Homeಮುಖಪುಟಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

ಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

- Advertisement -
- Advertisement -

ಮುಸ್ಲಿಂ ಹೆಂಗಸರನ್ನು ಅಪಹರಿಸಿ ರೇಪ್‌ ಮಾಡಲು ಕರೆ ನೀಡಿದ ಸ್ವಾಮೀಜಿಯ ವಿಡಿಯೊ ವೈರಲ್‌ ಆಗಿದ್ದು, ತನಿಖೆ ನಡೆಸಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ ಸುಮಾರು 100 ಕಿಮೀ ದೂರದಲ್ಲಿರುವ ಸೀತಾಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಸೀದಿಯ ಹೊರಗೆ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಹಿಂದೂ ಅರ್ಚಕ ಈ ರೀತಿಯ ಕರೆ ನೀಡಿದ್ದಾನೆ ಎನ್ನಲಾಗಿದೆ. ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕುತ್ತಿರುವ ವೀಡಿಯೊ ಕುರಿತು ತನಿಖೆ ನಡೆಸುವುದಾಗಿ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

ಕೇಸರಿ ವಸ್ತ್ರಗಳನ್ನು ಧರಿಸಿದ ವ್ಯಕ್ತಿಯೊಬ್ಬರು, ಖೈರಾಬಾದ್ ಎಂಬ ಸಣ್ಣ ಪಟ್ಟಣದಲ್ಲಿ ಜೀಪಿನ ಒಳಗೆ ಕೂತು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ. ಚೀಪಿನ ಪಕ್ಕದಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವ ವ್ಯಕ್ತಿಯನ್ನೂ ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮೈಕ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿಯ ಮುಂದೆ “ಜೈ ಶ್ರೀ ರಾಮ್” ಎಂದು ಕೂಗುವ ದುಷ್ಕರ್ಮಿಗಳು, ಪ್ರಚೋದನಾಕಾರಿ ಮಾತುಗಳಿಗೆ ಜೈಕಾರ ಕೂಗಿದ್ದಾರೆ.

ತನ್ನನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಈ ವ್ಯಕ್ತಿಯು ಆರೋಪಿಸಿದ್ದು ಇದಕ್ಕಾಗಿ ₹ 28 ಲಕ್ಷ ಸಂಗ್ರಹಿಸಲಾಗಿದೆ ಎಂದಿದ್ದಾರೆ.

ಆ ಪ್ರದೇಶದಲ್ಲಿ ಯಾವುದೇ ಹುಡುಗಿಗೆ ಮುಸ್ಲಿಂ ಕಿರುಕುಳ ನೀಡಿದರೆ, ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಸಾರ್ವಜನಿಕವಾಗಿ ಅತ್ಯಾಚಾರ ಮಾಡಬೇಕೆಂದು ಪ್ರಚೋದಿಸಲಾಗಿದೆ. ಈ ಮಾತುಗಳಿಗೆ ಯುವಕರು ಹರ್ಷೋದ್ಘಾರ ಮಾಡಿದ್ದಾರೆ.

ಇದನ್ನೂ ಓದಿರಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ವೀಡಿಯೋವನ್ನು ಹಂಚಿಕೊಂಡಿರುವ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್ ಆಲ್ಟ್‌ನ್ಯೂಸ್‌ನ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್, ಈ ವೀಡಿಯೊವನ್ನು ಏಪ್ರಿಲ್ 2 ರಂದು ಚಿತ್ರೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜುಬೈರ್‌‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸೀತಾಪುರ ಪೊಲೀಸರು, “ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸತ್ಯಗಳ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಜುಬೇರ್ ಅವರ ಪೋಸ್ಟ್ ಗಮನಿಸಿರುವ ಹಲವಾರು ಟ್ವಿಟರ್ ಬಳಕೆದಾರರು ಈ ಧಾರ್ಮಿಕ ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೆಲವರು ಈತನನ್ನು “ಬಜರಂಗ ಮುನಿ” ಎಂದು ಗುರುತಿಸಿದ್ದಾರೆ. ಯುಎನ್‌ ಮಾನವ ಹಕ್ಕುಗಳ ಸಂಸ್ಥೆ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಕ್ರಮ ಜರುಗಿಸಬೇಕೆಂಬ ಆಗ್ರಹ ಕೇಳಿಬಂದಿದೆ.

ಹೆಚ್ಚಿದ ಮುಸ್ಲಿಂ ದ್ವೇಷ

ಬಲಪಂಥೀಯ ಸಂಘಟನೆಗಳ ದಿನದಿಂದ ದಿನಕ್ಕೆ ಸಮಾಜದಲ್ಲಿ ಸಾಮರಸ್ಯ ಕದಡುವುದು ಹೆಚ್ಚಾಗುತ್ತಿದೆ. ಪ್ರಚೋದನಾಕಾರಿ ಭಾಷಣಗಳಿಂದಲೇ ಗುರುತಿಸಿಕೊಂಡಿರುವ ಯತಿ ನರಸಿಂಗಾನಂದ, ಹರಿದ್ವಾರದ ಧರ್ಮ ಸಂಸತ್‌ನಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಬಂದ ಬಳಿಕವೂ ಇದೇ ಪ್ರವೃತ್ತಿ ಮುಂದುವರಿಸಿದರು.

ಏಪ್ರಿಲ್ 3ರ ಭಾನುವಾರದಂದು ನಡೆದ ಸಮಾರಂಭದಲ್ಲಿ ದ್ವೇಷಪೂರಿತ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಬುರಾರಿಯಲ್ಲಿ ನಡೆದ ‘ಹಿಂದೂ ಮಹಾಪಂಚಾಯತ್’ನಲ್ಲಿ ಪಾಲ್ಗೊಂಡಿದ್ದ ಭಾಷಣಕಾರರು ಹಾಗೂ ಸಂಘಟಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ವಿವಾದಿತ ಹಿಂದುತ್ವ ಮುಖಂಡ ಯತಿ ನರಸಿಂಗಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅಸಹಕಾರ) ಮತ್ತು 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಎಸಗುವುದು) ಅಡಿಯಲ್ಲಿ ಮುಖರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ದಾಸನ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸೇರಿದಂತೆ ಕೆಲವು ಭಾಷಣಕಾರರು ಎರಡು ಸಮುದಾಯಗಳ ನಡುವೆ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಮಾತುಗಳನ್ನು ಹೇಳಿದ್ದಾರೆ” ಎಂದು ವಾಯುವ್ಯ ದೆಹಲಿ ಉಪ ಪೊಲೀಸ್ ಆಯುಕ್ತರಾದ ಉಷಾ ರಂಗಾನಿ ತಿಳಿಸಿದ್ದಾರೆ.

ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಯತಿನರಸಿಂಗಾನಂದ  ಪ್ರಚೋದಿಸಿರುವುದು ವರದಿಯಾಗಿದೆ. ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ ಎಂದು ನರಸಿಂಗಾನಂದ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿರಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸ್ವಾಮಿಜೀಯನ್ನ ಒಳಗೆ ಹಾಕಬೇಕಿದೆ ,ಕಾವಿದಾರಿಗಳಿಂದ ಈ ಪದ ಬಳಕೆ ಅಕ್ಷಮ್ಯ ಅಪರಾಧ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...