Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯ ಕ್ರಮ ಖಂಡಿಸಿದ ಟ್ವೀಟ್‌ಗಳಿಗೆ ನಿರ್ಬಂಧ

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯ ಕ್ರಮ ಖಂಡಿಸಿದ ಟ್ವೀಟ್‌ಗಳಿಗೆ ನಿರ್ಬಂಧ

- Advertisement -
- Advertisement -

ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದೆ. ಈ ಘಟನೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದು, ಹಲವಾರು ಜನರು ಘಟನೆ ವಿರೋಧಿಸಿ ಎಕ್ಸಾನಲ್ಲಿ ಮಾಡಲಾದ ಟ್ವೀಟ್‌ಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ ಎಂದು ಹಲವು ದೂರಿದ್ದಾರೆ.

ಈ ಘಟನೆ ಗುರುವಾರ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ನಡೆದಿದೆ ಆದರೆ ಘಟನೆಯ ವಿಡಿಯೋ ಶುಕ್ರವಾರ ವೈರಲ್ ಆಗಿದೆ. ವಿಡಿಯೋದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.

ಘಟನೆಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಯಿತು. ಅನೇಕ ಜನರು ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನೂ ಕೆಲವರು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿರುವ ಅನೇಕ ಬಳಕೆದಾರರು ತಮ್ಮ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಅದು ಸೈಟ್‌ನಲ್ಲಿ ಇನ್ನು ಮುಂದೆ ಗೋಚರಿಸುವುದಿಲ್ಲ. ಭಾರತದಲ್ಲಿ ಈ ಪೋಸ್ಟ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಲಾಗಿದೆ.

ಶಾದಾಬ್ ಖಾನ್ ಅವರು ಮೊದಲು ಘಟನೆಯ ಬಗ್ಗೆ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಆದರೆ ಅವರ ಪೋಸ್ಟ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಅನೇಕರ ಸಾಮಾಜಿಕ ಮಾಧ್ಯಮ ಬಳಕೆದಾರರ ಪೋಸ್ಕಗಳಿಗೂ ನಿರ್ಬಂಧ ಹೇರಲಾಗಿದೆ. ನಟಿ ಊರ್ಮಿಳಾ ಮಾತೋಂಡ್ಕರ್ ಮತ್ತು ಪತ್ರಕರ್ತರಾದ ರೋಹಿಣಿ ಸಿಂಗ್ ಮತ್ತು ಗಾರ್ಗಿ ರಾವತ್ ಸೇರಿದಂತೆ ಅನೇಕರು ತಮ್ಮ ಪೋಸ್ಟ್‌ನಲ್ಲಿ ಅವಹೇಳನಕಾರಿ ಭಾಷೆಯನ್ನು ಬಳಸದಿದ್ದರೂ ಅಥವಾ ತಪ್ಪು ಮಾಹಿತಿಯನ್ನು ಹರಡದಿದ್ದರೂ ಅವರ ಪೋಸ್ಟ್‌ಗಳನ್ನು ನಿರ್ಬಂಧಿಸಲಾಗಿದೆ ಹಾಗಾಗಿ ಅವರೂ ಕೂಡ ಏಕೆ ನಿರ್ಬಂಧಿಸಲಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರಿನಾಟೆ ಅವರು, ”ಮಗುವಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋವನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಶುಕ್ರವಾರ ಟ್ವಿಟರ್‌ಗೆ ತುರ್ತು ಆದೇಶ ಹೊರಡಿಸಿದೆ. ಶನಿವಾರ ಬೆಳಿಗ್ಗೆ, ಪ್ರಕರಣದ ಕುರಿತು ಲಿಂಕ್‌ಗಳು ಮತ್ತು ಹ್ಯಾಶ್‌ಟ್ಯಾಗ್‌ಗಳನ್ನು ನಿರ್ಬಂಧಿಸಲು ಸರ್ಕಾರ ಹೆಚ್ಚುವರಿ ಆದೇಶಗಳನ್ನು ಹೊರಡಿಸಿದೆ” ಎಂದು ಅವರು ಹೇಳಿದ್ದಾರೆ.

”ಜಾಲವನ್ನು ಮುಚ್ಚುವುದರಿಂದ ಪರಿಹಾರ ಸಿಕ್ಕಲ್ಲ” – ಒಬ್ಬ ಶಿಕ್ಷಕನು ಎಷ್ಟು ನೀಚ ಮತ್ತು ಧರ್ಮಾಂಧತೆಯಿಂದ ತುಂಬಿದ್ದಾನೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಡಿಕೊಳ್ಳಬೇಕು. ಆ ಶಿಕ್ಷಕಿಯು ಧರ್ಮದ ಕಾರಣಕ್ಕಾಗಿ ಆ ಹುಡುಗನನ್ನು ಪ್ರತ್ಯೇಕಿಸುತ್ತಾಳೆ ಮತ್ತು ಅವನ ಸಹಪಾಠಿಗಳಂದ ಅವನಿಗೆ ಕಪಾಳಮೋಕ್ಷ ಮಾಡುತ್ತಾಳೆ” ಎಂದು ಶ್ರೀನೇಟ್ ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ ಯುಪಿ ಶಿಕ್ಷಕಿ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Our humble request To National child Right commission to take up this issue very seriously and see that such things should not take place in a anywhere parts of our country. Really a great shame to the teaching community. Allready we r facing community disharmony in our country, these incidents may lead to some more disaster in the country.

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...