Homeಕರ್ನಾಟಕಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಮನೆ ಮುಂದೆ ಸಣ್ಣ ಕಾರು ಪಾರ್ಕಿಂಗ್‌ಗೆ ವಾರ್ಷಿಕ 1000 ರೂ ಮತ್ತು ದೊಡ್ಡ ಕಾರುಗಳಿಗೆ 5000 ರೂವರೆಗೆ ಶುಲ್ಕ ವಿಧಿಸುವುದಾಗಿ ಸರ್ಕಾರ ಘೋಷಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರ ಪಾರ್ಕಿಂಗ್ 2.0 ನೀತಿ ಜಾರಿಗೆ ತರಲು ಉದ್ದೇಶಿಸಿದ್ದು, ರಸ್ತೆ ಬದಿ ಪಾರ್ಕಿಂಗ್‌ಗೆ ದುಬಾರಿ ಶುಲ್ಕ, ಮನೆ ಮುಂದೆ ಪಾರ್ಕಿಂಗ್‌ಗೆ ಸಹ ಶುಲ್ಕ ವಿಧಿಸಲು ಹೊರಟಿದೆ. ಹೊಸ ವಾಹನ ಖರೀದಿಗೆ ವಾಹನ ನಿಲುಗಡೆ ಪರವಾನಗಿ ಕಡ್ಡಾಯಗೊಳಿಸಿದ್ದು ಆರು ತಿಂಗಳಿನಿಂದ ವರ್ಷದೊಳಗೆ ಈ ನಿಯಮಗಳನ್ನು ಜಾರಿಗೊಳಿವುದಾಗಿ ತಿಳಿಸಿದೆ.

ಮನೆ ಮುಂದೆ ಸಣ್ಣ ಕಾರು ಪಾರ್ಕಿಂಗ್‌ಗೆ ವಾರ್ಷಿಕ 1000 ರೂ ಮತ್ತು ದೊಡ್ಡ ಕಾರುಗಳಿಗೆ 5000 ರೂವರೆಗೆ ಶುಲ್ಕ ವಿಧಿಸುವುದಾಗಿ ಸರ್ಕಾರ ಘೋಷಿಸಿದೆ. ನಗರ ಭೂಸಾರಿಗೆ ನಿರ್ದೇಶನಾಲಯ ಮತ್ತು ಬಿಬಿಎಂಪಿ ಜಂಟಿಯಾಗಿ ಇದನ್ನು ಅನುಷ್ಠಾನಗೊಳಿಸುವ ಹೊಣೆ ಹೊತ್ತಿವೆ.

ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಾಹನ ಕೊಳ್ಳುವಾಗಲೇ ತೆರಿಗೆ ಕಟ್ಟಿರುತ್ತೇವೆ ಹಾಗಿದ್ದೂ ಮತ್ತೆ ಮತ್ತೆ ಶುಲ್ಕ ಸಂಗ್ರಹಿಸುವ ಮೂಲಕ ಸರ್ಕಾರ ಹಗಲು ದರೋಡೆಗಿಳಿದಿದೆ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಸ್ತೆ ಬದಿ ವಾಹನ ನಿಲುಗಡೆಗೆ ದುಬಾರಿ ಶುಲ್ಕ ವಿಧಿಸಲು ಹೊರಟಿರುವ ಬಿಬಿಎಂಪಿಯ ಅವೈಜ್ಞಾನಿಕ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಸರಿಯಾದ ಮೂಲ ಸೌಕರ್ಯಗಳನ್ನೇ ನೀಡದೆ ತರಲು ಹೊರಟಿರುವ ಈ ನಿರ್ಧಾರ ಮೂರ್ಖತನದ್ದು, ಜನರನ್ನು ಸುಲಿಗೆ ಮಾಡಲು ನಿಂತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ರಸ್ತೆಗಳಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲುಗಡೆ ಮಾಡುತ್ತಿರುವುದು ವಾಸ್ತವ. ಈ ಸಮಸ್ಯೆಗಳಿಗೆ ಬಿಬಿಎಂಪಿಯ ವೈಫಲ್ಯವೇ ಕಾರಣ, ಏಕೆಂದರೆ ರಸ್ತೆ ಬದಿಗಳಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣವಾಗುವ ತನಕ ಕಣ್ಣು ಮುಚ್ಚಿಕೊಂಡು ಕೂತ ಕಾರಣ ಇಂದು ಈ ಸಮಸ್ಯೆಯನ್ನು ಎದುರಿಸಬೇಕಿದೆ. ದೊಡ್ಡ ದೊಡ್ಡ ಕಟ್ಟಡಗಳು ತಮ್ಮ ನೆಲ ಅಂತಸ್ತಿನಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲೇ ಬೇಕು ಎನ್ನುವ ನಿಯಮವಿದೆ. ನೆಲ ಮಾಳಿಗೆಯಲ್ಲೂ ಬಾಡಿಗೆಗೆ ಮಳಿಗೆಗಳನ್ನು ನೀಡಿ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ದ ಬಿಬಿಎಂಪಿ ಇದುವರೆಗೂ ಯಾವ ಕ್ರಮ ತೆಗೆದುಕೊಂಡ ಉದಾಹರಣೆ ಇಲ್ಲ ಎಂದು ಹೇಳಿದ್ದಾರೆ.

ಶುಲ್ಕ ಪಾವತಿ ಮಾಡಿ ರಸ್ತೆ ಬದಿ ವಾಹನ ನಿಲ್ಲಿಸುವ ನಿಯಮದಿಂದ ರಸ್ತೆಗಳ ಮೇಲಿನ ಒತ್ತಡ ಕಡಿಮೆ ಆಗುತ್ತದೆ ಎನ್ನುವುದು ಸದ್ಯಕ್ಕೆ ದೂರವಾದ ಮಾತು. ಇದು ಜನರನ್ನು ಹೆದರಿಸಿ ಬೆದರಿಸಿ ಹಣ ವಸೂಲಿ ಮಾಡುವ ತಂತ್ರ, ಸಮಸ್ಯೆಯನ್ನು ನಿಜವಾಗಿ ಬಗೆಹರಿಸುವ ಯಾವುದೇ ಆಲೋಚನೆ ಬಿಬಿಎಂಪಿಗೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಸರಕು ಸಾಗಣೆ ಲಾರಿಗಳು ಸೇರಿದಂತೆ ಇತರೇ ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವ ವಾಹನಗಳಿಂದ ರಸ್ತೆಗಳ ಮೇಲೆ ಹೆಚ್ಚು ಹೊರೆಯಾಗುತ್ತಿದೆ. ಇಂತಹ ವಾಹನಗಳ ಮಾಲೀಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದರೆ ಸಮಸ್ಯೆ ನಿವಾರಣೆಯಾಗುತ್ತದೆ ಹಾಗೂ ವಾಹನ ನಿಲುಗಡೆಗೆ ಪ್ರತ್ಯೇಕ ಡಿಪೋ ಸ್ಥಾಪನೆ, ಬಿಬಿಎಂಪಿಯಿಂದ ಪಾರ್ಕಿಂಕ್ ಲಾಟ್‌ಗಳನ್ನು ಸ್ಥಾಪಿಸದ ಹೊರತು ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುವುದು ಅಸಾಧ್ಯ ಎಂದರು.

ಕಟ್ಟಡ ನಿರ್ಮಾಣ ಮಾಡುವಾಗಲೇ ವಾಹನ ನಿಲುಗಡೆಗೂ ಸೂಕ್ತ ಸ್ಥಳವಾಕಾಶ ಬಿಡದ ಕಟ್ಟಡಗಳಿಗೂ ಅನುಮತಿ ನೀಡಿದ ಬಿಬಿಎಂಪಿ ತನ್ನ ವೈಫಲ್ಯವನ್ನು ಜನರ ಮೇಲೆ ಹಾಕಲು ಹೊರಟಿದೆ. ಈ ಕೂಡಲೇ ತನ್ನ ಅವೈಜ್ಞಾನಿಕ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ ಬಿಬಿಎಂಪಿ ಮನೆ ಮನೆಯಲ್ಲಿ ಕಸಕ್ಕೂ ಶುಲ್ಕ ವಿಧಿಸಲು ಹೊರಟಿತ್ತು. ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಕೈಬಿಟ್ಟಿತು. ಈಗ ವಾಹನ ಪಾರ್ಕಿಂಗ್‌ಗೆ ಶುಲ್ಕ ವಿಧಿಸಲು ಹೊರಟಿದೆ. ಇದನ್ನು ಸಾರ್ವಜನಿಕರು ಯಾವ ರೀತಿ ಸ್ವೀಕರಿಸುತ್ತಾರೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಯತ್ನಾಳ್‌ಗೆ ನೋಟಿಸ್: 15 ದಿನದಲ್ಲಿ ಉತ್ತರಿಸುವಂತೆ ಬಿಜೆಪಿ ಹೈಕಮಾಂಡ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...