Homeಕರ್ನಾಟಕಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

ಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದಲ್ಲಿ 7 ಹಂತದ ಮಹಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು, 54 ಕ್ಷೇತ್ರಗಳಲ್ಲಿ ಮತದಾನ ನಡೆಯತ್ತಿದೆ. ಈ ಸುತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿಯತ್ತ ಎಲ್ಲರ ಕಣ್ಣು ನೆಟ್ಟಿದೆ.

ಅಜಂಗಢ, ಮೌ, ಜೌನ್‌ಪುರ್, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ, ಭದೋಹಿ ಮತ್ತು ಸೋನ್‌ಭದ್ರ ಜಿಲ್ಲೆಗಳಲ್ಲಿನ 54 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.

ವಾರಣಾಸಿ ಮತ್ತು ಅದರ ಪಕ್ಕದ ಜಿಲ್ಲೆಗಳಾದ ಬನಾರಸ್ ಸಿಟಿ ಸೌತ್, ಬನಾರಸ್ ಸಿಟಿ ನಾರ್ತ್, ಶಿವಪುರ, ಸೇವಾಪುರಿ, ಕಂಟೋನ್ಮೆಂಟ್, ಅಜ್ಗರ, ಪಿಂದ್ರಾ ಮತ್ತು ರೊಹನಿಯಾದ ಕ್ಷೇತ್ರಗಳು ಬಹುಕೋನ ಸ್ಪರ್ಧೆಗೆ ಸಾಕ್ಷಿಯಾಗಿವೆ.

ಕಳೆದ ಬಾರಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈ ಪ್ರದೇಶದಲ್ಲಿ ಮುನ್ನಡೆ ಸಾಧಿಸಿದ್ದವು. ಆರು ಸ್ಥಾನಗಳು ಬಿಜೆಪಿ ಪಾಲಾಗಿವೆ. ಉಳಿದ ಎರಡರಲ್ಲಿ ಬಿಜೆಪಿ ಮಿತ್ರ ಪಕ್ಷವಾದ ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ (ಎಸ್) ಒಂದು ಸ್ಥಾನ, ಈಗ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಪಾಲುದಾರರಾಗಿರುವ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಒಂದು ಸ್ಥಾನವನ್ನು ಗೆದ್ದಿವೆ.

ಐದು ಕ್ಷೇತ್ರಗಳು ಪ್ರಧಾನಿ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿ ವ್ಯಾಪ್ತಿಯಲ್ಲಿವೆ. ಕಳೆದ ಬಾರಿ ಬಿಜೆಪಿ ಗೆದ್ದಿದ್ದ ನೆರೆಯ ಮಿರ್ಜಾಪುರ ಮತ್ತು ಜೌನ್‌ಪುರದಲ್ಲೂ ಪ್ರಬಲ ಚುನಾವಣಾ ಸಮರ ಏರ್ಪಟ್ಟಿದೆ.

3 ಲಕ್ಷ ಮುಸ್ಲಿಮರಲ್ಲದೆ ವಾರಣಾಸಿಯಲ್ಲಿ 3.25 ಲಕ್ಷ ವೈಶ್ಯರು, ಸ್ಥಳೀಯವಾಗಿ ಒಬಿಸಿ ಕುರ್ಮಿ ​​2 ಲಕ್ಷ, ಯಾದವರು 1.5 ಲಕ್ಷ, ಠಾಕೂರ್ 1 ಲಕ್ಷ, ದಲಿತರು 80,000 ಮತ್ತು ಇತರ ಒಬಿಸಿ ಜಾತಿಗಳು 70,000 ಜನರಿದ್ದಾರೆ.

ಅಖಿಲೇಶ್ ಯಾದವ್ ಅವರ ಪಾಲುದಾರರಾದ ಅಪ್ನಾ ದಳ (ಕೆ), ರಾಜ್‌ಭರ್ ಅವರ ಎಸ್‌ಬಿಎಸ್‌ಪಿ ಮತ್ತು ಬಿಜೆಪಿ ಮಿತ್ರಪಕ್ಷಗಳಾದ ಅಪ್ನಾ ದಳ, ನಿಶಾದ್ ಪಕ್ಷಗಳ ನಡುವಿನ ಸಮರವೆಂದೇ ಕೊನೆಯ ಹಂತದ ಚುನಾವಣೆಯನ್ನು ನೋಡಲಾಗುತ್ತಿದೆ.

ಅಖಿಲೇಶ್ ಯಾದವ್ ಅವರು ವಾರಣಾಸಿ ಭಾಗದಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಎಸ್‌ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಇನ್ನುಳಿದ ಸ್ಥಾನಗಳನ್ನು ಇತರ ಮಿತ್ರಪಕ್ಷಗಳಾದ ಅಪ್ನಾ ದಳ, ಎಸ್‌ಬಿಎಸ್‌ಪಿಗೆ ಬಿಟ್ಟುಕೊಟ್ಟಿದ್ದಾರೆ.

ಬಿಜೆಪಿ ಏಳು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರೊಹಾನಿಯಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ನೇತೃತ್ವದ ಅಪ್ನಾ ದಳ (ಎಸ್) ಅಭ್ಯರ್ಥಿ ಸ್ಪರ್ಧಿಸಿದ್ದಾರೆ.

ಈ ಚುನಾವಣೆಯು ಸಮಾಜವಾದಿ ಪಕ್ಷದ ಮುಖ್ಯಸ್ಥರಿಗೆ ಪರೀಕ್ಷೆಯೊಡ್ಡಿದೆ. ಅಖಿಲೇಶ್‌ ಅವರ ಸಂಸದೀಯ ಕ್ಷೇತ್ರವಾದ ಅಜಂಗಢ್‌ಗೆ ಸಹ ಚುನಾವಣೆ ನಡೆಯುತ್ತಿದೆ. 2017ರಲ್ಲಿ ಬಿಜೆಪಿ ಪ್ರಚಂಡ ಬಹುಮತದ ನಡುವೆಯೂ ಈ ಪ್ರದೇಶವು ಎಸ್‌ಪಿಗೆ ನಿಷ್ಠವಾಗಿತ್ತು. ಜಿಲ್ಲೆಯ 10 ಸ್ಥಾನಗಳಲ್ಲಿ ಎಸ್‌ಪಿ ಐದರಲ್ಲಿ ಗೆದ್ದಿತ್ತು.

ಉತ್ತರ ಪ್ರದೇಶ ಮತ್ತು ಇತರ ನಾಲ್ಕು ರಾಜ್ಯಗಳ ಮತ ಎಣಿಕೆಯು ಮಾರ್ಚ್ 10 ರಂದು ನಡೆಯಲಿದೆ.

ಕೋವಿಡ್‌ ಬಿಕ್ಕಟ್ಟು ನಿರ್ವಹಣೆ: ಬಿಜೆಪಿಗೆ ಮುಳುವಾಗುವುದೇ?

ಮಾನವ ಹಕ್ಕುಗಳ ಸಂಸ್ಥೆಯಾದ ಸಿಟಿಜನ್‌ ಫಾರ್‌ ಜಸ್ಟೀಸ್‌ ಅಂಡ್‌ ಫೀಸ್‌ (ಸಿಜೆಪಿ) ಹಾಗೂ ಸ್ವತಂತ್ರ ತಜ್ಞರು ಸಂಗ್ರಹಿಸಿ, ವಿಶ್ಲೇಷಿಸಿದ ದತ್ತಾಂಶಗಳು ಮಹತ್ವದ ಸಂಗತಿಯೊಂದನ್ನು ಇತ್ತೀಚೆಗೆ ಬಿಚ್ಚಿಟ್ಟಿತ್ತು. ಪ್ರಧಾನಿ ನರೇಂದ್ರ ಮೋದಿಯವರ ತವರು ಜಿಲ್ಲೆಯಾದ ವಾರಣಾಸಿಯನ್ನು ಹೊಂದಿರುವ ಪೂರ್ವ ಉತ್ತರ ಪ್ರದೇಶದ ಪೂರ್ವಂಚಲ ಭಾಗದಲ್ಲಿ ಅತಿಹೆಚ್ಚಿನ ಜನರು ಕೋವಿಡ್ ಸಾಂಕ್ರಾಮಿಕದ ವೇಳೆ ಸಾವಿಗೀಡಾಗಿದ್ದಾರೆ ಎಂದು ವರದಿ ವಿಶ್ಲೇಷಿಸಿತ್ತು.

ಸಮೀಕ್ಷೆ ನಡೆಸಿದ ಪ್ರದೇಶದ ಅಂಕಿ ಅಂಶಗಳು ಹೇಳುವುದೇನೆಂದರೆ “ಜನವರಿ 2020ರಿಂದ ಆಗಸ್ಟ್‌ 2021ರವರೆಗೆ ದಾಖಲಾದ ಸಾವಿನ ಪ್ರಮಾಣವು 2019ರ ದಾಖಲೆಗೆ ಹೋಲಿಕೆ ಮಾಡಿದರೆ ಶೇ. 60ರಷ್ಟು ಹೆಚ್ಚಾಗಿದೆ”. ಇದು ಸರ್ಕಾರಿ ದಾಖಲೆಗಳನ್ನು ಆಧರಿಸಿ ಮಾಡಿದ ವರದಿಯಾಗಿದೆ ಎಂದು ಸಿಜೆಪಿ ಹೇಳಿತ್ತು. ಈ ಎಲ್ಲ ಅಂಶಗಳು ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ?- ಮಾರ್ಚ್ 10ರವರೆಗೆ ಕಾಯಬೇಕಷ್ಟೇ.


ಉತ್ತರ ಪ್ರದೇಶ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...