Homeಮುಖಪುಟಯುಪಿ: ‘ಸ್ಟ್ರಾಂಗ್ ರೂಂ’ ಮೇಲೆ ದುರ್ಬೀನು ಹಾಕಿ ಕಾಯುತ್ತಿರುವ ಎಸ್‌ಪಿ ಅಭ್ಯರ್ಥಿ!

ಯುಪಿ: ‘ಸ್ಟ್ರಾಂಗ್ ರೂಂ’ ಮೇಲೆ ದುರ್ಬೀನು ಹಾಕಿ ಕಾಯುತ್ತಿರುವ ಎಸ್‌ಪಿ ಅಭ್ಯರ್ಥಿ!

- Advertisement -
- Advertisement -

ಪಂಚರಾಜ್ಯಗಳ ಮತದಾನ ಪ್ರಕ್ರಿಯೆ ಈಗಾಗಲೆ ಮುಗಿದಿದ್ದು, ಗುರುವಾರದಂದು ಎಣಿಕೆ ನಡೆಯಲಿದೆ. ಅದರಲ್ಲೂ ದೇಶದ ಜನತೆ ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶವನ್ನು ಕಾತರದಿಂದ ಕಾಯುತ್ತಿದ್ದಾರೆ. ಇದೇ ವೇಳೆ ಸಮಾಜವಾದಿ ಪಕ್ಷದ ಅಭ್ಯರ್ಥಿಯೊಬ್ಬರು ಮತದಾನ ಪೆಟ್ಟಿಗೆಯನ್ನು (ಇವಿಎಂ) ಇಟ್ಟಿರುವ ಸ್ಟ್ರಾಂಗ್‌ ರೂಂ ಬಳಿ ಮೂರು ಪಾಳಿಯಲ್ಲಿ ಕಾಯುತ್ತಿರುವುದಾಗಿ ಹೇಳಿದ್ದಾರೆ.

ಮೀರತ್‌ನ ಮೀರತ್‌ನ ಹಸ್ತಿನಾಪುರ ವಿಧಾನಸಭಾ ಕ್ಷೇತ್ರದ ಸಮಾಜವಾದಿ ಪಕ್ಷ-ರಾಷ್ಟ್ರೀಯ ಲೋಕದಳ ಅಭ್ಯರ್ಥಿ ಯೋಗೇಶ್ ವರ್ಮಾ ಅವರು ಮತ ಎಣಿಕೆ ಕೇಂದ್ರದ ಹೊರಗೆ ದುರ್ಬೀನ್‌ನೊಂದಿಗೆ ಮೊಕ್ಕಾಂ ಹೂಡಿದ್ದು, ಮತದಾನದ ನಂತರ ಇವಿಎಂಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್ ಮತ್ತು ಪಕ್ಕದ ಪ್ರದೇಶಗಳ ಮೇಲೆ ನಿಗಾ ಇರಿಸಿದ್ದಾರೆ.

ಇದನ್ನೂ ಓದಿ:  Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ಭಾನುವಾರ ತೆರೆದ ಜೀಪಿನಲ್ಲಿ ವಿಶ್ವವಿದ್ಯಾನಿಲಯ ತಲುಪಿದ ವರ್ಮಾ, ತನ್ನ ವಾಹನವನ್ನು ಸುಮಾರು 400 ಮೀಟರ್ ದೂರದಲ್ಲಿ ನಿಲ್ಲಿಸಿ ಮತ್ತು ಬೈನಾಕ್ಯುಲರ್ ಮೂಲಕ ಸ್ಟ್ರಾಂಗ್ ರೂಂ ಅನ್ನು ಪರಿಶೀಲಿಸಿದ್ದಾರೆ. ಸ್ಟ್ರಾಂಗ್‌ ರೂಂಗಳು ಮತ್ತು ಅದರ ಸುತ್ತಮುತ್ತಲಿನ ಚಲನವಲನಗಳ ಮೇಲೆ ನಿಗಾ ಇಡಲು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌‌ ನಮಗೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ನಾವು ಅವರ ಸಲಹೆಯನ್ನು ಅನುಸರಿಸುತ್ತಿದ್ದೇವೆ ಎಂದು ಯೋಗೇಶ್‌ ತಿಳಿಸಿದ್ದಾರೆ.

“ನಮ್ಮ ಹೋರಾಟವು ಆಡಳಿತ ಪಕ್ಷದ ವಿರುದ್ಧವಾಗಿದೆ. ಕಳೆದ ವರ್ಷ ಪಂಚಾಯತ್ ಚುನಾವಣೆಗಳಲ್ಲಿ ಆಡಳಿತ ಪಕ್ಷದ ನಾಯಕರು ಚುನಾವಣಾ ನಿಯಮಾವಳಿಗಳ ಸಂಪೂರ್ಣ ಉಲ್ಲಂಘನೆಯನ್ನು ಮಾಡಿದ್ದಾರೆ. ಹೀಗಾಗಿ ನಾವು ಜನರ ಮತಗಳನ್ನು ಕಳೆದುಕೊಳ್ಳುವಂತಹ ಅಪಾಯದ ಬಗ್ಗೆ ಜಾಗೃತರಾಗಿದ್ದೇವೆ” ಎಂದು ಯೋಗೇಶ್‌ ವರ್ಮಾ ಹಿಂದೂಸ್ಥಾನ್‌ ಟೈಮ್ಸ್‌‌ ಜೊತಗೆ ಮಾತನಾಡುತ್ತಾ ಹೇಳಿದ್ದಾರೆ.

“ಇವಿಎಂ ಸ್ಟ್ರಾಂಗ್ ರೂಮ್ ಮತ್ತು ಅದರ ಸುತ್ತಲಿನ ಇತರ ಚಲನವಲನಗಳ ಮೇಲೆ ನಿಗಾ ಇಡಲು ಎಸ್‌ಪಿ ಮುಖ್ಯಸ್ಥರು ಆದೇಶಿಸಿದ್ದಾರೆ. ನಾವು 8 ಗಂಟೆಗಳ ಮೂರು ಪಾಳಿಗಳಲ್ಲಿ ಕೆಲಸ ಮಾಡುತ್ತೇವೆ. ನಮಗೆ ಎಕ್ಸಿಟ್ ಪೋಲ್‌ಗಳಲ್ಲಿ ನಂಬಿಕೆ ಇಲ್ಲ. ಅಖಿಲೇಶ್ ಯಾದವ್ ಅವರು ಖಂಡಿತಾ ಸಿಎಂ ಆಗುತ್ತಾರೆ. ನಾವು ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ” ಎಂದು ಯೋಗೇಶ್ ಎಎನ್‌ಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಒಟ್ಟು ಏಳು ಹಂತಗಳ ಮತನಾದ ಪ್ರಕ್ರಿಯೆ ನಡೆದಿತ್ತು. ಒಟ್ಟು ಐದು ರಾಜ್ಯಗಳಲ್ಲಿ ನಡೆದ ಮತದಾನದ ಫಲಿತಾಂಶ ಗುರುವಾರ ಹೊರಬೀಳಲಿದೆ.

ಇದನ್ನೂ ಓದಿ: ‘ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ನಾಗರಿಕರನ್ನು ಉಕ್ರೇನ್‌‌‌ನಿಂದ ಸ್ಥಳಾಂತರಿಸಲು ಸಾಧ್ಯವಾಯಿತು’: ಉತ್ತರ ಪ್ರದೇಶ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...