Homeಕರ್ನಾಟಕಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

- Advertisement -
- Advertisement -

ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ, ಬಿಜೆಪಿ ಮುಖಂಡನೆಂದೇ ಬಿಂಬಿತವಾಗಿರುವ ಶ್ರೀಕಾಂತ್ ತ್ಯಾಗಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಇಂದು ಮೀರತ್‌ನಲ್ಲಿ ಬಂಧಿಸಿದ್ದಾರೆ.

ತ್ಯಾಗಿ ಪರ ವಕೀಲರು ಗ್ರೇಟರ್ ನೋಯ್ಡಾ ನ್ಯಾಯಾಲಯದಲ್ಲಿ ಶರಣಾಗತಿ ಅರ್ಜಿಯನ್ನು ಸಲ್ಲಿಸಿದ ನಂತರ, ತ್ಯಾಗಿಯನ್ನು ಹಿಡಿದುಕೊಟ್ಟವರಿಗೆ ₹ 25,000 ಬಹುಮಾನವನ್ನು ಯುಪಿ ಪೊಲೀಸರು ಘೋಷಿಸಿದ ನಂತರ ಬಂಧನವಾಗಿದೆ.

ಮೀರತ್‌ನ ಹೊರವಲಯದಲ್ಲಿರುವ ಶ್ರದ್ಧಾಪುರಿಯಲ್ಲಿ ತನ್ನ ಸಹಾಯಕರ ಮನೆಯಲ್ಲಿ ತ್ಯಾಗಿ ಅವಿತುಕುಳಿತ್ತಿದ್ದನು. ಡೆಹ್ರಾಡೂನ್, ಹರಿದ್ವಾರ ಮತ್ತು ರಿಷಿಕೇಶ ಮೂಲಕ ಸಹರಾನ್‌ಪುರಕ್ಕೆ ಹೋಗಲು ಪ್ಲಾನ್‌ ಮಾಡಿದ್ದನು. ಜೊತೆಗೆ ತನ್ನ ಪತ್ನಿ ಮತ್ತು ವಕೀಲನ ಸಂಪರ್ಕದಲ್ಲಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ ಉತ್ತರ ಪ್ರದೇಶ ಆಡಳಿತ ತ್ಯಾಗಿ ವಿರುದ್ಧ ಕಠಿಣ ಕ್ರಮ ಜರುಗಿಸಿದೆ. ನಿನ್ನೆ ರೆಸಿಡೆನ್ಶಿಯಲ್ ಸೊಸೈಟಿಗೆ ಬುಲ್ಡೋಜರ್ ನುಗ್ಗಿಸಲಾಗಿದ್ದು, ತ್ಯಾಗಿ ಅವರ ನಿವಾಸದಲ್ಲಿದ್ದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದೆ. ಅವರ ವಿರುದ್ಧ ರಾಜ್ಯದ ಕಠಿಣ ಗೂಂಡಾ ಕಾಯ್ದೆಯಡಿಯೂ ಆರೋಪ ಹೊರಿಸಲಾಗಿದೆ.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯನೆಂದು ತ್ಯಾಗಿ ಹೇಳಿಕೊಂಡಿದ್ದಾನೆ. ಆತ ಸೋಷಿಯಲ್ ಮೀಡಿಯಾಗಳಲ್ಲಿ ಪೊಸ್ಟ್‌ ಮಾಡಲಾದ ಹಲವಾರು ಪೋಟೊಗಳಲ್ಲಿ ಬಿಜೆಪಿ ನಾಯಕರೊಂದಿಗೆ ಇರುವುದನ್ನು ಕಾಣಬಹುದು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರೊಂದಿಗೆ ತ್ಯಾಗಿ ಫೋಟೋ ತೆಗೆಸಿಕೊಂಡಿರುವುದು, ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಆದರೆ ತ್ಯಾಗಿ ಬಿಜೆಪಿ ಮುಖಂಡನಲ್ಲ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ.

ಕಳೆದ ವಾರ ಗಿಡಗಳನ್ನು ನೆಡುವುದನ್ನು ತಡೆಯಲು ಶ್ರೀಕಾಂತ್ ತ್ಯಾಗಿ ಪ್ರಯತ್ನಿಸಿದಾಗ ಮಹಿಳೆಯನ್ನು ನಿಂದಿಸುತ್ತಿರುವುದು ವಿವಾದ ಹುಟ್ಟಿಹಾಕಿತು. ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಆಕೆಯ ಪತಿಯನ್ನು ಅವಾಚ್ಯವಾಗಿ ತ್ಯಾಗಿ ನಿಂದಿಸಿದ್ದರು.

ಇದನ್ನೂ ಓದಿರಿ: ಬಿಜೆಪಿ ನಾಯಕನ ಮನೆ ಉರುಳಿಸಿದ ಯೋಗಿ ಆದಿತ್ಯನಾಥ್ ಸರ್ಕಾರ: ಕಾರಣವೇನು?

ಅಪಾರ್ಟ್‌ಮೆಂಟ್‌ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದರು. ಈ ಕುರಿತು ಅಪಾರ್ಟ್‌ಮೆಂಟ್ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಶ್ರೀಕಾಂತ್ ತ್ಯಾಗಿ ಬಳಿ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಶ್ಲೀಲ ಶಬ್ದಗಳಿಂದ ಮಹಿಳೆಯನ್ನು ನಿಂದಿಸಿ ಹಲ್ಲೆ ನಡೆಸಿದ್ದನು. ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದನು.

ಯುಪಿ ಪೊಲೀಸರು ತ್ಯಾಗಿಯನ್ನು ಹುಡುಕಲು ಪ್ರಾರಂಭಿಸಿದಾಗ, ಆತ ಸರಣಿ ಅಪರಾಧಗಳನ್ನು ಮಾಡಿರುವುದು ಬೆಳಕಿಗೆ ಬಂದಿದೆ. ತ್ಯಾಗಿ ವಿರುದ್ಧ ಕೊಲೆ ಯತ್ನ ಮತ್ತು ಸುಲಿಗೆಯಂತಹ ಗಂಭೀರ ಆರೋಪಗಳ ಅಡಿಯಲ್ಲಿ ಈ ಹಿಂದೆ 9 ಪ್ರಕರಣಗಳು ದಾಖಲಾಗಿವೆ.

ತ್ಯಾಗಿಗೆ ಸೇರಿದ ಹಲವು ವಾಹನಗಳೂ ಪೊಲೀಸರಿಗೆ ಸಿಕ್ಕಿವೆ. ಒಂದು ಕಾರಿನ ಮೇಲೆ ಬಿಜೆಪಿ ಯುವ ಮೋರ್ಚಾ ಎಂದು ಬರೆಯಲಾಗಿದೆ. ತ್ಯಾಗಿ ಅವರ ಕುಟುಂಬವು ನೋಯ್ಡಾದಲ್ಲಿ ಸುಮಾರು 50 ಅಂಗಡಿಗಳನ್ನು ಹೊಂದಿದೆ ಮತ್ತು ಲಕ್ಷಾಂತರ ರೂಪಾಯಿಗಳನ್ನು ಬಾಡಿಗೆಯಿಂದ ಪಡೆಯುತ್ತಿದೆ ಎಂದು ಅಧಿಕಾರಿಗಳು ಗಮನಿಸಿದ್ದಾರೆ. ಕಂಡುಹಿಡಿದಿದೆ. ಇದರಲ್ಲಿ ಅಕ್ರಮ ನಡೆದಿದೆಯೇ ಎಂಬುದನ್ನು ತಿಳಿಯಲು ಅಧಿಕಾರಿಗಳು ಕ್ರಮ ಜರುಗಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...