Homeಮುಖಪುಟಉತ್ತರಪ್ರದೇಶ: ಪೊಲೀಸ್ ಅಧಿಕಾರಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿತ

ಉತ್ತರಪ್ರದೇಶ: ಪೊಲೀಸ್ ಅಧಿಕಾರಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿತ

- Advertisement -
- Advertisement -

ಉತ್ತರಪ್ರದೇಶದ ಆಗ್ರಾದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಓರ್ವನಿಗೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಆಘಾತಕಾರಿ ಘಟನೆ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಪೊಲೀಸ್ ಅಧಿಕಾರಿಯನ್ನು ಬೆತ್ತಲೆಯಾಗಿ ಕಂಬಕ್ಕೆ ಕಟ್ಟಿಹಾಕಿ ಥಳಿಸುತ್ತಿರುವುದು ಕಂಡು ಬಂದಿದೆ.

ಮಹಿಳೆಯೊಂದಿಗೆ ಆಕ್ಷೇಪಾರ್ಹ ರೀತಿಯಲ್ಲಿದ್ದ ಕಾರಣ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ಗ್ರಾಮಸ್ಥರು ಥಳಿಸಿದ್ದಾರೆ. ಪೊಲೀಸ್ ಅಧಿಕಾರಿ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಕುಟುಂಬ ಹೇಳಿದೆ.

ಗ್ರಾಮಸ್ಥರಿಂದ ಥಳಿತಕ್ಕೊಳಗಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ಸಂದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಸಂದೀಪ್ ಕುಮಾರ್ ಕುಡಿದ ಅಮಲಿನಲ್ಲಿ ಮಹಿಳೆಯ ಮನೆಯ ಛಾವಣಿಯ ಮೂಲಕ ಹಾರಿ ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಈ ವೇಳೆ ಅವರು ಜೋರಾಗಿ ಕೂಗಾಡಿದ್ದಾರೆ.

ಮನೆಯವರು ಮಹಿಳೆಯ ಕೂಗು ಕೇಳಿ ಬಂದು ನೋಡಿದಾಗ ಮನೆಯೊಳಗೆ ಇನ್ಸ್‌ಪೆಕ್ಟರ್‌ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ. ನಂತರ ಗ್ರಾಮಸ್ಥರು ಬಂದು ಸಂದೀಪ್ ಕುಮಾರ್‌ನನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಈ ವೇಳೆ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿ ಅಧಿಕಾರಿಯನ್ನು ರಕ್ಷಿಸಿ ಕರೆದೊಯ್ದಿದ್ದಾರೆ.

ಘಟನೆ ಬಳಿಕ ಸಂದೀಪ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿದೆ ಮತ್ತು ಅವರ ವಿರುದ್ಧ ಇಲಾಖಾ ವಿಚಾರಣೆಗೆ ಸೂಚಿಸಲಾಗಿದೆ. ಪೊಲೀಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಪ್ರಕರಣ ಕೂಡ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಎತ್ಮಾದಪುರ ಎಸಿಪಿ, ಪೊಲೀಸರು ಈ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಸಬ್ ಇನ್ಸ್‌ಪೆಕ್ಟರ್ ಬಾಲಕಿಯೊಂದಿಗೆ ಸಿಕ್ಕಿಬಿದ್ದ ಪ್ರಕರಣದಲ್ಲಿ ಸಬ್ ಇನ್ಸ್‌ಪೆಕ್ಟರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಈ ಕುರಿತು ದೂರು ಸ್ವೀಕರಿಸಿದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಯೋಧನನ್ನು ಅಪಹರಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...