Homeಮುಖಪುಟಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

ಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

ಮುಸ್ಲಿಂ ಸಮುದಾಯದ ಯುವಕ ಒಂದು ವಾರದಿಂದ ಜೈಲಿನಲ್ಲಿದ್ದಾನೆ. ಆದರೆ, ಮತಾಂತರ ಮಾಡಲು ಯತ್ನಸಿರುವ ಆರೋಪವನ್ನು ಬಾಲಕಿ ಮತ್ತು ಆಕೆಯ ತಾಯಿ ಇಬ್ಬರೂ ನಿರಾಕರಿಸಿದ್ದಾರೆ.

- Advertisement -
- Advertisement -

ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಹದಿ ಹರೆಯದ ಯುವಕ ಮತ್ತು ಬಾಲಕಿಯ ಮೇಲೆ ದೌರ್ಜನ್ಯ ನಡೆಸಿ, ಯುವಕನನ್ನು ಹೊಸ ವಿವಾದಾತ್ಮಕ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.

16 ವರ್ಷದ ಹಿಂದೂ ಬಾಲಕಿಯನ್ನು ಬಲವಂತವಾಗಿ ಮತಾಂತರಗೊಳಿಸಲು ಯತ್ನಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯದ ಯುವಕನೊರ್ವ ಒಂದು ವಾರದಿಂದ ಜೈಲಿನಲ್ಲಿದ್ದಾನೆ. ಆದರೆ ಬಾಲಕಿಯನ್ನು ಮತಾಂತರ ಮಾಡಲು ಯತ್ನಿಸಿರುವ ಆರೋಪವನ್ನು ಬಾಲಕಿ ಮತ್ತು ಆಕೆಯ ತಾಯಿ ಇಬ್ಬರೂ ನಿರಾಕರಿಸಿದ್ದಾರೆ.

ಬಾಲಕಿಯ ತಂದೆ ನೀಡಿರುವ ಸುಳ್ಳು ದೂರಿನ ಆಧಾರದಲ್ಲಿ ಯುವಕನನ್ನು ಡಿಸೆಂಬರ್ 15 ರಂದು ಪೊಲೀಸರು ಬಂಧಿಸಿದ್ದಾರೆ. ಯುವಕನಿಗೆ ಕಿರುಕುಳ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಕಾನೂನು ಜಾರಿಗೆ ಬಂದಾಗಿನಿಂದ ಹಲವು ಅಮಾಯಕರನ್ನು ಜೈಲಿಗೆ ತಳ್ಳಲಾಗುತ್ತಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

ಘಟನೆ ಕುರಿತು ಸತ್ಯಾಸತ್ಯತೆ ತಿಳಿಯಲು ಬಾಲಕಿಯ ಹಳ್ಳಿಗೆ ಹೋದ ಪತ್ರಕರ್ತರಿಗೆ ಬಾಲಕಿ ಮತ್ತು ಬಾಲಕಿಯ ತಾಯಿ ಇದು ಲವ್‌ ಜಿಹಾದ್ ಪ್ರಕರಣ ಅಲ್ಲ ಎಂದು ತಿಳಿಸಿದ್ದಾರೆ. ಜೊತೆಗೆ ನಮ್ಮ ಮಗಳನ್ನು ಮನೆಗೆ ಬಿಡಲು ಆ ಯುವಕ ಜೊತೆಯಲ್ಲಿ ಬರುತ್ತಿದ್ದ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

“ರಾತ್ರಿ 11.30 ರ ಸುಮಾರಿಗೆ ದಾರಿಯಲ್ಲಿ ಕೆಲವರು ನಮ್ಮನ್ನು ಹಿಡಿದು ಥಳಿಸಿದರು. ಅವರು ಹಿಡಿದುಕೊಂಡು ಹೋಗಿರುವ ಆ ಹುಡುಗ ಯಾರು ಎಂಬುದೂ ನನಗೆ ತಿಳಿದಿರಲಿಲ್ಲ. ಅವರು ನನ್ನನ್ನು ಮತಾಂತರಗೊಳಿಸಲು ಯತ್ನಿಸಿದ್ದು ಸುಳ್ಳು” ಎಂದು ಬಾಲಕಿ ಎನ್‌ಡಿಟಿವಿಗೆ ನೀಡಿದ ಸಂಕ್ಷಿಪ್ತ ಸಂದರ್ಶನದಲ್ಲಿ ಹೇಳಿದ್ದಾರೆ.

ಇತ್ತ ಬಾಲಕಿಯ ತಾಯಿ ಕೂಡ ಈ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದು, “ಆಕೆ ಹುಟ್ಟುಹಬ್ಬದ ಕಾರ್ಯಕ್ರಮದಿಂದ ಹಿಂತಿರುಗುತಿದ್ದಳು. ಆ ಹುಡುಗ ಅವಳನ್ನು ಮನೆಗೆ ಬಿಡುವುದಾಗಿ ಹೇಳಿ, ಕರೆದುಕೊಂಡು ಬರುತ್ತಿದ್ದನು. ಆ ಸಂದರ್ಭದಲ್ಲಿ ಗ್ರಾಮದ ಯುವಕರ ಗುಂಪು ಅವರನ್ನು ಹಿಡಿದಿದ್ದಾರೆ. ಆಕೆ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಹೋಗಿದ್ದೆ ಎಂದು ಹೇಳಿದರೂ ಯಾರು ಆಕೆಯ ಮಾತನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ಬಾಲಕಿಯ ಗ್ರಾಮಸ್ಥರು ಕೂಡ ಬಾಲಕಿ ಮತ್ತು ಆಕೆಯ ತಾಯಿಯ ಮಾತನ್ನೇ ಬೆಂಬಲಿಸಿದ್ದಾರೆ. “ಪೊಲೀಸರು ಪ್ರಕರಣವನ್ನು ತಮಗೆ ಬೇಕಾದಂತೆ ಬದಲಾಯಿಸಿಕೊಂಡಿರಬೇಕು. ಇಲ್ಲಿ ಯಾವುದೇ ಲವ್ ಜಿಹಾದ್ ಪ್ರಕರಣ ನಡೆದಿಲ್ಲ. ಬಾಲಕಿ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದಳು ಎಂದು ಗ್ರಾಮದ ಮುಖಂಡ ವಿನೋದ್ ಸೈನಿ ಹೇಳಿದ್ದಾರೆ.

ಯುವಕನ ತಾಯಿ ಕೂಡ ’ನನ್ನ ಮಗ ಹುಟ್ಟು ಹಬ್ಬಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿದ್ದ, ಮರುದಿನ ಬೆಳಗ್ಗೆ ಆತ ಪೊಲೀಸ್ ಠಾಣೆಯಲ್ಲಿದ್ದ. ಆತನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ’ ಎಂದು ಹೇಳಿದ್ದಾರೆ.

ಆದರೆ ಪೊಲೀಸರು ಮಾತ್ರ ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ. “ಕೆಲವು ದಿನಗಳಿಂದ ಬಾಲಕಿ ಕಾಣೆಯಾಗಿದ್ದರು. ಆ ಹುಡುಗನು ಸೋನು ಎಂಬ ಹಿಂದೂ ಹೆಸರಿನಿಂದ ಆಕೆಯನ್ನು ಪರಿಚಯ ಮಾಡಿಕೊಂಡು, ಮತಾಂತರಗೊಳಿಸುವ ಉದ್ದೇಶದಿಂದ ಓಡಿಹೋಗುವಂತೆ ಆಕೆಯನ್ನು ಒತ್ತಾಯಿಸಿದ್ದನು. ಆದರೆ, ಆಕೆ ತಪ್ಪಿಸಿಕೊಂಡು ಬಂದಿದ್ದಾಳೆ. ಆರೋಪಿಯನ್ನು ಬಂಧಿಸಲಾಗಿದೆ” ಎಂದು ಬಿಜ್ನೋರ್‌ನ ಹಿರಿಯ ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದ IFFCO ಸ್ಥಾವರದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, 15 ಮಂದಿ ಅಸ್ವಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...