Homeಮುಖಪುಟಯುಪಿ: ‘ಸ್ಟ್ರಾಂಗ್ ರೂಂ’ ಮೇಲೆ ದುರ್ಬೀನು ಹಾಕಿ ಕಾಯುತ್ತಿರುವ ಎಸ್‌ಪಿ ಅಭ್ಯರ್ಥಿ!

ಯುಪಿ: ‘ಸ್ಟ್ರಾಂಗ್ ರೂಂ’ ಮೇಲೆ ದುರ್ಬೀನು ಹಾಕಿ ಕಾಯುತ್ತಿರುವ ಎಸ್‌ಪಿ ಅಭ್ಯರ್ಥಿ!

- Advertisement -
- Advertisement -

ಪಂಚರಾಜ್ಯಗಳ ಮತದಾನ ಪ್ರಕ್ರಿಯೆ ಈಗಾಗಲೆ ಮುಗಿದಿದ್ದು, ಗುರುವಾರದಂದು ಎಣಿಕೆ ನಡೆಯಲಿದೆ. ಅದರಲ್ಲೂ ದೇಶದ ಜನತೆ ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶವನ್ನು ಕಾತರದಿಂದ ಕಾಯುತ್ತಿದ್ದಾರೆ. ಇದೇ ವೇಳೆ ಸಮಾಜವಾದಿ ಪಕ್ಷದ ಅಭ್ಯರ್ಥಿಯೊಬ್ಬರು ಮತದಾನ ಪೆಟ್ಟಿಗೆಯನ್ನು (ಇವಿಎಂ) ಇಟ್ಟಿರುವ ಸ್ಟ್ರಾಂಗ್‌ ರೂಂ ಬಳಿ ಮೂರು ಪಾಳಿಯಲ್ಲಿ ಕಾಯುತ್ತಿರುವುದಾಗಿ ಹೇಳಿದ್ದಾರೆ.

ಮೀರತ್‌ನ ಮೀರತ್‌ನ ಹಸ್ತಿನಾಪುರ ವಿಧಾನಸಭಾ ಕ್ಷೇತ್ರದ ಸಮಾಜವಾದಿ ಪಕ್ಷ-ರಾಷ್ಟ್ರೀಯ ಲೋಕದಳ ಅಭ್ಯರ್ಥಿ ಯೋಗೇಶ್ ವರ್ಮಾ ಅವರು ಮತ ಎಣಿಕೆ ಕೇಂದ್ರದ ಹೊರಗೆ ದುರ್ಬೀನ್‌ನೊಂದಿಗೆ ಮೊಕ್ಕಾಂ ಹೂಡಿದ್ದು, ಮತದಾನದ ನಂತರ ಇವಿಎಂಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್ ಮತ್ತು ಪಕ್ಕದ ಪ್ರದೇಶಗಳ ಮೇಲೆ ನಿಗಾ ಇರಿಸಿದ್ದಾರೆ.

ಇದನ್ನೂ ಓದಿ:  Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ಭಾನುವಾರ ತೆರೆದ ಜೀಪಿನಲ್ಲಿ ವಿಶ್ವವಿದ್ಯಾನಿಲಯ ತಲುಪಿದ ವರ್ಮಾ, ತನ್ನ ವಾಹನವನ್ನು ಸುಮಾರು 400 ಮೀಟರ್ ದೂರದಲ್ಲಿ ನಿಲ್ಲಿಸಿ ಮತ್ತು ಬೈನಾಕ್ಯುಲರ್ ಮೂಲಕ ಸ್ಟ್ರಾಂಗ್ ರೂಂ ಅನ್ನು ಪರಿಶೀಲಿಸಿದ್ದಾರೆ. ಸ್ಟ್ರಾಂಗ್‌ ರೂಂಗಳು ಮತ್ತು ಅದರ ಸುತ್ತಮುತ್ತಲಿನ ಚಲನವಲನಗಳ ಮೇಲೆ ನಿಗಾ ಇಡಲು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌‌ ನಮಗೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ನಾವು ಅವರ ಸಲಹೆಯನ್ನು ಅನುಸರಿಸುತ್ತಿದ್ದೇವೆ ಎಂದು ಯೋಗೇಶ್‌ ತಿಳಿಸಿದ್ದಾರೆ.

“ನಮ್ಮ ಹೋರಾಟವು ಆಡಳಿತ ಪಕ್ಷದ ವಿರುದ್ಧವಾಗಿದೆ. ಕಳೆದ ವರ್ಷ ಪಂಚಾಯತ್ ಚುನಾವಣೆಗಳಲ್ಲಿ ಆಡಳಿತ ಪಕ್ಷದ ನಾಯಕರು ಚುನಾವಣಾ ನಿಯಮಾವಳಿಗಳ ಸಂಪೂರ್ಣ ಉಲ್ಲಂಘನೆಯನ್ನು ಮಾಡಿದ್ದಾರೆ. ಹೀಗಾಗಿ ನಾವು ಜನರ ಮತಗಳನ್ನು ಕಳೆದುಕೊಳ್ಳುವಂತಹ ಅಪಾಯದ ಬಗ್ಗೆ ಜಾಗೃತರಾಗಿದ್ದೇವೆ” ಎಂದು ಯೋಗೇಶ್‌ ವರ್ಮಾ ಹಿಂದೂಸ್ಥಾನ್‌ ಟೈಮ್ಸ್‌‌ ಜೊತಗೆ ಮಾತನಾಡುತ್ತಾ ಹೇಳಿದ್ದಾರೆ.

“ಇವಿಎಂ ಸ್ಟ್ರಾಂಗ್ ರೂಮ್ ಮತ್ತು ಅದರ ಸುತ್ತಲಿನ ಇತರ ಚಲನವಲನಗಳ ಮೇಲೆ ನಿಗಾ ಇಡಲು ಎಸ್‌ಪಿ ಮುಖ್ಯಸ್ಥರು ಆದೇಶಿಸಿದ್ದಾರೆ. ನಾವು 8 ಗಂಟೆಗಳ ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತೇವೆ. ನಮಗೆ ಎಕ್ಸಿಟ್ ಪೋಲ್‌ಗಳಲ್ಲಿ ನಂಬಿಕೆ ಇಲ್ಲ. ಅಖಿಲೇಶ್ ಯಾದವ್ ಅವರು ಖಂಡಿತಾ ಸಿಎಂ ಆಗುತ್ತಾರೆ. ನಾವು ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ” ಎಂದು ಯೋಗೇಶ್ ಎಎನ್‌ಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಒಟ್ಟು ಏಳು ಹಂತಗಳ ಮತನಾದ ಪ್ರಕ್ರಿಯೆ ನಡೆದಿತ್ತು. ಒಟ್ಟು ಐದು ರಾಜ್ಯಗಳಲ್ಲಿ ನಡೆದ ಮತದಾನದ ಫಲಿತಾಂಶ ಗುರುವಾರ ಹೊರಬೀಳಲಿದೆ.

ಇದನ್ನೂ ಓದಿ: ‘ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ನಾಗರಿಕರನ್ನು ಉಕ್ರೇನ್‌‌‌ನಿಂದ ಸ್ಥಳಾಂತರಿಸಲು ಸಾಧ್ಯವಾಯಿತು’: ಉತ್ತರ ಪ್ರದೇಶ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

0
ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ. ಇದಲ್ಲದೆ ವರದಿಯಲ್ಲಿ ರೋಹಿತ್‌ ವೇಮುಲಾ 'ದಲಿತ ಅಲ್ಲ', ತನ್ನ “ನಿಜವಾದ ಜಾತಿಯ ಗುರುತು”...