ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಶಾಸಕ ಶಾಜಿಲ್ ಇಸ್ಲಾಂ ಅನ್ಸಾರಿ ಒಡೆತನದ ಪೆಟ್ರೋಲ್ ಪಂಪ್ ಅನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯದೇ ನಿರ್ಮಿಸಲಾಗಿದೆ ಎಂದು ಆರೋಪಿಸಿ ಬರೇಲಿ ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಗುರುವಾರ ನೆಲಸಮಗೊಳಿಸಿದೆ. ಅವರು ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ದ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಪ್ರಾಧಿಕಾರ ಈ ಕ್ರಮ ಕೈಗೊಂಡಿದೆ.
ಭಾನುವಾರ ಬರೇಲಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪದ ಮೇಲೆ ಅನ್ಸಾರಿ ಮತ್ತು ಇತರ ಕೆಲವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅದಾಗಿ ಮೂರು ದಿನಗಳ ನಂತರ, ಸುಮಾರು ಒಂದು ವರ್ಷದ ಹಿಂದೆ ಹೊರಡಿಸಿದ ಆದೇಶದ ಆಧಾರದ ಮೇಲೆ ಪೆಟ್ರೋಲ್ ಪಂಪ್ ಅನ್ನು ನೆಲಸಮ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಪೆಟ್ರೋಲ್ ಪಂಪ್ನ ನಿರ್ಮಾಣವು ಜುಲೈ 2019 ರಲ್ಲಿ ಪ್ರಾರಂಭವಾಯಿತು. ನಂತರ ನಿರ್ಮಾಣವನ್ನು ನಿಲ್ಲಿಸುವಂತೆ ಅವರಿಗೆ ನೋಟಿಸ್ ನೀಡಲಾಯಿತು. ಆದರೆ ಅವರು ನಿಲ್ಲಿಸಲಿಲ್ಲ. ಹಲವಾರು ವಿಚಾರಣೆಗಳ ನಂತರ, ಮಾರ್ಚ್ 2021 ರಲ್ಲಿ ಅದನ್ನು ನೆಲಸಮಗೊಳಿಸುವ ಬಗ್ಗೆ ಆದೇಶವನ್ನು ಅಂಗೀಕರಿಸಲಾಯಿತು. ಆ ಆದೇಶದ ಅನುಸಾರವಾಗಿ ಪೆಟ್ರೋಲ್ ಪಂಪ್ ಅನ್ನು ನೆಲಸಮಗೊಳಿಸಲಾಗಿದೆ” ಎಂದು ಬಿಡಿಎ ಕಾರ್ಯದರ್ಶಿ ಯೋಗೇಂದ್ರ ಕುಮಾರ್ ದಿ ಇಂಡಿಯನ್ ಎಕ್ಸ್ಪ್ರೆಸ್ಗೆ ಹೇಳಿದ್ದಾರೆ.
#WATCH: UP | District admin in Bareilly demolishes a petrol pump owned by SP MLA Shazil Islam. The petrol pump was allegedly constructed without a map approval. pic.twitter.com/qhkfp6l3So
— ANI UP/Uttarakhand (@ANINewsUP) April 7, 2022
ಇತ್ತೀಚೆಗೆ, ಆದಿತ್ಯನಾಥ್ಗೆ ಬೆದರಿಕೆ ಮತ್ತು ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಶಾಸಕ ಮತ್ತು ಇತರ ಕೆಲವು ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ‘ಇವ ನಮ್ಮವ’ ಪರಂಪರೆ ನಮ್ಮದು: ನಿಜ ಆಧ್ಯಾತ್ಮಿಕ ಮಠಾಧೀಶರ ಮನದಾಳದ ಮಾತು
ಭೋಜಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶಾಜಿಲ್ ಇಸ್ಲಾಂ, ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ಸಂಜೀವ್ ಕುಮಾರ್ ಸಕ್ಸೇನಾ ಮತ್ತು ಇತರರ ವಿರುದ್ಧ ಹಿಂದೂ ಯುವವಾಹಿನಿಯ ಅನೂಜ್ ವರ್ಮಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್ ಅವರು ಹೇಳಿದ್ದಾರೆ.
ಸೆಕ್ಷನ್ 504 (ಶಾಂತಿ ಕದಡುವುದು), 506 (ಬೆದರಿಕೆ) ಮತ್ತು 153 ಎ (ಗಲಭೆಗಳನ್ನು ಪ್ರಚೋದಿಸುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು) ಅಡಿಯಲ್ಲಿ ಬರೇಲಿಯ ಬರದಾರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬರೇಲಿಯ ಆಕಾಶ್ ಪುರಂನಲ್ಲಿ ಶಾಸಕರನ್ನು ಸನ್ಮಾನಿಸಲು ಸಕ್ಸೇನಾ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಗುರಿಯಾಗಿಸಿ ಶಾಜಿಲ್ ಇಸ್ಲಾಂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಅನುಜ್ ವರ್ಮಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
“ಆದಿತ್ಯನಾಥ್ ಬಾಯಿಂದ ಧ್ವನಿ ಹೊರಬಂದರೆ, ಎಸ್ಪಿ ಬಂದೂಕುಗಳು ಕೇವಲ ಹೊಗೆಯನ್ನು ಮಾತ್ರ ಹೊರಸೂಸುದಿಲ್ಲ ಜೊತೆಗೆ ಗುಂಡುಗಳನ್ನು ಹೊರಸೂಸುತ್ತವೆ” ಎಂದು ತಮ್ಮ ಪಕ್ಷದ ಬೆಂಬಲಿಗರಿಗೆ ಸಮಾರಂಭದಲ್ಲಿ ಶಾಜಿಲ್ ಹೇಳಿದ್ದಾರೆ ಎಂದು ಅನುಜ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ವಾಹಿನಿಯೊಂದು ಪ್ರಸಾರ ಮಾಡಿದ ಶಾಜಿಲ್ ಹೇಳಿಕೆಯ ವಿಡಿಯೋ ತುಣುಕಿನ ಆಧಾರದ ಮೇಲೆ ಅನುಜ್ ಶಾಸಕ ಮತ್ತು ಇತರರ ವಿರುದ್ಧ ದೂರು ದಾಖಲಿಸಿದ್ದಾರೆ. ಆದರೆ ಶಾಸಕ ಶಾಜಿಲ್ ಅವರು ಸುದ್ದಿ ವಾಹಿನಿಯು ತನ್ನ ಹೇಳಿಕೆಯನ್ನು ತಿರುಚಿದೆ ಎಂದು ಆರೋಪಿಸಿದ್ದು, ವೀಡಿಯೊ ಕ್ಲಿಪ್ನ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಇದನ್ನೂ ಓದಿ: ಯುಪಿ: ಮುಸ್ಲಿಂ ಹೆಂಗಸರನ್ನು ರೇಪ್ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್’ ಕೂಗಿದ ಪುಂಡರು