Homeಮುಖಪುಟಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

ಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

- Advertisement -
- Advertisement -

ಮುಸ್ಲಿಂ ಹೆಂಗಸರನ್ನು ಅಪಹರಿಸಿ ರೇಪ್‌ ಮಾಡಲು ಕರೆ ನೀಡಿದ ಸ್ವಾಮೀಜಿಯ ವಿಡಿಯೊ ವೈರಲ್‌ ಆಗಿದ್ದು, ತನಿಖೆ ನಡೆಸಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ ಸುಮಾರು 100 ಕಿಮೀ ದೂರದಲ್ಲಿರುವ ಸೀತಾಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಸೀದಿಯ ಹೊರಗೆ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಹಿಂದೂ ಅರ್ಚಕ ಈ ರೀತಿಯ ಕರೆ ನೀಡಿದ್ದಾನೆ ಎನ್ನಲಾಗಿದೆ. ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕುತ್ತಿರುವ ವೀಡಿಯೊ ಕುರಿತು ತನಿಖೆ ನಡೆಸುವುದಾಗಿ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

ಕೇಸರಿ ವಸ್ತ್ರಗಳನ್ನು ಧರಿಸಿದ ವ್ಯಕ್ತಿಯೊಬ್ಬರು, ಖೈರಾಬಾದ್ ಎಂಬ ಸಣ್ಣ ಪಟ್ಟಣದಲ್ಲಿ ಜೀಪಿನ ಒಳಗೆ ಕೂತು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ. ಚೀಪಿನ ಪಕ್ಕದಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವ ವ್ಯಕ್ತಿಯನ್ನೂ ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮೈಕ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿಯ ಮುಂದೆ “ಜೈ ಶ್ರೀ ರಾಮ್” ಎಂದು ಕೂಗುವ ದುಷ್ಕರ್ಮಿಗಳು, ಪ್ರಚೋದನಾಕಾರಿ ಮಾತುಗಳಿಗೆ ಜೈಕಾರ ಕೂಗಿದ್ದಾರೆ.

ತನ್ನನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಈ ವ್ಯಕ್ತಿಯು ಆರೋಪಿಸಿದ್ದು ಇದಕ್ಕಾಗಿ ₹ 28 ಲಕ್ಷ ಸಂಗ್ರಹಿಸಲಾಗಿದೆ ಎಂದಿದ್ದಾರೆ.

ಆ ಪ್ರದೇಶದಲ್ಲಿ ಯಾವುದೇ ಹುಡುಗಿಗೆ ಮುಸ್ಲಿಂ ಕಿರುಕುಳ ನೀಡಿದರೆ, ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಸಾರ್ವಜನಿಕವಾಗಿ ಅತ್ಯಾಚಾರ ಮಾಡಬೇಕೆಂದು ಪ್ರಚೋದಿಸಲಾಗಿದೆ. ಈ ಮಾತುಗಳಿಗೆ ಯುವಕರು ಹರ್ಷೋದ್ಘಾರ ಮಾಡಿದ್ದಾರೆ.

ಇದನ್ನೂ ಓದಿರಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ವೀಡಿಯೋವನ್ನು ಹಂಚಿಕೊಂಡಿರುವ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್ ಆಲ್ಟ್‌ನ್ಯೂಸ್‌ನ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್, ಈ ವೀಡಿಯೊವನ್ನು ಏಪ್ರಿಲ್ 2 ರಂದು ಚಿತ್ರೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜುಬೈರ್‌‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸೀತಾಪುರ ಪೊಲೀಸರು, “ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸತ್ಯಗಳ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಜುಬೇರ್ ಅವರ ಪೋಸ್ಟ್ ಗಮನಿಸಿರುವ ಹಲವಾರು ಟ್ವಿಟರ್ ಬಳಕೆದಾರರು ಈ ಧಾರ್ಮಿಕ ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೆಲವರು ಈತನನ್ನು “ಬಜರಂಗ ಮುನಿ” ಎಂದು ಗುರುತಿಸಿದ್ದಾರೆ. ಯುಎನ್‌ ಮಾನವ ಹಕ್ಕುಗಳ ಸಂಸ್ಥೆ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಕ್ರಮ ಜರುಗಿಸಬೇಕೆಂಬ ಆಗ್ರಹ ಕೇಳಿಬಂದಿದೆ.

ಹೆಚ್ಚಿದ ಮುಸ್ಲಿಂ ದ್ವೇಷ

ಬಲಪಂಥೀಯ ಸಂಘಟನೆಗಳ ದಿನದಿಂದ ದಿನಕ್ಕೆ ಸಮಾಜದಲ್ಲಿ ಸಾಮರಸ್ಯ ಕದಡುವುದು ಹೆಚ್ಚಾಗುತ್ತಿದೆ. ಪ್ರಚೋದನಾಕಾರಿ ಭಾಷಣಗಳಿಂದಲೇ ಗುರುತಿಸಿಕೊಂಡಿರುವ ಯತಿ ನರಸಿಂಗಾನಂದ, ಹರಿದ್ವಾರದ ಧರ್ಮ ಸಂಸತ್‌ನಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಬಂದ ಬಳಿಕವೂ ಇದೇ ಪ್ರವೃತ್ತಿ ಮುಂದುವರಿಸಿದರು.

ಏಪ್ರಿಲ್ 3ರ ಭಾನುವಾರದಂದು ನಡೆದ ಸಮಾರಂಭದಲ್ಲಿ ದ್ವೇಷಪೂರಿತ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಬುರಾರಿಯಲ್ಲಿ ನಡೆದ ‘ಹಿಂದೂ ಮಹಾಪಂಚಾಯತ್’ನಲ್ಲಿ ಪಾಲ್ಗೊಂಡಿದ್ದ ಭಾಷಣಕಾರರು ಹಾಗೂ ಸಂಘಟಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ವಿವಾದಿತ ಹಿಂದುತ್ವ ಮುಖಂಡ ಯತಿ ನರಸಿಂಗಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಆದೇಶಕ್ಕೆ ಅಸಹಕಾರ) ಮತ್ತು 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಎಸಗುವುದು) ಅಡಿಯಲ್ಲಿ ಮುಖರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ದಾಸನ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಸರಸ್ವತಿ ಮತ್ತು ಸುದರ್ಶನ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸೇರಿದಂತೆ ಕೆಲವು ಭಾಷಣಕಾರರು ಎರಡು ಸಮುದಾಯಗಳ ನಡುವೆ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಮಾತುಗಳನ್ನು ಹೇಳಿದ್ದಾರೆ” ಎಂದು ವಾಯುವ್ಯ ದೆಹಲಿ ಉಪ ಪೊಲೀಸ್ ಆಯುಕ್ತರಾದ ಉಷಾ ರಂಗಾನಿ ತಿಳಿಸಿದ್ದಾರೆ.

ಭಾರತಕ್ಕೆ ಮುಸ್ಲಿಂ ವ್ಯಕ್ತಿ ಪ್ರಧಾನಿಯಾದರೆ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಯತಿನರಸಿಂಗಾನಂದ  ಪ್ರಚೋದಿಸಿರುವುದು ವರದಿಯಾಗಿದೆ. ಭಾರತಕ್ಕೆ ಮುಸ್ಲಿಂ ಪ್ರಧಾನಿ ಸಿಕ್ಕರೆ ಶೇಕಡಾ 40ರಷ್ಟು ಹಿಂದೂಗಳು ಸಾಯುತ್ತಾರೆ ಎಂದು ನರಸಿಂಗಾನಂದ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿರಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಸ್ವಾಮಿಜೀಯನ್ನ ಒಳಗೆ ಹಾಕಬೇಕಿದೆ ,ಕಾವಿದಾರಿಗಳಿಂದ ಈ ಪದ ಬಳಕೆ ಅಕ್ಷಮ್ಯ ಅಪರಾಧ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...