಿದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ನಮ್ಮ ವಲಸೆ ಕಾರ್ಮಿಕರನ್ನು ಈ ರೀತಿ ಅಮಾನವೀಯವಾಗಿ ನಡೆಸುವುದನ್ನು ಬಹುಶಃ ತಪ್ಪಿಸಬಹುದು. ಜಾರ್ಖಂಡ್ ಗಡಿಯವರೆಗೆ ಮೃತ ದೇಹಗಳನ್ನು ಸೂಕ್ತವಾಗಿ ಸಾಗಿಸಲು ವ್ಯವಸ್ಥೆ ಮಾಡುವಂತೆ ನಿತೀಶ್ ಕುಮಾರ್ ಮತ್ತು ಉತ್ತರ ಪ್ರದೇಶದ ಸರ್ಕಾರ ಮತ್ತು ಕಚೇರಿಯನ್ನು ನಾನು ವಿನಂತಿಸುತ್ತೇನೆ. ಬೊಕಾರೊದಲ್ಲಿನ ಅವರ ಮನೆಗಳಿಗೆ ನಾವು ಸಾಕಷ್ಟು ಗೌರವಾನ್ವಿತ ವ್ಯವಸ್ಥೆಗಳನ್ನು ಖಚಿತಪಡಿಸುತ್ತೇವೆ” ಎಂದು ಸೊರೆನ್ ಟ್ವೀಟ್ ಮಾಡಿದ್ದಾರೆ.

ಔರಿಯಾದಲ್ಲಿ ಶನಿವಾರ ಮುಂಜಾನೆ 3.30 ರ ಸುಮಾರಿಗೆ ನಡೆದ ಟ್ರಕ್ ಅಫಘಾತದಲ್ಲಿ 26 ಟ್ರಕ್ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎರಡು ಟ್ರಕ್‌ಗಳಲ್ಲಿ, ಒಂದು ಪಂಜಾಬ್‌ನಿಂದ ಮತ್ತು ಇನ್ನೊಂದು ರಾಜಸ್ಥಾನದಿಂದ ಬಂದಿದ್ದು, ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದೆ.


ಓದಿ: ಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ


ಮೃತಪಟ್ಟವರಲ್ಲಿ 11 ಮಂದಿ ಜಾರ್ಖಂಡ್ ಮೂಲದವರಾಗಿದ್ದು ಒಬ್ಬರು ಪಲಮು ಮತ್ತು ಉಳಿದವರು ಬೊಕಾರೊ ಮತ್ತು ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ.

ಅಫಘಾತದ ಒಂದು ದಿನದ ನಂತರ, ಅಧಿಕಾರಿಗಳು ಶವಗಳನ್ನು ಮತ್ತು ಬದುಕುಳಿದವರನ್ನು ಮೂರು ಟ್ರಕ್‌ಗಳಲ್ಲಿ ಜಾರ್ಖಂಡ್‌ನ ಬೊಕಾರೊ ಮತ್ತು ಪಶ್ಚಿಮ ಬಂಗಾಳದ ಪುರುಲಿಯಾಕ್ಕೆ ವಾಪಸ್ ಕಳುಹಿಸಿದ್ದರು.

ನಂತರ ಸೊರೆನ್ ಅವರು ಆಕ್ರೋಶ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ ನಂತರ ಪ್ರಯಾಗರಾಜ್‌ ಬಳಿಯ ಹೆದ್ದಾರಿಯಲ್ಲಿ ಲಾರಿಗಳನ್ನು ನಿಲ್ಲಿಸಿ ಶವಗಳನ್ನು ಆಂಬುಲೆನ್ಸ್‌ಗೆ ತುಂಬಿಸಲಾಗಿದೆ.

ಪ್ರಯಾಣದ ಸಮಯದಲ್ಲಿ ದೇಹಗಳು ಕೊಳೆಯಲು ಪ್ರಾರಂಭಿಸಿವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಗೆ ಆದ ಫೋಟೋಗಳ ಬಗ್ಗರ ತನಿಖೆ ನಡೆಸಲಾಗುವುದು ಎಂದು ಔರಿಯ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಹೇಳಿದ್ದಾರೆ.

ಔರಿಯಾದಲ್ಲಿ ವಲಸೆ ಕಾರ್ಮಿಕರ ಸಾವು ಉತ್ತರಪ್ರದೇಶದಲ್ಲಿ ಪ್ರತಿಪಕ್ಷ ಮತ್ತು ಬಿಜೆಪಿ ಸರ್ಕಾರದ ನಡುವೆ ರಾಜಕೀಯ ಯುದ್ಧಕ್ಕೆ ನಾಂದಿ ಹಾಡಿದೆ.

ಕಾಂಗ್ರೆಸ್ ಆಡಳಿತದಲ್ಲಿರುವ ಎರಡು ರಾಜ್ಯಗಳಿಂದ ಲಾರಿಗಳು ಅಕ್ರಮವಾಗಿ ಓಡುತ್ತಿವೆ ಎಂದು ಸೂಚಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತಕ್ಕೆ ಕಾಂಗ್ರೆಸ್ ಪಕ್ಷವನ್ನು ದೂಷಿಸಿದ್ದಾರೆ.


ಓದಿ: ಪ್ರಿಯಾಂಕಾ ಗಾಂಧಿಗೆ 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...