Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯ ಕ್ರಮ ಖಂಡಿಸಿದ ಟ್ವೀಟ್‌ಗಳಿಗೆ ನಿರ್ಬಂಧ

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯ ಕ್ರಮ ಖಂಡಿಸಿದ ಟ್ವೀಟ್‌ಗಳಿಗೆ ನಿರ್ಬಂಧ

- Advertisement -
- Advertisement -

ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದೆ. ಈ ಘಟನೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದು, ಹಲವಾರು ಜನರು ಘಟನೆ ವಿರೋಧಿಸಿ ಎಕ್ಸಾನಲ್ಲಿ ಮಾಡಲಾದ ಟ್ವೀಟ್‌ಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ ಎಂದು ಹಲವು ದೂರಿದ್ದಾರೆ.

ಈ ಘಟನೆ ಗುರುವಾರ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ನಡೆದಿದೆ ಆದರೆ ಘಟನೆಯ ವಿಡಿಯೋ ಶುಕ್ರವಾರ ವೈರಲ್ ಆಗಿದೆ. ವಿಡಿಯೋದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.

ಘಟನೆಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಯಿತು. ಅನೇಕ ಜನರು ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನೂ ಕೆಲವರು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿರುವ ಅನೇಕ ಬಳಕೆದಾರರು ತಮ್ಮ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಅದು ಸೈಟ್‌ನಲ್ಲಿ ಇನ್ನು ಮುಂದೆ ಗೋಚರಿಸುವುದಿಲ್ಲ. ಭಾರತದಲ್ಲಿ ಈ ಪೋಸ್ಟ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಲಾಗಿದೆ.

ಶಾದಾಬ್ ಖಾನ್ ಅವರು ಮೊದಲು ಘಟನೆಯ ಬಗ್ಗೆ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಆದರೆ ಅವರ ಪೋಸ್ಟ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಅನೇಕರ ಸಾಮಾಜಿಕ ಮಾಧ್ಯಮ ಬಳಕೆದಾರರ ಪೋಸ್ಕಗಳಿಗೂ ನಿರ್ಬಂಧ ಹೇರಲಾಗಿದೆ. ನಟಿ ಊರ್ಮಿಳಾ ಮಾತೋಂಡ್ಕರ್ ಮತ್ತು ಪತ್ರಕರ್ತರಾದ ರೋಹಿಣಿ ಸಿಂಗ್ ಮತ್ತು ಗಾರ್ಗಿ ರಾವತ್ ಸೇರಿದಂತೆ ಅನೇಕರು ತಮ್ಮ ಪೋಸ್ಟ್‌ನಲ್ಲಿ ಅವಹೇಳನಕಾರಿ ಭಾಷೆಯನ್ನು ಬಳಸದಿದ್ದರೂ ಅಥವಾ ತಪ್ಪು ಮಾಹಿತಿಯನ್ನು ಹರಡದಿದ್ದರೂ ಅವರ ಪೋಸ್ಟ್‌ಗಳನ್ನು ನಿರ್ಬಂಧಿಸಲಾಗಿದೆ ಹಾಗಾಗಿ ಅವರೂ ಕೂಡ ಏಕೆ ನಿರ್ಬಂಧಿಸಲಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರಿನಾಟೆ ಅವರು, ”ಮಗುವಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋವನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಶುಕ್ರವಾರ ಟ್ವಿಟರ್‌ಗೆ ತುರ್ತು ಆದೇಶ ಹೊರಡಿಸಿದೆ. ಶನಿವಾರ ಬೆಳಿಗ್ಗೆ, ಪ್ರಕರಣದ ಕುರಿತು ಲಿಂಕ್‌ಗಳು ಮತ್ತು ಹ್ಯಾಶ್‌ಟ್ಯಾಗ್‌ಗಳನ್ನು ನಿರ್ಬಂಧಿಸಲು ಸರ್ಕಾರ ಹೆಚ್ಚುವರಿ ಆದೇಶಗಳನ್ನು ಹೊರಡಿಸಿದೆ” ಎಂದು ಅವರು ಹೇಳಿದ್ದಾರೆ.

”ಜಾಲವನ್ನು ಮುಚ್ಚುವುದರಿಂದ ಪರಿಹಾರ ಸಿಕ್ಕಲ್ಲ” – ಒಬ್ಬ ಶಿಕ್ಷಕನು ಎಷ್ಟು ನೀಚ ಮತ್ತು ಧರ್ಮಾಂಧತೆಯಿಂದ ತುಂಬಿದ್ದಾನೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಡಿಕೊಳ್ಳಬೇಕು. ಆ ಶಿಕ್ಷಕಿಯು ಧರ್ಮದ ಕಾರಣಕ್ಕಾಗಿ ಆ ಹುಡುಗನನ್ನು ಪ್ರತ್ಯೇಕಿಸುತ್ತಾಳೆ ಮತ್ತು ಅವನ ಸಹಪಾಠಿಗಳಂದ ಅವನಿಗೆ ಕಪಾಳಮೋಕ್ಷ ಮಾಡುತ್ತಾಳೆ” ಎಂದು ಶ್ರೀನೇಟ್ ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ ಯುಪಿ ಶಿಕ್ಷಕಿ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Our humble request To National child Right commission to take up this issue very seriously and see that such things should not take place in a anywhere parts of our country. Really a great shame to the teaching community. Allready we r facing community disharmony in our country, these incidents may lead to some more disaster in the country.

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...