Homeಮುಖಪುಟಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

ಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

- Advertisement -
- Advertisement -

ಮುಸ್ಲಿಂ ಹೆಂಗಸರನ್ನು ಅಪಹರಿಸಿ ರೇಪ್‌ ಮಾಡಲು ಕರೆ ನೀಡಿದ ಸ್ವಾಮೀಜಿಯ ವಿಡಿಯೊ ವೈರಲ್‌ ಆಗಿದ್ದು, ತನಿಖೆ ನಡೆಸಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ ಸುಮಾರು 100 ಕಿಮೀ ದೂರದಲ್ಲಿರುವ ಸೀತಾಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಸೀದಿಯ ಹೊರಗೆ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಹಿಂದೂ ಅರ್ಚಕ ಈ ರೀತಿಯ ಕರೆ ನೀಡಿದ್ದಾನೆ ಎನ್ನಲಾಗಿದೆ. ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕುತ್ತಿರುವ ವೀಡಿಯೊ ಕುರಿತು ತನಿಖೆ ನಡೆಸುವುದಾಗಿ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

ಕೇಸರಿ ವಸ್ತ್ರಗಳನ್ನು ಧರಿಸಿದ ವ್ಯಕ್ತಿಯೊಬ್ಬರು, ಖೈರಾಬಾದ್ ಎಂಬ ಸಣ್ಣ ಪಟ್ಟಣದಲ್ಲಿ ಜೀಪಿನ ಒಳಗೆ ಕೂತು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ. ಚೀಪಿನ ಪಕ್ಕದಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವ ವ್ಯಕ್ತಿಯನ್ನೂ ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮೈಕ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿಯ ಮುಂದೆ “ಜೈ ಶ್ರೀ ರಾಮ್” ಎಂದು ಕೂಗುವ ದುಷ್ಕರ್ಮಿಗಳು, ಪ್ರಚೋದನಾಕಾರಿ ಮಾತುಗಳಿಗೆ ಜೈಕಾರ ಕೂಗಿದ್ದಾರೆ.

ತನ್ನನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಈ ವ್ಯಕ್ತಿಯು ಆರೋಪಿಸಿದ್ದು ಇದಕ್ಕಾಗಿ ₹ 28 ಲಕ್ಷ ಸಂಗ್ರಹಿಸಲಾಗಿದೆ ಎಂದಿದ್ದಾರೆ.

ಆ ಪ್ರದೇಶದಲ್ಲಿ ಯಾವುದೇ ಹುಡುಗಿಗೆ ಮುಸ್ಲಿಂ ಕಿರುಕುಳ ನೀಡಿದರೆ, ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಸಾರ್ವಜನಿಕವಾಗಿ ಅತ್ಯಾಚಾರ ಮಾಡಬೇಕೆಂದು ಪ್ರಚೋದಿಸಲಾಗಿದೆ. ಈ ಮಾತುಗಳಿಗೆ ಯುವಕರು ಹರ್ಷೋದ್ಘಾರ ಮಾಡಿದ್ದಾರೆ.

ಇದನ್ನೂ ಓದಿರಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ವೀಡಿಯೋವನ್ನು ಹಂಚಿಕೊಂಡಿರುವ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್ ಆಲ್ಟ್‌ನ್ಯೂಸ್‌ನ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್, ಈ ವೀಡಿಯೊವನ್ನು ಏಪ್ರಿಲ್ 2 ರಂದು ಚಿತ್ರೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜುಬೈರ್‌‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸೀತಾಪುರ ಪೊಲೀಸರು, “ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸತ್ಯಗಳ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಜುಬೇರ್ ಅವರ ಪೋಸ್ಟ್ ಗಮನಿಸಿರುವ ಹಲವಾರು ಟ್ವಿಟರ್ ಬಳಕೆದಾರರು ಈ ಧಾರ್ಮಿಕ ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೆಲವರು ಈತನನ್ನು “ಬಜರಂಗ ಮುನಿ” ಎಂದು ಗುರುತಿಸಿದ್ದಾರೆ. ಯುಎನ್‌ ಮಾನವ ಹಕ್ಕುಗಳ ಸಂಸ್ಥೆ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಕ್ರಮ ಜರುಗಿಸಬೇಕೆಂಬ ಆಗ್ರಹ ಕೇಳಿಬಂದಿದೆ.

ಹೆಚ್ಚಿದ ಮುಸ್ಲಿಂ ದ್ವೇಷ

ಬಲಪಂಥೀಯ ಸಂಘಟನೆಗಳ ದಿನದಿಂದ ದಿನಕ್ಕೆ ಸಮಾಜದಲ್ಲಿ ಸಾಮರಸ್ಯ ಕದಡುವುದು ಹೆಚ್ಚಾಗುತ್ತಿದೆ. ಪ್ರಚೋದನಾಕಾರಿ ಭಾಷಣಗಳಿಂದಲೇ ಗುರುತಿಸಿಕೊಂಡಿರುವ ಯತಿ ನರಸಿಂಗಾನಂದ, ಹರಿದ್ವಾರದ ಧರ್ಮ ಸಂಸತ್‌ನಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಬಂದ ಬಳಿಕವೂ ಇದೇ ಪ್ರವೃತ್ತಿ ಮುಂದುವರಿಸಿದರು.

ಏಪ್ರಿಲ್ 3ರ ಭಾನುವಾರದಂದು ನಡೆದ ಸಮಾರಂಭದಲ್ಲಿ ದ್ವೇಷಪೂರಿತ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಬುರಾರಿಯಲ್ಲಿ ನಡೆದ ‘ಹಿಂದೂ ಮಹಾಪಂಚಾಯತ್’ನಲ್ಲಿ ಪಾಲ್ಗೊಂಡಿದ್ದ ಭಾಷಣಕಾರರು ಹಾಗೂ ಸಂಘಟಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ವಿವಾದಿತ ಹಿಂದುತ್ವ ಮುಖಂಡ ಯತಿ ನರಸಿಂಗಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅಸಹಕಾರ) ಮತ್ತು 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಎಸಗುವುದು) ಅಡಿಯಲ್ಲಿ ಮುಖರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ದಾಸನ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸೇರಿದಂತೆ ಕೆಲವು ಭಾಷಣಕಾರರು ಎರಡು ಸಮುದಾಯಗಳ ನಡುವೆ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಮಾತುಗಳನ್ನು ಹೇಳಿದ್ದಾರೆ” ಎಂದು ವಾಯುವ್ಯ ದೆಹಲಿ ಉಪ ಪೊಲೀಸ್ ಆಯುಕ್ತರಾದ ಉಷಾ ರಂಗಾನಿ ತಿಳಿಸಿದ್ದಾರೆ.

ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಯತಿನರಸಿಂಗಾನಂದ  ಪ್ರಚೋದಿಸಿರುವುದು ವರದಿಯಾಗಿದೆ. ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ ಎಂದು ನರಸಿಂಗಾನಂದ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿರಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸ್ವಾಮಿಜೀಯನ್ನ ಒಳಗೆ ಹಾಕಬೇಕಿದೆ ,ಕಾವಿದಾರಿಗಳಿಂದ ಈ ಪದ ಬಳಕೆ ಅಕ್ಷಮ್ಯ ಅಪರಾಧ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...