Homeದಲಿತ್ ಫೈಲ್ಸ್ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

- Advertisement -
- Advertisement -

ದಲಿತ ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ನಾಲ್ಕು ಪ್ರಮುಖ ಘಟನೆಗಳು ವರದಿಯಾಗಿವೆ. ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ವರದಿಯಾಗಿರುವ ನಾಲ್ಕು ಪ್ರಕರಣಗಳ ವಿವರ ಇಲ್ಲಿದೆ.

ಪ್ರಕರಣ- 1

ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

ಲಖನೌ: ಬಾರಾಬಂಕಿಯ ಟಿಕೈಟ್‌ನಗರದ ಇಚೋಲಿ ಗ್ರಾಮದಲ್ಲಿ 2ನೇ ತರಗತಿಯ ದಲಿತ ವಿದ್ಯಾರ್ಥಿನಿಯ ಮೇಲೆ ಬಿಸಿಯೂಟವನ್ನು ಶಾಲೆಯ ಪ್ರಾಂಶುಪಾಲ ಎಸೆದಿರುವ ಘಟನೆ ನಡೆದಿದೆ.

ಮಗುವಿನ ಮಣಿಕಟ್ಟು ಮತ್ತು ಕೈಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂಬ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಬಾರಾಬಂಕಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದರ್ಶ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಕಲಚೇತನ ಬಾಲಕಿ ಈ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದ್ದು, ನಂತರ ಜಿಲ್ಲಾಧಿಕಾರಿಯವರು ಬಾರಾಬಂಕಿಯ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂತೋಷ್ ಪಾಂಡೆ ಅವರಿಗೆ ಸೂಚನೆ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಬಾರಾಬಂಕಿಯ ಹೆಚ್ಚುವರಿ ಎಸ್ಪಿ ಪೂರ್ಣೇಂದು ಸಿಂಗ್ ಪ್ರತಿಕ್ರಿಯಿಸಿದ್ದು, ಬಿಎಸ್ಎ ಸಿದ್ಧಪಡಿಸಿದ ವರದಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯನಿರ್ವಹಿಸುತ್ತಾರೆ ಎಂದಿದ್ದಾರೆ.

ಆಗಸ್ಟ್ 29 ರಂದು ಈ ಘಟನೆ ನಡೆದಿದೆ ಎಂದು ತನಿಖೆ ನಡೆಸುತ್ತಿರುವ ಬಿಎಸ್‌ಎ ಸಂತೋಷ್ ಪಾಂಡೆ ತಿಳಿಸಿದ್ದಾರೆ.

“ನಾವು ಊಟದ ಸಮಯದಲ್ಲಿದ್ದ 800 ವಿದ್ಯಾರ್ಥಿಗಳ ಹೇಳಿಕೆಗಳನ್ನು ತೆಗೆದುಕೊಂಡಿದ್ದೇವೆ. ಅದರ ವಿವರವಾದ ವರದಿಯನ್ನು ಮ್ಯಾಜಿಸ್ಟ್ರೇಟ್‌ಗೆ ಹಸ್ತಾಂತರಿಸಲಾಗುವುದು” ಎಂದು ಪಾಂಡೆ ಹೇಳಿದರು.

ಸೆಪ್ಟೆಂಬರ್ 3 ರಂದು ಮಹಿಳೆಯೊಬ್ಬರು ದೂರು ನೀಡಿದ್ದು, “ಮಧ್ಯಾಹ್ನದ ಊಟವನ್ನು ಬಡಿಸುವಾಗ ಸರ್ಕಾರಿ ಶಾಲೆಯ ಪ್ರಾಂಶುಪಾಲರು ನನ್ನ ಮಗಳ ಕೈಗಳನ್ನು ಸುಟ್ಟುಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

***

ಪ್ರಕರಣ- 2

ರಾಜಸ್ಥಾನ: ದಲಿತ ಬಾಲಕನ ಶವ ಗಣಿಗಾರಿಕೆಯ ಹೊಂಡದಲ್ಲಿ ಪತ್ತೆ

17 ವರ್ಷದ ದಲಿತ ಬಾಲಕ ನಾಪತ್ತೆಯಾದ ಒಂದು ದಿನದ ನಂತರ ಶವವಾಗಿ ಸಿಕ್ಕಿದ್ದಾನೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಮಳೆ ನೀರಿನಿಂದ ತುಂಬಿದ ಗಣಿಗಾರಿಕೆಯ ಹೊಂಡದಲ್ಲಿ ಆತನ ಶವ ಸೆಪ್ಟೆಂಬರ್ 9ರಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವವಾಗಿ ಪತ್ತೆಯಾಗಿರುವ ಬಾಲಕನ ಸಹಪಾಠಿಯ ತಂದೆ ಶಾಲಾ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ತನ್ನ ಮಗಳಿಗೆ ಈ ಹುಡುಗ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಶಾಲೆಗೆ ದೂರು ನೀಡಿದ ಬಳಿಕ ಈ ಘಟನೆಯಾಗಿದೆ.

ಶುಕ್ರವಾರ ಶವ ಪತ್ತೆಯಾದ ನಂತರ, ಕುಟುಂಬ ಸದಸ್ಯರು ಆತನ ಶವವನ್ನು ಶಾಲೆಯ ಹೊರಗೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ಬಾಲಕನಿಗೆ ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಸರ್ಕಲ್ ಆಫೀಸರ್, ಬೀವರ್ ಸುಮಿತ್ ಮೆಹ್ರೇದಾ ತಿಳಿಸಿದ್ದಾರೆ.

ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಬಾಲಕನ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

***

ಪ್ರಕರಣ- 3

ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಮಧ್ಯಪ್ರದೇಶದ ಸಾಗರ್‌ನಲ್ಲಿ ಜೈನ ದೇವಾಲಯದ ಪಂಡಿತರೊಬ್ಬರು 11 ವರ್ಷದ ದಲಿತ ಬಾಲಕನನ್ನು ಥಳಿಸಿರುವ ಘಟನೆ ನಡೆದಿದೆ.

ಟ್ವಿಟ್ಟರ್ ಬಳಕೆದಾರರು ಈ ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ದಲಿತ ಬಾಲಕ ಸಾಗರದ ಜೈನ ದೇವಾಲಯದ ಹೊರಗೆ ನಿಂತಿದ್ದಾಗ ಕಳ್ಳತನದ ಆರೋಪ ಹೊರಿಸಲಾಗಿದೆ. ಪಂಡಿತ್ ರಾಜೇಶ್ ಜೈನ್ ಬಾಲಕನನ್ನು ಥಳಿಸಿ, ನಂತರ ಕಟ್ಟಿಹಾಕಿದ್ದಾರೆ. ಪೂಜೆಯ ತಟ್ಟೆಯಲ್ಲಿದ್ದ ಬಾದಾಮಿಯನ್ನು ತೆಗೆದು ಜೇಬಿನಲ್ಲಿ ಇಟ್ಟುಕೊಂಡಿದ್ದಾಗಿ ರಾಜೇಶ್ ಜೈನ್‌ ಆರೋಪಿಸಿದ್ದಾರೆ.

ನಗರದ ಮೋತಿ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

***

ಪ್ರಕರಣ- 4

ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಗೆ ಕಿರುಕುಳ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಮಧ್ಯಪ್ರದೇಶದ ಛತ್ತರ್‌ಪುರ ನಗರದಲ್ಲಿ 13 ವರ್ಷದ ದಲಿತ ಬಾಲಕಿಯನ್ನು ಇಡೀ ರಾತ್ರಿ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ಥಳಿಸಿದ ಘಟನೆ ನಡೆದಿದೆ. ಆಗಸ್ಟ್ 30 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಬಾಬು ಖಾನ್ ಎಂಬಾತನನ್ನು ಭಾರತೀಯ ದಂಡ ಸಂಹಿತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸೆಪ್ಟೆಂಬರ್ 3 ರಂದು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Dalit Teen Went To File Rape Case, Allegedly Detained Overnight, Beaten

ಅತ್ಯಾಚಾರ ಸಂತ್ರಸ್ತೆಯನ್ನು ಪೊಲೀಸ್ ಠಾಣೆಯಲ್ಲಿ ಇರಿಸಿದ್ದಕ್ಕಾಗಿ ನಗರ ಕೊತ್ವಾಲಿ ಪೊಲೀಸ್ ಠಾಣೆಯ ಗೃಹ ಅಧಿಕಾರಿ (ಎಸ್‌ಎಚ್‌ಒ) ಅನೂಪ್ ಯಾದವ್, ಸಬ್ ಇನ್‌ಸ್ಪೆಕ್ಟರ್ ಮೋಹಿನಿ ಶರ್ಮಾ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗುರುದತ್ ಶೇಷಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಛತ್ತರ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಾಲಕಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ (ಸಿಡಬ್ಲ್ಯುಸಿ) ದೂರು ಬಂದಿದ್ದು, ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಜಿಲ್ಲಾಧಿಕಾರಿ ಪ್ರತಾಪ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ.

ಬಾಲಕಿಯ ತಾಯಿಯ ಪ್ರಕಾರ, ಮಗಳು ಆಗಸ್ಟ್ 27 ರಂದು ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದಳು. ಆದರೆ ಹಿಂತಿರುಗಲಿಲ್ಲ. ಆದ್ದರಿಂದ ಬಾಲಕಿಯ ತಂದೆ ಮರುದಿನ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆಗಸ್ಟ್ 30 ರಂದು ಹಿಂತಿರುಗಿದ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಬಾಬು ಖಾನ್ ಎಂಬಾತ ಬಲವಂತವಾಗಿ ಬಾಲಕಿಯನ್ನು ಎಳೆದೊಯ್ದು, ಅಲ್ಲಿಯೇ ಬಂಧಿಸಿ ಮೂರು ದಿನಗಳ ಕಾಲ ಅತ್ಯಾಚಾರವೆಸಗಿರುವ ಸಂಗತಿ ಹೊರಬಿದ್ದಿದೆ.

“ನಾವು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋಗಿದ್ದೆವು. ಇಬ್ಬರು ಪೊಲೀಸರು ನನ್ನ ಮಗಳ ಹೇಳಿಕೆಯನ್ನು ಬದಲಾಯಿಸುವಂತೆ ಒತ್ತಡ ಹೇರಿದರು.ಜೊತೆಗೆ ನನ್ನ ಮಗಳನ್ನು ಥಳಿಸಿದರು. ಮತ್ತೊಬ್ಬ ಪೊಲೀಸ್ ಅಧಿಕಾರಿ ನನ್ನನ್ನು ಹೊರಗೆ ಕರೆದೊಯ್ದರು. ಒಳಗೆ ನನ್ನ ಮಗಳಿಗೆ ಒದ್ದು ಬೆಲ್ಟ್‌ಗಳಿಂದ ಹೊಡೆದರು” ಎಂದು ಸಂತ್ರಸ್ತ ಹೆಣ್ಣುಮಗಳ ತಾಯಿ ಆರೋಪಿಸಿದ್ದಾರೆ.

ಆಗಸ್ಟ್ 31ರಂದು ಮತ್ತೆ ಪೊಲೀಸ್ ಠಾಣೆಗೆ ತೆರಳಿ ಕೇಸು ದಾಖಲಿಸುವಂತೆ ಇನ್ಸ್‌ಪೆಕ್ಟರ್ ಯಾದವ್ ಅವರಲ್ಲಿ ಕೇಳಿದಾಗಲೂ ಯಾವುದೇ ಸ್ಪಂದನೆ ದೊರಯಲಿಲ್ಲ ಎಂದು ಅವರು ದೂರಿದ್ದಾರೆ.

ಅಂತಿಮವಾಗಿ, ಸೆಪ್ಟೆಂಬರ್ 1 ರ ಸಂಜೆ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ. ಆದರೆ ಅಪಹರಣದ ಆರೋಪವನ್ನು ಸೇರಿಸಿಲ್ಲ ಎನ್ನಲಾಗಿದೆ.

ಎಫ್‌ಐಆರ್‌ನಲ್ಲಿ ಬಾಲಕಿಯ ವಯಸ್ಸನ್ನು 17 ವರ್ಷ ಎಂದು ನಮೂದಿಸಲಾಗಿದ್ದು, ಅಪಹರಣದ ಆರೋಪವನ್ನು ಸೇರಿಸಿಲ್ಲ.

ಸಿಡಬ್ಲ್ಯೂಸಿ ಸದಸ್ಯ ಅಫ್ಸರ್ ಜಹಾನ್ ಮಾತನಾಡಿ, “ಪೊಲೀಸರು ಅಪರಾಧಿಯನ್ನು ರಕ್ಷಿಸಲು ಮತ್ತು ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ದೂರಿದ್ದಾರೆ.

ಮತ್ತೊಬ್ಬ ಸಿಡಬ್ಲ್ಯೂಸಿ ಸದಸ್ಯ ಸೌರಭ್ ಭಟ್ನಾಗರ್, “13ರ ಬದಲಿಗೆ 17 ವರ್ಷ ಎಂದು ಪೊಲೀಸರು ನಮೂದಿಸಿರುವ ಕುರಿತು ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸರಿಂದ ಸ್ಪಷ್ಟನೆ ಕೇಳಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...