Homeಕರ್ನಾಟಕಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

ಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದಲ್ಲಿ 7 ಹಂತದ ಮಹಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು, 54 ಕ್ಷೇತ್ರಗಳಲ್ಲಿ ಮತದಾನ ನಡೆಯತ್ತಿದೆ. ಈ ಸುತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿಯತ್ತ ಎಲ್ಲರ ಕಣ್ಣು ನೆಟ್ಟಿದೆ.

ಅಜಂಗಢ, ಮೌ, ಜೌನ್‌ಪುರ್, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ, ಭದೋಹಿ ಮತ್ತು ಸೋನ್‌ಭದ್ರ ಜಿಲ್ಲೆಗಳಲ್ಲಿನ 54 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.

ವಾರಣಾಸಿ ಮತ್ತು ಅದರ ಪಕ್ಕದ ಜಿಲ್ಲೆಗಳಾದ ಬನಾರಸ್ ಸಿಟಿ ಸೌತ್, ಬನಾರಸ್ ಸಿಟಿ ನಾರ್ತ್, ಶಿವಪುರ, ಸೇವಾಪುರಿ, ಕಂಟೋನ್ಮೆಂಟ್, ಅಜ್ಗರ, ಪಿಂದ್ರಾ ಮತ್ತು ರೊಹನಿಯಾದ ಕ್ಷೇತ್ರಗಳು ಬಹುಕೋನ ಸ್ಪರ್ಧೆಗೆ ಸಾಕ್ಷಿಯಾಗಿವೆ.

ಕಳೆದ ಬಾರಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈ ಪ್ರದೇಶದಲ್ಲಿ ಮುನ್ನಡೆ ಸಾಧಿಸಿದ್ದವು. ಆರು ಸ್ಥಾನಗಳು ಬಿಜೆಪಿ ಪಾಲಾಗಿವೆ. ಉಳಿದ ಎರಡರಲ್ಲಿ ಬಿಜೆಪಿ ಮಿತ್ರ ಪಕ್ಷವಾದ ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ (ಎಸ್) ಒಂದು ಸ್ಥಾನ, ಈಗ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಪಾಲುದಾರರಾಗಿರುವ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಒಂದು ಸ್ಥಾನವನ್ನು ಗೆದ್ದಿವೆ.

ಐದು ಕ್ಷೇತ್ರಗಳು ಪ್ರಧಾನಿ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿ ವ್ಯಾಪ್ತಿಯಲ್ಲಿವೆ. ಕಳೆದ ಬಾರಿ ಬಿಜೆಪಿ ಗೆದ್ದಿದ್ದ ನೆರೆಯ ಮಿರ್ಜಾಪುರ ಮತ್ತು ಜೌನ್‌ಪುರದಲ್ಲೂ ಪ್ರಬಲ ಚುನಾವಣಾ ಸಮರ ಏರ್ಪಟ್ಟಿದೆ.

3 ಲಕ್ಷ ಮುಸ್ಲಿಮರಲ್ಲದೆ ವಾರಣಾಸಿಯಲ್ಲಿ 3.25 ಲಕ್ಷ ವೈಶ್ಯರು, ಸ್ಥಳೀಯವಾಗಿ ಒಬಿಸಿ ಕುರ್ಮಿ ​​2 ಲಕ್ಷ, ಯಾದವರು 1.5 ಲಕ್ಷ, ಠಾಕೂರ್ 1 ಲಕ್ಷ, ದಲಿತರು 80,000 ಮತ್ತು ಇತರ ಒಬಿಸಿ ಜಾತಿಗಳು 70,000 ಜನರಿದ್ದಾರೆ.

ಅಖಿಲೇಶ್ ಯಾದವ್ ಅವರ ಪಾಲುದಾರರಾದ ಅಪ್ನಾ ದಳ (ಕೆ), ರಾಜ್‌ಭರ್ ಅವರ ಎಸ್‌ಬಿಎಸ್‌ಪಿ ಮತ್ತು ಬಿಜೆಪಿ ಮಿತ್ರಪಕ್ಷಗಳಾದ ಅಪ್ನಾ ದಳ, ನಿಶಾದ್ ಪಕ್ಷಗಳ ನಡುವಿನ ಸಮರವೆಂದೇ ಕೊನೆಯ ಹಂತದ ಚುನಾವಣೆಯನ್ನು ನೋಡಲಾಗುತ್ತಿದೆ.

ಅಖಿಲೇಶ್ ಯಾದವ್ ಅವರು ವಾರಣಾಸಿ ಭಾಗದಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಎಸ್‌ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಇನ್ನುಳಿದ ಸ್ಥಾನಗಳನ್ನು ಇತರ ಮಿತ್ರಪಕ್ಷಗಳಾದ ಅಪ್ನಾ ದಳ, ಎಸ್‌ಬಿಎಸ್‌ಪಿಗೆ ಬಿಟ್ಟುಕೊಟ್ಟಿದ್ದಾರೆ.

ಬಿಜೆಪಿ ಏಳು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರೊಹಾನಿಯಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ನೇತೃತ್ವದ ಅಪ್ನಾ ದಳ (ಎಸ್) ಅಭ್ಯರ್ಥಿ ಸ್ಪರ್ಧಿಸಿದ್ದಾರೆ.

ಈ ಚುನಾವಣೆಯು ಸಮಾಜವಾದಿ ಪಕ್ಷದ ಮುಖ್ಯಸ್ಥರಿಗೆ ಪರೀಕ್ಷೆಯೊಡ್ಡಿದೆ. ಅಖಿಲೇಶ್‌ ಅವರ ಸಂಸದೀಯ ಕ್ಷೇತ್ರವಾದ ಅಜಂಗಢ್‌ಗೆ ಸಹ ಚುನಾವಣೆ ನಡೆಯುತ್ತಿದೆ. 2017ರಲ್ಲಿ ಬಿಜೆಪಿ ಪ್ರಚಂಡ ಬಹುಮತದ ನಡುವೆಯೂ ಈ ಪ್ರದೇಶವು ಎಸ್‌ಪಿಗೆ ನಿಷ್ಠವಾಗಿತ್ತು. ಜಿಲ್ಲೆಯ 10 ಸ್ಥಾನಗಳಲ್ಲಿ ಎಸ್‌ಪಿ ಐದರಲ್ಲಿ ಗೆದ್ದಿತ್ತು.

ಉತ್ತರ ಪ್ರದೇಶ ಮತ್ತು ಇತರ ನಾಲ್ಕು ರಾಜ್ಯಗಳ ಮತ ಎಣಿಕೆಯು ಮಾರ್ಚ್ 10 ರಂದು ನಡೆಯಲಿದೆ.

ಕೋವಿಡ್‌ ಬಿಕ್ಕಟ್ಟು ನಿರ್ವಹಣೆ: ಬಿಜೆಪಿಗೆ ಮುಳುವಾಗುವುದೇ?

ಮಾನವ ಹಕ್ಕುಗಳ ಸಂಸ್ಥೆಯಾದ ಸಿಟಿಜನ್‌ ಫಾರ್‌ ಜಸ್ಟೀಸ್‌ ಅಂಡ್‌ ಫೀಸ್‌ (ಸಿಜೆಪಿ) ಹಾಗೂ ಸ್ವತಂತ್ರ ತಜ್ಞರು ಸಂಗ್ರಹಿಸಿ, ವಿಶ್ಲೇಷಿಸಿದ ದತ್ತಾಂಶಗಳು ಮಹತ್ವದ ಸಂಗತಿಯೊಂದನ್ನು ಇತ್ತೀಚೆಗೆ ಬಿಚ್ಚಿಟ್ಟಿತ್ತು. ಪ್ರಧಾನಿ ನರೇಂದ್ರ ಮೋದಿಯವರ ತವರು ಜಿಲ್ಲೆಯಾದ ವಾರಣಾಸಿಯನ್ನು ಹೊಂದಿರುವ ಪೂರ್ವ ಉತ್ತರ ಪ್ರದೇಶದ ಪೂರ್ವಂಚಲ ಭಾಗದಲ್ಲಿ ಅತಿಹೆಚ್ಚಿನ ಜನರು ಕೋವಿಡ್ ಸಾಂಕ್ರಾಮಿಕದ ವೇಳೆ ಸಾವಿಗೀಡಾಗಿದ್ದಾರೆ ಎಂದು ವರದಿ ವಿಶ್ಲೇಷಿಸಿತ್ತು.

ಸಮೀಕ್ಷೆ ನಡೆಸಿದ ಪ್ರದೇಶದ ಅಂಕಿ ಅಂಶಗಳು ಹೇಳುವುದೇನೆಂದರೆ “ಜನವರಿ 2020ರಿಂದ ಆಗಸ್ಟ್‌ 2021ರವರೆಗೆ ದಾಖಲಾದ ಸಾವಿನ ಪ್ರಮಾಣವು 2019ರ ದಾಖಲೆಗೆ ಹೋಲಿಕೆ ಮಾಡಿದರೆ ಶೇ. 60ರಷ್ಟು ಹೆಚ್ಚಾಗಿದೆ”. ಇದು ಸರ್ಕಾರಿ ದಾಖಲೆಗಳನ್ನು ಆಧರಿಸಿ ಮಾಡಿದ ವರದಿಯಾಗಿದೆ ಎಂದು ಸಿಜೆಪಿ ಹೇಳಿತ್ತು. ಈ ಎಲ್ಲ ಅಂಶಗಳು ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ?- ಮಾರ್ಚ್ 10ರವರೆಗೆ ಕಾಯಬೇಕಷ್ಟೇ.


ಉತ್ತರ ಪ್ರದೇಶ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...