Homeಕರ್ನಾಟಕಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

ಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದಲ್ಲಿ 7 ಹಂತದ ಮಹಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು, 54 ಕ್ಷೇತ್ರಗಳಲ್ಲಿ ಮತದಾನ ನಡೆಯತ್ತಿದೆ. ಈ ಸುತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿಯತ್ತ ಎಲ್ಲರ ಕಣ್ಣು ನೆಟ್ಟಿದೆ.

ಅಜಂಗಢ, ಮೌ, ಜೌನ್‌ಪುರ್, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ, ಭದೋಹಿ ಮತ್ತು ಸೋನ್‌ಭದ್ರ ಜಿಲ್ಲೆಗಳಲ್ಲಿನ 54 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.

ವಾರಣಾಸಿ ಮತ್ತು ಅದರ ಪಕ್ಕದ ಜಿಲ್ಲೆಗಳಾದ ಬನಾರಸ್ ಸಿಟಿ ಸೌತ್, ಬನಾರಸ್ ಸಿಟಿ ನಾರ್ತ್, ಶಿವಪುರ, ಸೇವಾಪುರಿ, ಕಂಟೋನ್ಮೆಂಟ್, ಅಜ್ಗರ, ಪಿಂದ್ರಾ ಮತ್ತು ರೊಹನಿಯಾದ ಕ್ಷೇತ್ರಗಳು ಬಹುಕೋನ ಸ್ಪರ್ಧೆಗೆ ಸಾಕ್ಷಿಯಾಗಿವೆ.

ಕಳೆದ ಬಾರಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈ ಪ್ರದೇಶದಲ್ಲಿ ಮುನ್ನಡೆ ಸಾಧಿಸಿದ್ದವು. ಆರು ಸ್ಥಾನಗಳು ಬಿಜೆಪಿ ಪಾಲಾಗಿವೆ. ಉಳಿದ ಎರಡರಲ್ಲಿ ಬಿಜೆಪಿ ಮಿತ್ರ ಪಕ್ಷವಾದ ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ (ಎಸ್) ಒಂದು ಸ್ಥಾನ, ಈಗ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಪಾಲುದಾರರಾಗಿರುವ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಒಂದು ಸ್ಥಾನವನ್ನು ಗೆದ್ದಿವೆ.

ಐದು ಕ್ಷೇತ್ರಗಳು ಪ್ರಧಾನಿ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿ ವ್ಯಾಪ್ತಿಯಲ್ಲಿವೆ. ಕಳೆದ ಬಾರಿ ಬಿಜೆಪಿ ಗೆದ್ದಿದ್ದ ನೆರೆಯ ಮಿರ್ಜಾಪುರ ಮತ್ತು ಜೌನ್‌ಪುರದಲ್ಲೂ ಪ್ರಬಲ ಚುನಾವಣಾ ಸಮರ ಏರ್ಪಟ್ಟಿದೆ.

3 ಲಕ್ಷ ಮುಸ್ಲಿಮರಲ್ಲದೆ ವಾರಣಾಸಿಯಲ್ಲಿ 3.25 ಲಕ್ಷ ವೈಶ್ಯರು, ಸ್ಥಳೀಯವಾಗಿ ಒಬಿಸಿ ಕುರ್ಮಿ ​​2 ಲಕ್ಷ, ಯಾದವರು 1.5 ಲಕ್ಷ, ಠಾಕೂರ್ 1 ಲಕ್ಷ, ದಲಿತರು 80,000 ಮತ್ತು ಇತರ ಒಬಿಸಿ ಜಾತಿಗಳು 70,000 ಜನರಿದ್ದಾರೆ.

ಅಖಿಲೇಶ್ ಯಾದವ್ ಅವರ ಪಾಲುದಾರರಾದ ಅಪ್ನಾ ದಳ (ಕೆ), ರಾಜ್‌ಭರ್ ಅವರ ಎಸ್‌ಬಿಎಸ್‌ಪಿ ಮತ್ತು ಬಿಜೆಪಿ ಮಿತ್ರಪಕ್ಷಗಳಾದ ಅಪ್ನಾ ದಳ, ನಿಶಾದ್ ಪಕ್ಷಗಳ ನಡುವಿನ ಸಮರವೆಂದೇ ಕೊನೆಯ ಹಂತದ ಚುನಾವಣೆಯನ್ನು ನೋಡಲಾಗುತ್ತಿದೆ.

ಅಖಿಲೇಶ್ ಯಾದವ್ ಅವರು ವಾರಣಾಸಿ ಭಾಗದಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಎಸ್‌ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಇನ್ನುಳಿದ ಸ್ಥಾನಗಳನ್ನು ಇತರ ಮಿತ್ರಪಕ್ಷಗಳಾದ ಅಪ್ನಾ ದಳ, ಎಸ್‌ಬಿಎಸ್‌ಪಿಗೆ ಬಿಟ್ಟುಕೊಟ್ಟಿದ್ದಾರೆ.

ಬಿಜೆಪಿ ಏಳು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರೊಹಾನಿಯಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ನೇತೃತ್ವದ ಅಪ್ನಾ ದಳ (ಎಸ್) ಅಭ್ಯರ್ಥಿ ಸ್ಪರ್ಧಿಸಿದ್ದಾರೆ.

ಈ ಚುನಾವಣೆಯು ಸಮಾಜವಾದಿ ಪಕ್ಷದ ಮುಖ್ಯಸ್ಥರಿಗೆ ಪರೀಕ್ಷೆಯೊಡ್ಡಿದೆ. ಅಖಿಲೇಶ್‌ ಅವರ ಸಂಸದೀಯ ಕ್ಷೇತ್ರವಾದ ಅಜಂಗಢ್‌ಗೆ ಸಹ ಚುನಾವಣೆ ನಡೆಯುತ್ತಿದೆ. 2017ರಲ್ಲಿ ಬಿಜೆಪಿ ಪ್ರಚಂಡ ಬಹುಮತದ ನಡುವೆಯೂ ಈ ಪ್ರದೇಶವು ಎಸ್‌ಪಿಗೆ ನಿಷ್ಠವಾಗಿತ್ತು. ಜಿಲ್ಲೆಯ 10 ಸ್ಥಾನಗಳಲ್ಲಿ ಎಸ್‌ಪಿ ಐದರಲ್ಲಿ ಗೆದ್ದಿತ್ತು.

ಉತ್ತರ ಪ್ರದೇಶ ಮತ್ತು ಇತರ ನಾಲ್ಕು ರಾಜ್ಯಗಳ ಮತ ಎಣಿಕೆಯು ಮಾರ್ಚ್ 10 ರಂದು ನಡೆಯಲಿದೆ.

ಕೋವಿಡ್‌ ಬಿಕ್ಕಟ್ಟು ನಿರ್ವಹಣೆ: ಬಿಜೆಪಿಗೆ ಮುಳುವಾಗುವುದೇ?

ಮಾನವ ಹಕ್ಕುಗಳ ಸಂಸ್ಥೆಯಾದ ಸಿಟಿಜನ್‌ ಫಾರ್‌ ಜಸ್ಟೀಸ್‌ ಅಂಡ್‌ ಫೀಸ್‌ (ಸಿಜೆಪಿ) ಹಾಗೂ ಸ್ವತಂತ್ರ ತಜ್ಞರು ಸಂಗ್ರಹಿಸಿ, ವಿಶ್ಲೇಷಿಸಿದ ದತ್ತಾಂಶಗಳು ಮಹತ್ವದ ಸಂಗತಿಯೊಂದನ್ನು ಇತ್ತೀಚೆಗೆ ಬಿಚ್ಚಿಟ್ಟಿತ್ತು. ಪ್ರಧಾನಿ ನರೇಂದ್ರ ಮೋದಿಯವರ ತವರು ಜಿಲ್ಲೆಯಾದ ವಾರಣಾಸಿಯನ್ನು ಹೊಂದಿರುವ ಪೂರ್ವ ಉತ್ತರ ಪ್ರದೇಶದ ಪೂರ್ವಂಚಲ ಭಾಗದಲ್ಲಿ ಅತಿಹೆಚ್ಚಿನ ಜನರು ಕೋವಿಡ್ ಸಾಂಕ್ರಾಮಿಕದ ವೇಳೆ ಸಾವಿಗೀಡಾಗಿದ್ದಾರೆ ಎಂದು ವರದಿ ವಿಶ್ಲೇಷಿಸಿತ್ತು.

ಸಮೀಕ್ಷೆ ನಡೆಸಿದ ಪ್ರದೇಶದ ಅಂಕಿ ಅಂಶಗಳು ಹೇಳುವುದೇನೆಂದರೆ “ಜನವರಿ 2020ರಿಂದ ಆಗಸ್ಟ್‌ 2021ರವರೆಗೆ ದಾಖಲಾದ ಸಾವಿನ ಪ್ರಮಾಣವು 2019ರ ದಾಖಲೆಗೆ ಹೋಲಿಕೆ ಮಾಡಿದರೆ ಶೇ. 60ರಷ್ಟು ಹೆಚ್ಚಾಗಿದೆ”. ಇದು ಸರ್ಕಾರಿ ದಾಖಲೆಗಳನ್ನು ಆಧರಿಸಿ ಮಾಡಿದ ವರದಿಯಾಗಿದೆ ಎಂದು ಸಿಜೆಪಿ ಹೇಳಿತ್ತು. ಈ ಎಲ್ಲ ಅಂಶಗಳು ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ?- ಮಾರ್ಚ್ 10ರವರೆಗೆ ಕಾಯಬೇಕಷ್ಟೇ.


ಉತ್ತರ ಪ್ರದೇಶ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...