ದರೋಡೆ ನಡೆಸುವ ವೇಳೆ 68 ವರ್ಷದ ವೃದ್ಧೆಯನ್ನು ದರೋಡೆಕೋರರು ಥಳಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಮುಜೀಬ್ಪುರ ಗ್ರಾಮದಲ್ಲಿ ನಡೆದಿದೆ. ಇಷ್ಟೆ ಅಲ್ಲದೆ, ದುಷ್ಕರ್ಮಿಗಳು ವೃದ್ದೆಯ ಇಬ್ಬರು ಪುತ್ರರು ಮತ್ತು ಸೊಸೆಯನ್ನು ಕೂಡಾ ಗಾಯಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೂವರು ಅಪರಿಚಿತರು ಈ ದರೋಡೆಯಲ್ಲಿ ಭಾಗಿಯಾಗಿದ್ದಾರೆ ಎಂದು ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ಯಮುನಾ ಪ್ರಸಾದ್ ತಿಳಿಸಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ಫಿರೋಜಾಬಾದ್ನಲ್ಲಿ ಶಂಕಿತ ಡೆಂಗ್ಯೂಗೆ 45 ಮಕ್ಕಳು ಸೇರಿ 53 ಮಂದಿ ಬಲಿ
ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮೂವರು ದುಷ್ಕರ್ಮಿಗಳು ಮನೆಗೆ ನುಗ್ಗಿ ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಯಮುನಾ ಪ್ರಸಾದ್ ತಿಳಿಸಿದ್ದಾರೆ. ಇದರ ನಂತರ ಆರೋಪಿಗಳು ನಗದು ಮತ್ತು ಆಭರಣಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ದರೋಡೆಕೋರರು ಹಲ್ಲೆ ನಡೆಸಿದ್ದ ವ್ಯಕ್ತಿಗಳನ್ನು ಶಿವಪ್ರಸಾದ್, ಅವರ ಪತ್ನಿ ಅಂಜು, ಅವರ ಕಿರಿಯ ಸಹೋದರ ಛೋಟೆಲಾಲ್ ಮತ್ತು ಅವರ ತಾಯಿ ಚಂದ್ರಾವತಿ (68) ಎಂದು ಗುರುತಿಸಲಾಗಿದೆ.
ಚಂದ್ರಾವತಿ ಅವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತಾದರೂ, ಅಲ್ಲಿ ವೈದ್ಯರು ಚಂದ್ರಾವತಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್ಗಳಲ್ಲಿ ಮದ್ಯ, ಮಾಂಸ ನಿಷೇಧ!