ಉತ್ತರಪ್ರದೇಶದ ಮನ್ಸೂರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾ ಗ್ರಾಮದಲ್ಲಿ 55 ವರ್ಷದ ಮಹಿಳೆಯೊಬ್ಬಳು ತನ್ನ ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕಾಗಿ ನಾಲ್ಕು ಜನರಿಂದ ಥಳಿಸಲ್ಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರಾರಿಯಾಗಿದ್ದ ಆಕಾಶ್, ಗೋಪಿ, ಬಿನೇಂದ್ರ, ಮತ್ತು ರಾಜೇಶ್ ಎಂಬ ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅವರನ್ನು ಹಿಡಿಯಲು ಮ್ಯಾನ್ಹಂಟ್ ನಡೆಯುತ್ತಿದೆ ಎಂದು ಮನ್ಸೂರ್ಪುರ ಪೊಲೀಸ್ ಠಾಣಾಧಿಕಾರಿ ಕೆ ಪಿ ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ಬಾಲಕಿಗೆ ಕಿರುಕುಳ ನೀಡಿ, ಟೆರೇಸ್ನಿಂದ ದೂಡಿದ ದುರ್ಷ್ಕಮಿಗಳು
ಕುಟುಂಬ ಸದಸ್ಯರು ಸಲ್ಲಿಸಿದ ದೂರಿನಲ್ಲಿ, “ನೆರೆಹೊರೆಯ ನಾಲ್ಕು ಜನರು ತಮ್ಮ ಕುಟುಂಬದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಲಾಗಿದೆ.
ಸೋಮವಾರ ಸಂಜೆ ನಾಲ್ವರು ಆರೋಪಿಗಳು ಆಕೆಯ ಮನೆಯೊಳಗೆ ಪ್ರವೇಶಿಸಿ ಸೆವ್ಟಿ ದೇವಿ (55) ಎಂದು ಗುರುತಿಸಲ್ಪಟ್ಟ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಆಕೆಯನ್ನು ತೀವ್ರವಾಗಿ ಥಳಿಸಿದ್ದಾರೆ. ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆಕೆ ಸತ್ತಿದ್ದಾಳೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಇದನ್ನೂ ಓದಿ: ಉತ್ತರ ಪ್ರದೇಶ: ನವರಾತ್ರಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ