ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದೆ. ಈ ಘಟನೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದು, ಹಲವಾರು ಜನರು ಘಟನೆ ವಿರೋಧಿಸಿ ಎಕ್ಸಾನಲ್ಲಿ ಮಾಡಲಾದ ಟ್ವೀಟ್ಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ ಎಂದು ಹಲವು ದೂರಿದ್ದಾರೆ.
ಈ ಘಟನೆ ಗುರುವಾರ ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್ನಲ್ಲಿ ಈ ಘಟನೆ ನಡೆದಿದೆ. ನಡೆದಿದೆ ಆದರೆ ಘಟನೆಯ ವಿಡಿಯೋ ಶುಕ್ರವಾರ ವೈರಲ್ ಆಗಿದೆ. ವಿಡಿಯೋದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.
ಘಟನೆಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಯಿತು. ಅನೇಕ ಜನರು ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನೂ ಕೆಲವರು ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ನಲ್ಲಿರುವ ಅನೇಕ ಬಳಕೆದಾರರು ತಮ್ಮ ಟ್ವೀಟ್ಗಳ ಸ್ಕ್ರೀನ್ಶಾಟ್ಗಳನ್ನು ಹಂಚಿಕೊಂಡಿದ್ದಾರೆ. ಅದು ಸೈಟ್ನಲ್ಲಿ ಇನ್ನು ಮುಂದೆ ಗೋಚರಿಸುವುದಿಲ್ಲ. ಭಾರತದಲ್ಲಿ ಈ ಪೋಸ್ಟ್ಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಲಾಗಿದೆ.
ಶಾದಾಬ್ ಖಾನ್ ಅವರು ಮೊದಲು ಘಟನೆಯ ಬಗ್ಗೆ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಆದರೆ ಅವರ ಪೋಸ್ಟ್ಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಅನೇಕರ ಸಾಮಾಜಿಕ ಮಾಧ್ಯಮ ಬಳಕೆದಾರರ ಪೋಸ್ಕಗಳಿಗೂ ನಿರ್ಬಂಧ ಹೇರಲಾಗಿದೆ. ನಟಿ ಊರ್ಮಿಳಾ ಮಾತೋಂಡ್ಕರ್ ಮತ್ತು ಪತ್ರಕರ್ತರಾದ ರೋಹಿಣಿ ಸಿಂಗ್ ಮತ್ತು ಗಾರ್ಗಿ ರಾವತ್ ಸೇರಿದಂತೆ ಅನೇಕರು ತಮ್ಮ ಪೋಸ್ಟ್ನಲ್ಲಿ ಅವಹೇಳನಕಾರಿ ಭಾಷೆಯನ್ನು ಬಳಸದಿದ್ದರೂ ಅಥವಾ ತಪ್ಪು ಮಾಹಿತಿಯನ್ನು ಹರಡದಿದ್ದರೂ ಅವರ ಪೋಸ್ಟ್ಗಳನ್ನು ನಿರ್ಬಂಧಿಸಲಾಗಿದೆ ಹಾಗಾಗಿ ಅವರೂ ಕೂಡ ಏಕೆ ನಿರ್ಬಂಧಿಸಲಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.
Hello @X @TwitterIndia May I kindly know why exactly my tweet has been upheld? Neither the language nor the thought behind it is derogatory towards anyone. I’m not spreading any fake news like most others. So is it plain pressure from the establishment? pic.twitter.com/f3Kv4hZhXp
— Urmila Matondkar (@UrmilaMatondkar) August 26, 2023
ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರಿನಾಟೆ ಅವರು, ”ಮಗುವಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋವನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಶುಕ್ರವಾರ ಟ್ವಿಟರ್ಗೆ ತುರ್ತು ಆದೇಶ ಹೊರಡಿಸಿದೆ. ಶನಿವಾರ ಬೆಳಿಗ್ಗೆ, ಪ್ರಕರಣದ ಕುರಿತು ಲಿಂಕ್ಗಳು ಮತ್ತು ಹ್ಯಾಶ್ಟ್ಯಾಗ್ಗಳನ್ನು ನಿರ್ಬಂಧಿಸಲು ಸರ್ಕಾರ ಹೆಚ್ಚುವರಿ ಆದೇಶಗಳನ್ನು ಹೊರಡಿಸಿದೆ” ಎಂದು ಅವರು ಹೇಳಿದ್ದಾರೆ.
”ಜಾಲವನ್ನು ಮುಚ್ಚುವುದರಿಂದ ಪರಿಹಾರ ಸಿಕ್ಕಲ್ಲ” – ಒಬ್ಬ ಶಿಕ್ಷಕನು ಎಷ್ಟು ನೀಚ ಮತ್ತು ಧರ್ಮಾಂಧತೆಯಿಂದ ತುಂಬಿದ್ದಾನೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಡಿಕೊಳ್ಳಬೇಕು. ಆ ಶಿಕ್ಷಕಿಯು ಧರ್ಮದ ಕಾರಣಕ್ಕಾಗಿ ಆ ಹುಡುಗನನ್ನು ಪ್ರತ್ಯೇಕಿಸುತ್ತಾಳೆ ಮತ್ತು ಅವನ ಸಹಪಾಠಿಗಳಂದ ಅವನಿಗೆ ಕಪಾಳಮೋಕ್ಷ ಮಾಡುತ್ತಾಳೆ” ಎಂದು ಶ್ರೀನೇಟ್ ಹೇಳಿದ್ದಾರೆ.
ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ ಯುಪಿ ಶಿಕ್ಷಕಿ ವಿರುದ್ಧ FIR ದಾಖಲು
Our humble request To National child Right commission to take up this issue very seriously and see that such things should not take place in a anywhere parts of our country. Really a great shame to the teaching community. Allready we r facing community disharmony in our country, these incidents may lead to some more disaster in the country.