Homeಮುಖಪುಟಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

ಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

ಮುಸ್ಲಿಂ ಸಮುದಾಯದ ಯುವಕ ಒಂದು ವಾರದಿಂದ ಜೈಲಿನಲ್ಲಿದ್ದಾನೆ. ಆದರೆ, ಮತಾಂತರ ಮಾಡಲು ಯತ್ನಸಿರುವ ಆರೋಪವನ್ನು ಬಾಲಕಿ ಮತ್ತು ಆಕೆಯ ತಾಯಿ ಇಬ್ಬರೂ ನಿರಾಕರಿಸಿದ್ದಾರೆ.

- Advertisement -
- Advertisement -

ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಹದಿ ಹರೆಯದ ಯುವಕ ಮತ್ತು ಬಾಲಕಿಯ ಮೇಲೆ ದೌರ್ಜನ್ಯ ನಡೆಸಿ, ಯುವಕನನ್ನು ಹೊಸ ವಿವಾದಾತ್ಮಕ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.

16 ವರ್ಷದ ಹಿಂದೂ ಬಾಲಕಿಯನ್ನು ಬಲವಂತವಾಗಿ ಮತಾಂತರಗೊಳಿಸಲು ಯತ್ನಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯದ ಯುವಕನೊರ್ವ ಒಂದು ವಾರದಿಂದ ಜೈಲಿನಲ್ಲಿದ್ದಾನೆ. ಆದರೆ ಬಾಲಕಿಯನ್ನು ಮತಾಂತರ ಮಾಡಲು ಯತ್ನಿಸಿರುವ ಆರೋಪವನ್ನು ಬಾಲಕಿ ಮತ್ತು ಆಕೆಯ ತಾಯಿ ಇಬ್ಬರೂ ನಿರಾಕರಿಸಿದ್ದಾರೆ.

ಬಾಲಕಿಯ ತಂದೆ ನೀಡಿರುವ ಸುಳ್ಳು ದೂರಿನ ಆಧಾರದಲ್ಲಿ ಯುವಕನನ್ನು ಡಿಸೆಂಬರ್ 15 ರಂದು ಪೊಲೀಸರು ಬಂಧಿಸಿದ್ದಾರೆ. ಯುವಕನಿಗೆ ಕಿರುಕುಳ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಕಾನೂನು ಜಾರಿಗೆ ಬಂದಾಗಿನಿಂದ ಹಲವು ಅಮಾಯಕರನ್ನು ಜೈಲಿಗೆ ತಳ್ಳಲಾಗುತ್ತಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

ಘಟನೆ ಕುರಿತು ಸತ್ಯಾಸತ್ಯತೆ ತಿಳಿಯಲು ಬಾಲಕಿಯ ಹಳ್ಳಿಗೆ ಹೋದ ಪತ್ರಕರ್ತರಿಗೆ ಬಾಲಕಿ ಮತ್ತು ಬಾಲಕಿಯ ತಾಯಿ ಇದು ಲವ್‌ ಜಿಹಾದ್ ಪ್ರಕರಣ ಅಲ್ಲ ಎಂದು ತಿಳಿಸಿದ್ದಾರೆ. ಜೊತೆಗೆ ನಮ್ಮ ಮಗಳನ್ನು ಮನೆಗೆ ಬಿಡಲು ಆ ಯುವಕ ಜೊತೆಯಲ್ಲಿ ಬರುತ್ತಿದ್ದ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

“ರಾತ್ರಿ 11.30 ರ ಸುಮಾರಿಗೆ ದಾರಿಯಲ್ಲಿ ಕೆಲವರು ನಮ್ಮನ್ನು ಹಿಡಿದು ಥಳಿಸಿದರು. ಅವರು ಹಿಡಿದುಕೊಂಡು ಹೋಗಿರುವ ಆ ಹುಡುಗ ಯಾರು ಎಂಬುದೂ ನನಗೆ ತಿಳಿದಿರಲಿಲ್ಲ. ಅವರು ನನ್ನನ್ನು ಮತಾಂತರಗೊಳಿಸಲು ಯತ್ನಿಸಿದ್ದು ಸುಳ್ಳು” ಎಂದು ಬಾಲಕಿ ಎನ್‌ಡಿಟಿವಿಗೆ ನೀಡಿದ ಸಂಕ್ಷಿಪ್ತ ಸಂದರ್ಶನದಲ್ಲಿ ಹೇಳಿದ್ದಾರೆ.

ಇತ್ತ ಬಾಲಕಿಯ ತಾಯಿ ಕೂಡ ಈ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದು, “ಆಕೆ ಹುಟ್ಟುಹಬ್ಬದ ಕಾರ್ಯಕ್ರಮದಿಂದ ಹಿಂತಿರುಗುತಿದ್ದಳು. ಆ ಹುಡುಗ ಅವಳನ್ನು ಮನೆಗೆ ಬಿಡುವುದಾಗಿ ಹೇಳಿ, ಕರೆದುಕೊಂಡು ಬರುತ್ತಿದ್ದನು. ಆ ಸಂದರ್ಭದಲ್ಲಿ ಗ್ರಾಮದ ಯುವಕರ ಗುಂಪು ಅವರನ್ನು ಹಿಡಿದಿದ್ದಾರೆ. ಆಕೆ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಹೋಗಿದ್ದೆ ಎಂದು ಹೇಳಿದರೂ ಯಾರು ಆಕೆಯ ಮಾತನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ಬಾಲಕಿಯ ಗ್ರಾಮಸ್ಥರು ಕೂಡ ಬಾಲಕಿ ಮತ್ತು ಆಕೆಯ ತಾಯಿಯ ಮಾತನ್ನೇ ಬೆಂಬಲಿಸಿದ್ದಾರೆ. “ಪೊಲೀಸರು ಪ್ರಕರಣವನ್ನು ತಮಗೆ ಬೇಕಾದಂತೆ ಬದಲಾಯಿಸಿಕೊಂಡಿರಬೇಕು. ಇಲ್ಲಿ ಯಾವುದೇ ಲವ್ ಜಿಹಾದ್ ಪ್ರಕರಣ ನಡೆದಿಲ್ಲ. ಬಾಲಕಿ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದಳು ಎಂದು ಗ್ರಾಮದ ಮುಖಂಡ ವಿನೋದ್ ಸೈನಿ ಹೇಳಿದ್ದಾರೆ.

ಯುವಕನ ತಾಯಿ ಕೂಡ ’ನನ್ನ ಮಗ ಹುಟ್ಟು ಹಬ್ಬಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿದ್ದ, ಮರುದಿನ ಬೆಳಗ್ಗೆ ಆತ ಪೊಲೀಸ್ ಠಾಣೆಯಲ್ಲಿದ್ದ. ಆತನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ’ ಎಂದು ಹೇಳಿದ್ದಾರೆ.

ಆದರೆ ಪೊಲೀಸರು ಮಾತ್ರ ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ. “ಕೆಲವು ದಿನಗಳಿಂದ ಬಾಲಕಿ ಕಾಣೆಯಾಗಿದ್ದರು. ಆ ಹುಡುಗನು ಸೋನು ಎಂಬ ಹಿಂದೂ ಹೆಸರಿನಿಂದ ಆಕೆಯನ್ನು ಪರಿಚಯ ಮಾಡಿಕೊಂಡು, ಮತಾಂತರಗೊಳಿಸುವ ಉದ್ದೇಶದಿಂದ ಓಡಿಹೋಗುವಂತೆ ಆಕೆಯನ್ನು ಒತ್ತಾಯಿಸಿದ್ದನು. ಆದರೆ, ಆಕೆ ತಪ್ಪಿಸಿಕೊಂಡು ಬಂದಿದ್ದಾಳೆ. ಆರೋಪಿಯನ್ನು ಬಂಧಿಸಲಾಗಿದೆ” ಎಂದು ಬಿಜ್ನೋರ್‌ನ ಹಿರಿಯ ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದ IFFCO ಸ್ಥಾವರದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, 15 ಮಂದಿ ಅಸ್ವಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...