Homeಮುಖಪುಟಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

ಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

ಮುಸ್ಲಿಂ ಸಮುದಾಯದ ಯುವಕ ಒಂದು ವಾರದಿಂದ ಜೈಲಿನಲ್ಲಿದ್ದಾನೆ. ಆದರೆ, ಮತಾಂತರ ಮಾಡಲು ಯತ್ನಸಿರುವ ಆರೋಪವನ್ನು ಬಾಲಕಿ ಮತ್ತು ಆಕೆಯ ತಾಯಿ ಇಬ್ಬರೂ ನಿರಾಕರಿಸಿದ್ದಾರೆ.

- Advertisement -
- Advertisement -

ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಹದಿ ಹರೆಯದ ಯುವಕ ಮತ್ತು ಬಾಲಕಿಯ ಮೇಲೆ ದೌರ್ಜನ್ಯ ನಡೆಸಿ, ಯುವಕನನ್ನು ಹೊಸ ವಿವಾದಾತ್ಮಕ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.

16 ವರ್ಷದ ಹಿಂದೂ ಬಾಲಕಿಯನ್ನು ಬಲವಂತವಾಗಿ ಮತಾಂತರಗೊಳಿಸಲು ಯತ್ನಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯದ ಯುವಕನೊರ್ವ ಒಂದು ವಾರದಿಂದ ಜೈಲಿನಲ್ಲಿದ್ದಾನೆ. ಆದರೆ ಬಾಲಕಿಯನ್ನು ಮತಾಂತರ ಮಾಡಲು ಯತ್ನಿಸಿರುವ ಆರೋಪವನ್ನು ಬಾಲಕಿ ಮತ್ತು ಆಕೆಯ ತಾಯಿ ಇಬ್ಬರೂ ನಿರಾಕರಿಸಿದ್ದಾರೆ.

ಬಾಲಕಿಯ ತಂದೆ ನೀಡಿರುವ ಸುಳ್ಳು ದೂರಿನ ಆಧಾರದಲ್ಲಿ ಯುವಕನನ್ನು ಡಿಸೆಂಬರ್ 15 ರಂದು ಪೊಲೀಸರು ಬಂಧಿಸಿದ್ದಾರೆ. ಯುವಕನಿಗೆ ಕಿರುಕುಳ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಕಾನೂನು ಜಾರಿಗೆ ಬಂದಾಗಿನಿಂದ ಹಲವು ಅಮಾಯಕರನ್ನು ಜೈಲಿಗೆ ತಳ್ಳಲಾಗುತ್ತಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

ಘಟನೆ ಕುರಿತು ಸತ್ಯಾಸತ್ಯತೆ ತಿಳಿಯಲು ಬಾಲಕಿಯ ಹಳ್ಳಿಗೆ ಹೋದ ಪತ್ರಕರ್ತರಿಗೆ ಬಾಲಕಿ ಮತ್ತು ಬಾಲಕಿಯ ತಾಯಿ ಇದು ಲವ್‌ ಜಿಹಾದ್ ಪ್ರಕರಣ ಅಲ್ಲ ಎಂದು ತಿಳಿಸಿದ್ದಾರೆ. ಜೊತೆಗೆ ನಮ್ಮ ಮಗಳನ್ನು ಮನೆಗೆ ಬಿಡಲು ಆ ಯುವಕ ಜೊತೆಯಲ್ಲಿ ಬರುತ್ತಿದ್ದ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

“ರಾತ್ರಿ 11.30 ರ ಸುಮಾರಿಗೆ ದಾರಿಯಲ್ಲಿ ಕೆಲವರು ನಮ್ಮನ್ನು ಹಿಡಿದು ಥಳಿಸಿದರು. ಅವರು ಹಿಡಿದುಕೊಂಡು ಹೋಗಿರುವ ಆ ಹುಡುಗ ಯಾರು ಎಂಬುದೂ ನನಗೆ ತಿಳಿದಿರಲಿಲ್ಲ. ಅವರು ನನ್ನನ್ನು ಮತಾಂತರಗೊಳಿಸಲು ಯತ್ನಿಸಿದ್ದು ಸುಳ್ಳು” ಎಂದು ಬಾಲಕಿ ಎನ್‌ಡಿಟಿವಿಗೆ ನೀಡಿದ ಸಂಕ್ಷಿಪ್ತ ಸಂದರ್ಶನದಲ್ಲಿ ಹೇಳಿದ್ದಾರೆ.

ಇತ್ತ ಬಾಲಕಿಯ ತಾಯಿ ಕೂಡ ಈ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದು, “ಆಕೆ ಹುಟ್ಟುಹಬ್ಬದ ಕಾರ್ಯಕ್ರಮದಿಂದ ಹಿಂತಿರುಗುತಿದ್ದಳು. ಆ ಹುಡುಗ ಅವಳನ್ನು ಮನೆಗೆ ಬಿಡುವುದಾಗಿ ಹೇಳಿ, ಕರೆದುಕೊಂಡು ಬರುತ್ತಿದ್ದನು. ಆ ಸಂದರ್ಭದಲ್ಲಿ ಗ್ರಾಮದ ಯುವಕರ ಗುಂಪು ಅವರನ್ನು ಹಿಡಿದಿದ್ದಾರೆ. ಆಕೆ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಹೋಗಿದ್ದೆ ಎಂದು ಹೇಳಿದರೂ ಯಾರು ಆಕೆಯ ಮಾತನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ಬಾಲಕಿಯ ಗ್ರಾಮಸ್ಥರು ಕೂಡ ಬಾಲಕಿ ಮತ್ತು ಆಕೆಯ ತಾಯಿಯ ಮಾತನ್ನೇ ಬೆಂಬಲಿಸಿದ್ದಾರೆ. “ಪೊಲೀಸರು ಪ್ರಕರಣವನ್ನು ತಮಗೆ ಬೇಕಾದಂತೆ ಬದಲಾಯಿಸಿಕೊಂಡಿರಬೇಕು. ಇಲ್ಲಿ ಯಾವುದೇ ಲವ್ ಜಿಹಾದ್ ಪ್ರಕರಣ ನಡೆದಿಲ್ಲ. ಬಾಲಕಿ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದಳು ಎಂದು ಗ್ರಾಮದ ಮುಖಂಡ ವಿನೋದ್ ಸೈನಿ ಹೇಳಿದ್ದಾರೆ.

ಯುವಕನ ತಾಯಿ ಕೂಡ ’ನನ್ನ ಮಗ ಹುಟ್ಟು ಹಬ್ಬಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿದ್ದ, ಮರುದಿನ ಬೆಳಗ್ಗೆ ಆತ ಪೊಲೀಸ್ ಠಾಣೆಯಲ್ಲಿದ್ದ. ಆತನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ’ ಎಂದು ಹೇಳಿದ್ದಾರೆ.

ಆದರೆ ಪೊಲೀಸರು ಮಾತ್ರ ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ. “ಕೆಲವು ದಿನಗಳಿಂದ ಬಾಲಕಿ ಕಾಣೆಯಾಗಿದ್ದರು. ಆ ಹುಡುಗನು ಸೋನು ಎಂಬ ಹಿಂದೂ ಹೆಸರಿನಿಂದ ಆಕೆಯನ್ನು ಪರಿಚಯ ಮಾಡಿಕೊಂಡು, ಮತಾಂತರಗೊಳಿಸುವ ಉದ್ದೇಶದಿಂದ ಓಡಿಹೋಗುವಂತೆ ಆಕೆಯನ್ನು ಒತ್ತಾಯಿಸಿದ್ದನು. ಆದರೆ, ಆಕೆ ತಪ್ಪಿಸಿಕೊಂಡು ಬಂದಿದ್ದಾಳೆ. ಆರೋಪಿಯನ್ನು ಬಂಧಿಸಲಾಗಿದೆ” ಎಂದು ಬಿಜ್ನೋರ್‌ನ ಹಿರಿಯ ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದ IFFCO ಸ್ಥಾವರದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, 15 ಮಂದಿ ಅಸ್ವಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...