Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿದ ಯುಪಿ ಶಿಕ್ಷಕಿ: ವಿಡಿಯೋ ವೈರಲ್

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿದ ಯುಪಿ ಶಿಕ್ಷಕಿ: ವಿಡಿಯೋ ವೈರಲ್

- Advertisement -
- Advertisement -

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಶಿಕ್ಷಕಿರೊಬ್ಬರು ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮನ್ಸೂರ್‌ಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್, ”ನಾವು ವೀಡಿಯೊವನ್ನು ನೋಡಿದ ನಂತರ ಆ ಮಗು ಮತ್ತು ಅವನ ಪೋಷಕರ ಹೇಳಿಕೆಗಳನ್ನು ದಾಖಲಿಸಿದ್ದೇವೆ. ಶಿಕ್ಷಕಿ ವಿರುದ್ಧ ಪ್ರಕರಣವನ್ನೂ ದಾಖಲಿಸುತ್ತೇವೆ” ಎಂದು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ ಕೂಡ ಪ್ರತಿಕ್ರಿಯಿಸಿದ್ದು, ”ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತಿದೆ” ಎಂದು ಸಂಸ್ಥೆಯ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಮಗು ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಶುವಿಹಾರದಲ್ಲಿ ಓದುತ್ತಿದೆ ಎಂದು ಆತನ ಪೋಷಕರು ತಿಳಿಸಿದ್ದಾರೆ. ಮಗುವಿನ ತಂದೆ ಹೆಸರು ಇರ್ಷಾದ್ ತ್ಯಾಗಿ, ಅವರು ವೃತ್ತಿಯಲ್ಲಿ ರೈತರಾಗಿದ್ದಾರೆ. ಇನ್ನು ಶಿಕ್ಷಕಿಯನ್ನು ತ್ರಿಪ್ತಾ ತ್ಯಾಗಿ ಎಂದು ಗುರುತಿಸಲಾಗಿದೆ.

ವೈರಲ್ ಆಗಿರುವ ವೀಡಿಯೊದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಹೊಡೆಯುವಂತೆ ಒತ್ತಾಯಿಸುವುದನ್ನು ನೋಡಬಹುದು.

ಈ ಬಗ್ಗೆ ಆ ಬಾಲಕನ ತಾಯಿ ರುಬೀನಾ ಮಾತನಾಡಿ, ”ನನ್ನ ಮಗ ನಿನ್ನೆ ಮನೆಗೆ ಬಂದಾಗ ಅಳುತ್ತಿದ್ದನು. ನಾವು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಹೋಮ್ ವರ್ಕ್ ಮಾಡದಿದ್ದಕ್ಕೆ ಟೀಚರ್ ಶಿಕ್ಷೆ ಕೊಟ್ಟಿರಬೇಕು ಎಂದುಕೊಂಡೆವು. ಆದರೆ ವೀಡಿಯೊವನ್ನು ನೋಡಿದಾಗ ನಮಗೆ ಆಘಾತವಾಯಿತು” ಎಂದು ಹೇಳಿದ್ದಾರೆ.

ಬಾಲಕನ ಸೋದರ ಸಂಬಂಧಿ ಮೊಹಮ್ಮದ್ ನದೀಮ್ (25) ಎನ್ನುವವರು ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಅವರು ಬೇರೆ ಯಾವುದೋ ಕೆಲಸಕ್ಕೆಂದು ಶಾಲೆಗೆ ಹೋಗಿದ್ದರು ಆ ವೇಳೆ ಈ ಘಟನೆ ನಡೆಯುತ್ತಿದ್ದಾಗ ವಿಡಿಯೋ ಚಿತ್ರಿಕರಿಸಿದ್ದಾರೆ ಎಂದು ಹೇಳಿದ್ದಾರೆ.

”ಅವನನ್ನು ಪ್ರತ್ಯೇಕವಾಗಿ ನಿಲ್ಲಿಸಲಾಗಿತ್ತು, ಶಿಕ್ಷಕರು ಆದೇಶಿಸಿದಂತೆ ಅವನ ಸಹಪಾಠಿಗಳು ಕಪಾಳಮೋಕ್ಷ ಮಾಡುವುದನ್ನು ನಾನು ನೋಡಿದೆ. ಆಗ ನಾನು ಯಾರ ಗಮನಕ್ಕೂ ಬಾರದಂತೆ ವಿಡಿಯೋ ಮಾಡಿದೆ. ಆ ಶಿಕ್ಷಕಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದರು” ಎಂದು ನದೀಮ್ ಹೇಳಿದ್ದಾರೆ.

ಹುಡುಗನ ತಂದೆ ಇರ್ಷಾದ್ ಮಾತನಾಡಿ, ”ಶಿಕ್ಷಕರು ನನ್ನ ಮಗನನ್ನು ಏಕೆ ಈ ರೀತಿ ನಡೆಸಿಕೊಂಡರು ಎಂದು ನಮಗೆ ತಿಳಿದಿಲ್ಲ. ಅವರು ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದು ದುಃಖಕರ ಸಂಗತಿ” ಎಂದು ಹೇಳಿದರು.

”ಸಮಾಜ ಧ್ರುವೀಕರಣಗೊಂಡಿದೆ, ಈ ಹಿಂದೂ-ಮುಸ್ಲಿಂ ವಿಷಯ ಶಾಲೆಗಳಿಗೂ ತಲುಪಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಶುಕ್ರವಾರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಮೂಲ ಶಿಕ್ಷಾ ಇಲಾಖೆಯ ಅಧಿಕಾರಿ ಶುಭಂ ಶುಕ್ಲಾ, ”ಶಿಕ್ಷಕಿ ಹಾಗೂ ಆ ಶಾಲೆಯ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Very much hearting being Teacher we believe as Gurudevobghava such incidents should not repeat 💐🙏 see all as human beings. Even animals don’t discriminate like this

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...