Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯ ಕ್ರಮ ಖಂಡಿಸಿದ ಟ್ವೀಟ್‌ಗಳಿಗೆ ನಿರ್ಬಂಧ

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯ ಕ್ರಮ ಖಂಡಿಸಿದ ಟ್ವೀಟ್‌ಗಳಿಗೆ ನಿರ್ಬಂಧ

- Advertisement -
- Advertisement -

ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದೆ. ಈ ಘಟನೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದು, ಹಲವಾರು ಜನರು ಘಟನೆ ವಿರೋಧಿಸಿ ಎಕ್ಸಾನಲ್ಲಿ ಮಾಡಲಾದ ಟ್ವೀಟ್‌ಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ ಎಂದು ಹಲವು ದೂರಿದ್ದಾರೆ.

ಈ ಘಟನೆ ಗುರುವಾರ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ನಡೆದಿದೆ ಆದರೆ ಘಟನೆಯ ವಿಡಿಯೋ ಶುಕ್ರವಾರ ವೈರಲ್ ಆಗಿದೆ. ವಿಡಿಯೋದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.

ಘಟನೆಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಯಿತು. ಅನೇಕ ಜನರು ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನೂ ಕೆಲವರು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿರುವ ಅನೇಕ ಬಳಕೆದಾರರು ತಮ್ಮ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಅದು ಸೈಟ್‌ನಲ್ಲಿ ಇನ್ನು ಮುಂದೆ ಗೋಚರಿಸುವುದಿಲ್ಲ. ಭಾರತದಲ್ಲಿ ಈ ಪೋಸ್ಟ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಲಾಗಿದೆ.

ಶಾದಾಬ್ ಖಾನ್ ಅವರು ಮೊದಲು ಘಟನೆಯ ಬಗ್ಗೆ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಆದರೆ ಅವರ ಪೋಸ್ಟ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಅನೇಕರ ಸಾಮಾಜಿಕ ಮಾಧ್ಯಮ ಬಳಕೆದಾರರ ಪೋಸ್ಕಗಳಿಗೂ ನಿರ್ಬಂಧ ಹೇರಲಾಗಿದೆ. ನಟಿ ಊರ್ಮಿಳಾ ಮಾತೋಂಡ್ಕರ್ ಮತ್ತು ಪತ್ರಕರ್ತರಾದ ರೋಹಿಣಿ ಸಿಂಗ್ ಮತ್ತು ಗಾರ್ಗಿ ರಾವತ್ ಸೇರಿದಂತೆ ಅನೇಕರು ತಮ್ಮ ಪೋಸ್ಟ್‌ನಲ್ಲಿ ಅವಹೇಳನಕಾರಿ ಭಾಷೆಯನ್ನು ಬಳಸದಿದ್ದರೂ ಅಥವಾ ತಪ್ಪು ಮಾಹಿತಿಯನ್ನು ಹರಡದಿದ್ದರೂ ಅವರ ಪೋಸ್ಟ್‌ಗಳನ್ನು ನಿರ್ಬಂಧಿಸಲಾಗಿದೆ ಹಾಗಾಗಿ ಅವರೂ ಕೂಡ ಏಕೆ ನಿರ್ಬಂಧಿಸಲಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರಿನಾಟೆ ಅವರು, ”ಮಗುವಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋವನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಶುಕ್ರವಾರ ಟ್ವಿಟರ್‌ಗೆ ತುರ್ತು ಆದೇಶ ಹೊರಡಿಸಿದೆ. ಶನಿವಾರ ಬೆಳಿಗ್ಗೆ, ಪ್ರಕರಣದ ಕುರಿತು ಲಿಂಕ್‌ಗಳು ಮತ್ತು ಹ್ಯಾಶ್‌ಟ್ಯಾಗ್‌ಗಳನ್ನು ನಿರ್ಬಂಧಿಸಲು ಸರ್ಕಾರ ಹೆಚ್ಚುವರಿ ಆದೇಶಗಳನ್ನು ಹೊರಡಿಸಿದೆ” ಎಂದು ಅವರು ಹೇಳಿದ್ದಾರೆ.

”ಜಾಲವನ್ನು ಮುಚ್ಚುವುದರಿಂದ ಪರಿಹಾರ ಸಿಕ್ಕಲ್ಲ” – ಒಬ್ಬ ಶಿಕ್ಷಕನು ಎಷ್ಟು ನೀಚ ಮತ್ತು ಧರ್ಮಾಂಧತೆಯಿಂದ ತುಂಬಿದ್ದಾನೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಡಿಕೊಳ್ಳಬೇಕು. ಆ ಶಿಕ್ಷಕಿಯು ಧರ್ಮದ ಕಾರಣಕ್ಕಾಗಿ ಆ ಹುಡುಗನನ್ನು ಪ್ರತ್ಯೇಕಿಸುತ್ತಾಳೆ ಮತ್ತು ಅವನ ಸಹಪಾಠಿಗಳಂದ ಅವನಿಗೆ ಕಪಾಳಮೋಕ್ಷ ಮಾಡುತ್ತಾಳೆ” ಎಂದು ಶ್ರೀನೇಟ್ ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ ಯುಪಿ ಶಿಕ್ಷಕಿ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Our humble request To National child Right commission to take up this issue very seriously and see that such things should not take place in a anywhere parts of our country. Really a great shame to the teaching community. Allready we r facing community disharmony in our country, these incidents may lead to some more disaster in the country.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...