Homeಕರ್ನಾಟಕಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಮನೆ ಮುಂದೆ ಸಣ್ಣ ಕಾರು ಪಾರ್ಕಿಂಗ್‌ಗೆ ವಾರ್ಷಿಕ 1000 ರೂ ಮತ್ತು ದೊಡ್ಡ ಕಾರುಗಳಿಗೆ 5000 ರೂವರೆಗೆ ಶುಲ್ಕ ವಿಧಿಸುವುದಾಗಿ ಸರ್ಕಾರ ಘೋಷಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರ ಪಾರ್ಕಿಂಗ್ 2.0 ನೀತಿ ಜಾರಿಗೆ ತರಲು ಉದ್ದೇಶಿಸಿದ್ದು, ರಸ್ತೆ ಬದಿ ಪಾರ್ಕಿಂಗ್‌ಗೆ ದುಬಾರಿ ಶುಲ್ಕ, ಮನೆ ಮುಂದೆ ಪಾರ್ಕಿಂಗ್‌ಗೆ ಸಹ ಶುಲ್ಕ ವಿಧಿಸಲು ಹೊರಟಿದೆ. ಹೊಸ ವಾಹನ ಖರೀದಿಗೆ ವಾಹನ ನಿಲುಗಡೆ ಪರವಾನಗಿ ಕಡ್ಡಾಯಗೊಳಿಸಿದ್ದು ಆರು ತಿಂಗಳಿನಿಂದ ವರ್ಷದೊಳಗೆ ಈ ನಿಯಮಗಳನ್ನು ಜಾರಿಗೊಳಿವುದಾಗಿ ತಿಳಿಸಿದೆ.

ಮನೆ ಮುಂದೆ ಸಣ್ಣ ಕಾರು ಪಾರ್ಕಿಂಗ್‌ಗೆ ವಾರ್ಷಿಕ 1000 ರೂ ಮತ್ತು ದೊಡ್ಡ ಕಾರುಗಳಿಗೆ 5000 ರೂವರೆಗೆ ಶುಲ್ಕ ವಿಧಿಸುವುದಾಗಿ ಸರ್ಕಾರ ಘೋಷಿಸಿದೆ. ನಗರ ಭೂಸಾರಿಗೆ ನಿರ್ದೇಶನಾಲಯ ಮತ್ತು ಬಿಬಿಎಂಪಿ ಜಂಟಿಯಾಗಿ ಇದನ್ನು ಅನುಷ್ಠಾನಗೊಳಿಸುವ ಹೊಣೆ ಹೊತ್ತಿವೆ.

ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಾಹನ ಕೊಳ್ಳುವಾಗಲೇ ತೆರಿಗೆ ಕಟ್ಟಿರುತ್ತೇವೆ ಹಾಗಿದ್ದೂ ಮತ್ತೆ ಮತ್ತೆ ಶುಲ್ಕ ಸಂಗ್ರಹಿಸುವ ಮೂಲಕ ಸರ್ಕಾರ ಹಗಲು ದರೋಡೆಗಿಳಿದಿದೆ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಸ್ತೆ ಬದಿ ವಾಹನ ನಿಲುಗಡೆಗೆ ದುಬಾರಿ ಶುಲ್ಕ ವಿಧಿಸಲು ಹೊರಟಿರುವ ಬಿಬಿಎಂಪಿಯ ಅವೈಜ್ಞಾನಿಕ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಸರಿಯಾದ ಮೂಲ ಸೌಕರ್ಯಗಳನ್ನೇ ನೀಡದೆ ತರಲು ಹೊರಟಿರುವ ಈ ನಿರ್ಧಾರ ಮೂರ್ಖತನದ್ದು, ಜನರನ್ನು ಸುಲಿಗೆ ಮಾಡಲು ನಿಂತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ರಸ್ತೆಗಳಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲುಗಡೆ ಮಾಡುತ್ತಿರುವುದು ವಾಸ್ತವ. ಈ ಸಮಸ್ಯೆಗಳಿಗೆ ಬಿಬಿಎಂಪಿಯ ವೈಫಲ್ಯವೇ ಕಾರಣ, ಏಕೆಂದರೆ ರಸ್ತೆ ಬದಿಗಳಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣವಾಗುವ ತನಕ ಕಣ್ಣು ಮುಚ್ಚಿಕೊಂಡು ಕೂತ ಕಾರಣ ಇಂದು ಈ ಸಮಸ್ಯೆಯನ್ನು ಎದುರಿಸಬೇಕಿದೆ. ದೊಡ್ಡ ದೊಡ್ಡ ಕಟ್ಟಡಗಳು ತಮ್ಮ ನೆಲ ಅಂತಸ್ತಿನಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲೇ ಬೇಕು ಎನ್ನುವ ನಿಯಮವಿದೆ. ನೆಲ ಮಾಳಿಗೆಯಲ್ಲೂ ಬಾಡಿಗೆಗೆ ಮಳಿಗೆಗಳನ್ನು ನೀಡಿ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ದ ಬಿಬಿಎಂಪಿ ಇದುವರೆಗೂ ಯಾವ ಕ್ರಮ ತೆಗೆದುಕೊಂಡ ಉದಾಹರಣೆ ಇಲ್ಲ ಎಂದು ಹೇಳಿದ್ದಾರೆ.

ಶುಲ್ಕ ಪಾವತಿ ಮಾಡಿ ರಸ್ತೆ ಬದಿ ವಾಹನ ನಿಲ್ಲಿಸುವ ನಿಯಮದಿಂದ ರಸ್ತೆಗಳ ಮೇಲಿನ ಒತ್ತಡ ಕಡಿಮೆ ಆಗುತ್ತದೆ ಎನ್ನುವುದು ಸದ್ಯಕ್ಕೆ ದೂರವಾದ ಮಾತು. ಇದು ಜನರನ್ನು ಹೆದರಿಸಿ ಬೆದರಿಸಿ ಹಣ ವಸೂಲಿ ಮಾಡುವ ತಂತ್ರ, ಸಮಸ್ಯೆಯನ್ನು ನಿಜವಾಗಿ ಬಗೆಹರಿಸುವ ಯಾವುದೇ ಆಲೋಚನೆ ಬಿಬಿಎಂಪಿಗೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಸರಕು ಸಾಗಣೆ ಲಾರಿಗಳು ಸೇರಿದಂತೆ ಇತರೇ ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವ ವಾಹನಗಳಿಂದ ರಸ್ತೆಗಳ ಮೇಲೆ ಹೆಚ್ಚು ಹೊರೆಯಾಗುತ್ತಿದೆ. ಇಂತಹ ವಾಹನಗಳ ಮಾಲೀಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದರೆ ಸಮಸ್ಯೆ ನಿವಾರಣೆಯಾಗುತ್ತದೆ ಹಾಗೂ ವಾಹನ ನಿಲುಗಡೆಗೆ ಪ್ರತ್ಯೇಕ ಡಿಪೋ ಸ್ಥಾಪನೆ, ಬಿಬಿಎಂಪಿಯಿಂದ ಪಾರ್ಕಿಂಕ್ ಲಾಟ್‌ಗಳನ್ನು ಸ್ಥಾಪಿಸದ ಹೊರತು ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುವುದು ಅಸಾಧ್ಯ ಎಂದರು.

ಕಟ್ಟಡ ನಿರ್ಮಾಣ ಮಾಡುವಾಗಲೇ ವಾಹನ ನಿಲುಗಡೆಗೂ ಸೂಕ್ತ ಸ್ಥಳವಾಕಾಶ ಬಿಡದ ಕಟ್ಟಡಗಳಿಗೂ ಅನುಮತಿ ನೀಡಿದ ಬಿಬಿಎಂಪಿ ತನ್ನ ವೈಫಲ್ಯವನ್ನು ಜನರ ಮೇಲೆ ಹಾಕಲು ಹೊರಟಿದೆ. ಈ ಕೂಡಲೇ ತನ್ನ ಅವೈಜ್ಞಾನಿಕ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ ಬಿಬಿಎಂಪಿ ಮನೆ ಮನೆಯಲ್ಲಿ ಕಸಕ್ಕೂ ಶುಲ್ಕ ವಿಧಿಸಲು ಹೊರಟಿತ್ತು. ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಕೈಬಿಟ್ಟಿತು. ಈಗ ವಾಹನ ಪಾರ್ಕಿಂಗ್‌ಗೆ ಶುಲ್ಕ ವಿಧಿಸಲು ಹೊರಟಿದೆ. ಇದನ್ನು ಸಾರ್ವಜನಿಕರು ಯಾವ ರೀತಿ ಸ್ವೀಕರಿಸುತ್ತಾರೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಯತ್ನಾಳ್‌ಗೆ ನೋಟಿಸ್: 15 ದಿನದಲ್ಲಿ ಉತ್ತರಿಸುವಂತೆ ಬಿಜೆಪಿ ಹೈಕಮಾಂಡ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...