Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿದ ಯುಪಿ ಶಿಕ್ಷಕಿ: ವಿಡಿಯೋ ವೈರಲ್

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿದ ಯುಪಿ ಶಿಕ್ಷಕಿ: ವಿಡಿಯೋ ವೈರಲ್

- Advertisement -
- Advertisement -

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಶಿಕ್ಷಕಿರೊಬ್ಬರು ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮನ್ಸೂರ್‌ಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್, ”ನಾವು ವೀಡಿಯೊವನ್ನು ನೋಡಿದ ನಂತರ ಆ ಮಗು ಮತ್ತು ಅವನ ಪೋಷಕರ ಹೇಳಿಕೆಗಳನ್ನು ದಾಖಲಿಸಿದ್ದೇವೆ. ಶಿಕ್ಷಕಿ ವಿರುದ್ಧ ಪ್ರಕರಣವನ್ನೂ ದಾಖಲಿಸುತ್ತೇವೆ” ಎಂದು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ ಕೂಡ ಪ್ರತಿಕ್ರಿಯಿಸಿದ್ದು, ”ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತಿದೆ” ಎಂದು ಸಂಸ್ಥೆಯ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಮಗು ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಶುವಿಹಾರದಲ್ಲಿ ಓದುತ್ತಿದೆ ಎಂದು ಆತನ ಪೋಷಕರು ತಿಳಿಸಿದ್ದಾರೆ. ಮಗುವಿನ ತಂದೆ ಹೆಸರು ಇರ್ಷಾದ್ ತ್ಯಾಗಿ, ಅವರು ವೃತ್ತಿಯಲ್ಲಿ ರೈತರಾಗಿದ್ದಾರೆ. ಇನ್ನು ಶಿಕ್ಷಕಿಯನ್ನು ತ್ರಿಪ್ತಾ ತ್ಯಾಗಿ ಎಂದು ಗುರುತಿಸಲಾಗಿದೆ.

ವೈರಲ್ ಆಗಿರುವ ವೀಡಿಯೊದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಹೊಡೆಯುವಂತೆ ಒತ್ತಾಯಿಸುವುದನ್ನು ನೋಡಬಹುದು.

ಈ ಬಗ್ಗೆ ಆ ಬಾಲಕನ ತಾಯಿ ರುಬೀನಾ ಮಾತನಾಡಿ, ”ನನ್ನ ಮಗ ನಿನ್ನೆ ಮನೆಗೆ ಬಂದಾಗ ಅಳುತ್ತಿದ್ದನು. ನಾವು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಹೋಮ್ ವರ್ಕ್ ಮಾಡದಿದ್ದಕ್ಕೆ ಟೀಚರ್ ಶಿಕ್ಷೆ ಕೊಟ್ಟಿರಬೇಕು ಎಂದುಕೊಂಡೆವು. ಆದರೆ ವೀಡಿಯೊವನ್ನು ನೋಡಿದಾಗ ನಮಗೆ ಆಘಾತವಾಯಿತು” ಎಂದು ಹೇಳಿದ್ದಾರೆ.

ಬಾಲಕನ ಸೋದರ ಸಂಬಂಧಿ ಮೊಹಮ್ಮದ್ ನದೀಮ್ (25) ಎನ್ನುವವರು ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಅವರು ಬೇರೆ ಯಾವುದೋ ಕೆಲಸಕ್ಕೆಂದು ಶಾಲೆಗೆ ಹೋಗಿದ್ದರು ಆ ವೇಳೆ ಈ ಘಟನೆ ನಡೆಯುತ್ತಿದ್ದಾಗ ವಿಡಿಯೋ ಚಿತ್ರಿಕರಿಸಿದ್ದಾರೆ ಎಂದು ಹೇಳಿದ್ದಾರೆ.

”ಅವನನ್ನು ಪ್ರತ್ಯೇಕವಾಗಿ ನಿಲ್ಲಿಸಲಾಗಿತ್ತು, ಶಿಕ್ಷಕರು ಆದೇಶಿಸಿದಂತೆ ಅವನ ಸಹಪಾಠಿಗಳು ಕಪಾಳಮೋಕ್ಷ ಮಾಡುವುದನ್ನು ನಾನು ನೋಡಿದೆ. ಆಗ ನಾನು ಯಾರ ಗಮನಕ್ಕೂ ಬಾರದಂತೆ ವಿಡಿಯೋ ಮಾಡಿದೆ. ಆ ಶಿಕ್ಷಕಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದರು” ಎಂದು ನದೀಮ್ ಹೇಳಿದ್ದಾರೆ.

ಹುಡುಗನ ತಂದೆ ಇರ್ಷಾದ್ ಮಾತನಾಡಿ, ”ಶಿಕ್ಷಕರು ನನ್ನ ಮಗನನ್ನು ಏಕೆ ಈ ರೀತಿ ನಡೆಸಿಕೊಂಡರು ಎಂದು ನಮಗೆ ತಿಳಿದಿಲ್ಲ. ಅವರು ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದು ದುಃಖಕರ ಸಂಗತಿ” ಎಂದು ಹೇಳಿದರು.

”ಸಮಾಜ ಧ್ರುವೀಕರಣಗೊಂಡಿದೆ, ಈ ಹಿಂದೂ-ಮುಸ್ಲಿಂ ವಿಷಯ ಶಾಲೆಗಳಿಗೂ ತಲುಪಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಶುಕ್ರವಾರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಮೂಲ ಶಿಕ್ಷಾ ಇಲಾಖೆಯ ಅಧಿಕಾರಿ ಶುಭಂ ಶುಕ್ಲಾ, ”ಶಿಕ್ಷಕಿ ಹಾಗೂ ಆ ಶಾಲೆಯ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Very much hearting being Teacher we believe as Gurudevobghava such incidents should not repeat 💐🙏 see all as human beings. Even animals don’t discriminate like this

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...