Homeಕರ್ನಾಟಕಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಮನೆ ಮುಂದೆ ಸಣ್ಣ ಕಾರು ಪಾರ್ಕಿಂಗ್‌ಗೆ ವಾರ್ಷಿಕ 1000 ರೂ ಮತ್ತು ದೊಡ್ಡ ಕಾರುಗಳಿಗೆ 5000 ರೂವರೆಗೆ ಶುಲ್ಕ ವಿಧಿಸುವುದಾಗಿ ಸರ್ಕಾರ ಘೋಷಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರ ಪಾರ್ಕಿಂಗ್ 2.0 ನೀತಿ ಜಾರಿಗೆ ತರಲು ಉದ್ದೇಶಿಸಿದ್ದು, ರಸ್ತೆ ಬದಿ ಪಾರ್ಕಿಂಗ್‌ಗೆ ದುಬಾರಿ ಶುಲ್ಕ, ಮನೆ ಮುಂದೆ ಪಾರ್ಕಿಂಗ್‌ಗೆ ಸಹ ಶುಲ್ಕ ವಿಧಿಸಲು ಹೊರಟಿದೆ. ಹೊಸ ವಾಹನ ಖರೀದಿಗೆ ವಾಹನ ನಿಲುಗಡೆ ಪರವಾನಗಿ ಕಡ್ಡಾಯಗೊಳಿಸಿದ್ದು ಆರು ತಿಂಗಳಿನಿಂದ ವರ್ಷದೊಳಗೆ ಈ ನಿಯಮಗಳನ್ನು ಜಾರಿಗೊಳಿವುದಾಗಿ ತಿಳಿಸಿದೆ.

ಮನೆ ಮುಂದೆ ಸಣ್ಣ ಕಾರು ಪಾರ್ಕಿಂಗ್‌ಗೆ ವಾರ್ಷಿಕ 1000 ರೂ ಮತ್ತು ದೊಡ್ಡ ಕಾರುಗಳಿಗೆ 5000 ರೂವರೆಗೆ ಶುಲ್ಕ ವಿಧಿಸುವುದಾಗಿ ಸರ್ಕಾರ ಘೋಷಿಸಿದೆ. ನಗರ ಭೂಸಾರಿಗೆ ನಿರ್ದೇಶನಾಲಯ ಮತ್ತು ಬಿಬಿಎಂಪಿ ಜಂಟಿಯಾಗಿ ಇದನ್ನು ಅನುಷ್ಠಾನಗೊಳಿಸುವ ಹೊಣೆ ಹೊತ್ತಿವೆ.

ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಾಹನ ಕೊಳ್ಳುವಾಗಲೇ ತೆರಿಗೆ ಕಟ್ಟಿರುತ್ತೇವೆ ಹಾಗಿದ್ದೂ ಮತ್ತೆ ಮತ್ತೆ ಶುಲ್ಕ ಸಂಗ್ರಹಿಸುವ ಮೂಲಕ ಸರ್ಕಾರ ಹಗಲು ದರೋಡೆಗಿಳಿದಿದೆ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಸ್ತೆ ಬದಿ ವಾಹನ ನಿಲುಗಡೆಗೆ ದುಬಾರಿ ಶುಲ್ಕ ವಿಧಿಸಲು ಹೊರಟಿರುವ ಬಿಬಿಎಂಪಿಯ ಅವೈಜ್ಞಾನಿಕ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಸರಿಯಾದ ಮೂಲ ಸೌಕರ್ಯಗಳನ್ನೇ ನೀಡದೆ ತರಲು ಹೊರಟಿರುವ ಈ ನಿರ್ಧಾರ ಮೂರ್ಖತನದ್ದು, ಜನರನ್ನು ಸುಲಿಗೆ ಮಾಡಲು ನಿಂತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ರಸ್ತೆಗಳಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲುಗಡೆ ಮಾಡುತ್ತಿರುವುದು ವಾಸ್ತವ. ಈ ಸಮಸ್ಯೆಗಳಿಗೆ ಬಿಬಿಎಂಪಿಯ ವೈಫಲ್ಯವೇ ಕಾರಣ, ಏಕೆಂದರೆ ರಸ್ತೆ ಬದಿಗಳಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣವಾಗುವ ತನಕ ಕಣ್ಣು ಮುಚ್ಚಿಕೊಂಡು ಕೂತ ಕಾರಣ ಇಂದು ಈ ಸಮಸ್ಯೆಯನ್ನು ಎದುರಿಸಬೇಕಿದೆ. ದೊಡ್ಡ ದೊಡ್ಡ ಕಟ್ಟಡಗಳು ತಮ್ಮ ನೆಲ ಅಂತಸ್ತಿನಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲೇ ಬೇಕು ಎನ್ನುವ ನಿಯಮವಿದೆ. ನೆಲ ಮಾಳಿಗೆಯಲ್ಲೂ ಬಾಡಿಗೆಗೆ ಮಳಿಗೆಗಳನ್ನು ನೀಡಿ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ದ ಬಿಬಿಎಂಪಿ ಇದುವರೆಗೂ ಯಾವ ಕ್ರಮ ತೆಗೆದುಕೊಂಡ ಉದಾಹರಣೆ ಇಲ್ಲ ಎಂದು ಹೇಳಿದ್ದಾರೆ.

ಶುಲ್ಕ ಪಾವತಿ ಮಾಡಿ ರಸ್ತೆ ಬದಿ ವಾಹನ ನಿಲ್ಲಿಸುವ ನಿಯಮದಿಂದ ರಸ್ತೆಗಳ ಮೇಲಿನ ಒತ್ತಡ ಕಡಿಮೆ ಆಗುತ್ತದೆ ಎನ್ನುವುದು ಸದ್ಯಕ್ಕೆ ದೂರವಾದ ಮಾತು. ಇದು ಜನರನ್ನು ಹೆದರಿಸಿ ಬೆದರಿಸಿ ಹಣ ವಸೂಲಿ ಮಾಡುವ ತಂತ್ರ, ಸಮಸ್ಯೆಯನ್ನು ನಿಜವಾಗಿ ಬಗೆಹರಿಸುವ ಯಾವುದೇ ಆಲೋಚನೆ ಬಿಬಿಎಂಪಿಗೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಸರಕು ಸಾಗಣೆ ಲಾರಿಗಳು ಸೇರಿದಂತೆ ಇತರೇ ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವ ವಾಹನಗಳಿಂದ ರಸ್ತೆಗಳ ಮೇಲೆ ಹೆಚ್ಚು ಹೊರೆಯಾಗುತ್ತಿದೆ. ಇಂತಹ ವಾಹನಗಳ ಮಾಲೀಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದರೆ ಸಮಸ್ಯೆ ನಿವಾರಣೆಯಾಗುತ್ತದೆ ಹಾಗೂ ವಾಹನ ನಿಲುಗಡೆಗೆ ಪ್ರತ್ಯೇಕ ಡಿಪೋ ಸ್ಥಾಪನೆ, ಬಿಬಿಎಂಪಿಯಿಂದ ಪಾರ್ಕಿಂಕ್ ಲಾಟ್‌ಗಳನ್ನು ಸ್ಥಾಪಿಸದ ಹೊರತು ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುವುದು ಅಸಾಧ್ಯ ಎಂದರು.

ಕಟ್ಟಡ ನಿರ್ಮಾಣ ಮಾಡುವಾಗಲೇ ವಾಹನ ನಿಲುಗಡೆಗೂ ಸೂಕ್ತ ಸ್ಥಳವಾಕಾಶ ಬಿಡದ ಕಟ್ಟಡಗಳಿಗೂ ಅನುಮತಿ ನೀಡಿದ ಬಿಬಿಎಂಪಿ ತನ್ನ ವೈಫಲ್ಯವನ್ನು ಜನರ ಮೇಲೆ ಹಾಕಲು ಹೊರಟಿದೆ. ಈ ಕೂಡಲೇ ತನ್ನ ಅವೈಜ್ಞಾನಿಕ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ ಬಿಬಿಎಂಪಿ ಮನೆ ಮನೆಯಲ್ಲಿ ಕಸಕ್ಕೂ ಶುಲ್ಕ ವಿಧಿಸಲು ಹೊರಟಿತ್ತು. ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಕೈಬಿಟ್ಟಿತು. ಈಗ ವಾಹನ ಪಾರ್ಕಿಂಗ್‌ಗೆ ಶುಲ್ಕ ವಿಧಿಸಲು ಹೊರಟಿದೆ. ಇದನ್ನು ಸಾರ್ವಜನಿಕರು ಯಾವ ರೀತಿ ಸ್ವೀಕರಿಸುತ್ತಾರೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಯತ್ನಾಳ್‌ಗೆ ನೋಟಿಸ್: 15 ದಿನದಲ್ಲಿ ಉತ್ತರಿಸುವಂತೆ ಬಿಜೆಪಿ ಹೈಕಮಾಂಡ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...